ಪಟಾಕಿ ಸ್ಫೋಟ ಬಾಲಕ ಸಾವು ಪ್ರಕರಣ: ಓ ವಿಧಿಯೇ ನೀನೆಷ್ಟು ಕ್ರೂರಿ…? ಜವರಾಯನ ಅಟ್ಟಹಾಸಕ್ಕೆ ಇಬ್ಬರ ಗಂಡು ಮಕ್ಕಳನ್ನ ಕಳೆದುಕೊಂಡು ತಬ್ಬಲಿಗಳಾದ ಪೋಷಕರು: ಮೊದಲ ಮಗ ನೀರಿನಲ್ಲಿ ಮುಳುಗಿ ಸಾವು, ಎರಡನೇ ಮಗ ಪಟಾಕಿ ಸಿಡಿದು ಸಾವು: ಶೋಕಸಾಗರದಲ್ಲಿ ತಂದೆ-ತಾಯಿ

ಇವರದ್ದು ಆರತಿಗೊಬ್ಬ ಕೀರ್ತಿಗೊಬ್ಬ ಎಂಬಂತೆ‌ ಇಬ್ಬರು ಮಕ್ಕಳನ್ನು ಪಡೆದಿದ್ದ ಕುಟುಂಬ. ತಂದೆ ಶ್ರೀನಿವಾಸ ರಾವ್ ಪತ್ನಿ ವೆಂಕೂಬಾಯಿ ಮಕ್ಕಳಿಗೆ ಉತ್ತಮ ವಿದ್ಯಾಬ್ಯಾಸ ಕೊಡಿಸಿ ಚೆನ್ನಾಗಿ ಸಾಕಿ ಸಲುಹಿ, ಎದೆ ಎತ್ತರಕ್ಕೆ ಬೆಳೆಸಿದ್ದರು. ಎಸ್ಎಸ್ಎಲ್ಎಸಿ ಓದಿ ಮುಂದೆ ಉತ್ತಮ ಶಿಕ್ಷಣ ಪಡೆಯುವ ದಾರಿಯಲ್ಲಿದ್ದ ವಿದ್ಯಾರ್ಥಿಗಳ ವಿಧಿಯಾಟದ ಲಿಖಿತವೇ ಬೇರೆಯಾಗಿ, ತಂದೆ ತಾಯಿಯ ಕನಸುಗಳು ನುಚ್ಚು ನೂರಾಗಿದೆ. ಮೊದಲ ಮಗ ಗಗನ್ ದುರಾದೃಷ್ಟವಾಶಾತ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರೆ, ಎರಡನೇ ಮಗ ಧನುಷ್ ರಾವ್ ಪಟಾಕಿ ಸಿಡಿದು ಕೊನೆಯುಸಿರೆಳೆದಿದ್ದಾನೆ.

ಹೌದು ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಪವರ್ ಲಿಫ್ಟರ್ ವಾಹನದ ಇಂಜಿನ್ ಮೇಲೆ ಇಟ್ಟಿದ್ದ ಪಟಾಕಿಗಳು ಸಿಡಿದು ಸಾವನ್ನಪ್ಪಿದ ಮುತ್ತೂರಿನ ಬಾಲಕ ಧನುಷ್ ರಾವ್ ತಂದೆ ತಾಯಿಯ ದುಃಖವನ್ನು ದೇವರ ಬಲ್ಲ.

ತಂದೆ ಶ್ರೀನಿವಾಸರಾವ್ ಪ್ರತಿದಿನ ಕೂಲಿ ಕೆಲಸ ಮಾಡಿ, ತಾಯಿ ವೆಂಕೂಬಾಯಿ ಗಾರ್ಮೆಂಟ್ಸ್ ನಲ್ಲಿ ದುಡಿದು ಎದೆ ಎತ್ತರಕ್ಕೆ ಬೆಳದ ಮಕ್ಕಳನ್ನ ವಿಧಿಯಾಟದಲ್ಲಿ ಕಳೆದುಕೊಂಡಿದ್ದಾರೆ.

ಇಬ್ಬರು ಗಂಡು ಮಕ್ಕಳಿದ್ದ ಸುಂದರ ಕುಟುಂಬದಲ್ಲಿ ವಿಧಿಯಾಟಗಳು ಜೀವನದ ಸಂತೋಷವನ್ನೆ ಕಸಿದುಕೊಂಡಿವೆ. ಶ್ರೀನಿವಾಸ ದಂಪತಿಗೆ ಇಬ್ಬರು ಗಂಡು ಮಕ್ಕಳು ಮೊದಲ ಮಗ ಗಗನ್ ಕಳೆದ ವರ್ಷ ಕೆರೆಯಲ್ಲಿ ಆಟ ಆಡುವಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಎಸ್ಎಸ್ಎಲ್ ಸಿ ಓದುತ್ತಿದ್ದ ಹುಡುಗನ ಕಳೆದುಕೊಂಡು ನೋವಿನಲ್ಲಿದ್ದ ಕುಂಟಬಕ್ಕೆ ಈ ವರ್ಷ ಗಣೇಶ ಹಬ್ಬ ಮತ್ತೊಂದು ಆಘಾತವನ್ನ ತಂದೊಡ್ಡಿದೆ.

ಮನೆಯ ಬಳಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ಮೂರು ದಿನಗಳ ವಿಸರ್ಜನಾ ಮೆರವಣಿಗೆಯಲ್ಲಿ ಖುಷಿಯಿಂದ ಕುಣಿದು ಕುಪ್ಪಳಿಸುತ್ತಿದ್ದ ಸಂತೋಷದಿಂದ್ದ ಎರಡನೇ ಮಗ ಧನುಶ್ ರಾವ್ ಮೇಲೆ ಪಟಾಕಿ ಸಿಡಿದು ಬಾರದ ಲೋಕಕ್ಕೆ ಹೋಗಿದ್ದಾನೆ.

ಮಗನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದ ತಾಯಿ:

ಎರಡನೇ ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆ ತಾಯಿ ವೆಂಕೂಬಾಯಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ ಚೇತರಿಕೆ ಕಂಡಿದ್ದಾರೆ. ಕುಟುಂಬಸ್ಥರ ನೋವು ಹೇಳತೀರದ್ದಾಗಿತ್ತು.

ಒಟ್ಟಿನಲ್ಲಿ ಯಾರೋ ಮಾಡಿದ ತಪ್ಪಿನಿಂದಾಗಿ ಮತ್ಯಾರೋ ಅಮಾಯಕ ಮುಗ್ಧ ಜೀವಗಳ ಬಲಿಯಾಗಿವೆ. ವಿಧಿ ಎಷ್ಟು ಕ್ರೂರಿ ಎಂದರೆ…..ಪಾಪ ಆ ಪೋಷಕರಿಗೆ ಎಂದೆಂದಿಗೂ ಮರೆಯಲಾರದ ದುಃಖವನ್ನು ತಂದೊಡ್ಡಿದೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

25 minutes ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 hour ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

2 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

3 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

10 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago