ಪಟಾಕಿ ಸ್ಫೋಟ ಬಾಲಕ ಸಾವು ಪ್ರಕರಣ: ಓ ವಿಧಿಯೇ ನೀನೆಷ್ಟು ಕ್ರೂರಿ…? ಜವರಾಯನ ಅಟ್ಟಹಾಸಕ್ಕೆ ಇಬ್ಬರ ಗಂಡು ಮಕ್ಕಳನ್ನ ಕಳೆದುಕೊಂಡು ತಬ್ಬಲಿಗಳಾದ ಪೋಷಕರು: ಮೊದಲ ಮಗ ನೀರಿನಲ್ಲಿ ಮುಳುಗಿ ಸಾವು, ಎರಡನೇ ಮಗ ಪಟಾಕಿ ಸಿಡಿದು ಸಾವು: ಶೋಕಸಾಗರದಲ್ಲಿ ತಂದೆ-ತಾಯಿ

ಇವರದ್ದು ಆರತಿಗೊಬ್ಬ ಕೀರ್ತಿಗೊಬ್ಬ ಎಂಬಂತೆ‌ ಇಬ್ಬರು ಮಕ್ಕಳನ್ನು ಪಡೆದಿದ್ದ ಕುಟುಂಬ. ತಂದೆ ಶ್ರೀನಿವಾಸ ರಾವ್ ಪತ್ನಿ ವೆಂಕೂಬಾಯಿ ಮಕ್ಕಳಿಗೆ ಉತ್ತಮ ವಿದ್ಯಾಬ್ಯಾಸ ಕೊಡಿಸಿ ಚೆನ್ನಾಗಿ ಸಾಕಿ ಸಲುಹಿ, ಎದೆ ಎತ್ತರಕ್ಕೆ ಬೆಳೆಸಿದ್ದರು. ಎಸ್ಎಸ್ಎಲ್ಎಸಿ ಓದಿ ಮುಂದೆ ಉತ್ತಮ ಶಿಕ್ಷಣ ಪಡೆಯುವ ದಾರಿಯಲ್ಲಿದ್ದ ವಿದ್ಯಾರ್ಥಿಗಳ ವಿಧಿಯಾಟದ ಲಿಖಿತವೇ ಬೇರೆಯಾಗಿ, ತಂದೆ ತಾಯಿಯ ಕನಸುಗಳು ನುಚ್ಚು ನೂರಾಗಿದೆ. ಮೊದಲ ಮಗ ಗಗನ್ ದುರಾದೃಷ್ಟವಾಶಾತ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರೆ, ಎರಡನೇ ಮಗ ಧನುಷ್ ರಾವ್ ಪಟಾಕಿ ಸಿಡಿದು ಕೊನೆಯುಸಿರೆಳೆದಿದ್ದಾನೆ.

ಹೌದು ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಪವರ್ ಲಿಫ್ಟರ್ ವಾಹನದ ಇಂಜಿನ್ ಮೇಲೆ ಇಟ್ಟಿದ್ದ ಪಟಾಕಿಗಳು ಸಿಡಿದು ಸಾವನ್ನಪ್ಪಿದ ಮುತ್ತೂರಿನ ಬಾಲಕ ಧನುಷ್ ರಾವ್ ತಂದೆ ತಾಯಿಯ ದುಃಖವನ್ನು ದೇವರ ಬಲ್ಲ.

ತಂದೆ ಶ್ರೀನಿವಾಸರಾವ್ ಪ್ರತಿದಿನ ಕೂಲಿ ಕೆಲಸ ಮಾಡಿ, ತಾಯಿ ವೆಂಕೂಬಾಯಿ ಗಾರ್ಮೆಂಟ್ಸ್ ನಲ್ಲಿ ದುಡಿದು ಎದೆ ಎತ್ತರಕ್ಕೆ ಬೆಳದ ಮಕ್ಕಳನ್ನ ವಿಧಿಯಾಟದಲ್ಲಿ ಕಳೆದುಕೊಂಡಿದ್ದಾರೆ.

ಇಬ್ಬರು ಗಂಡು ಮಕ್ಕಳಿದ್ದ ಸುಂದರ ಕುಟುಂಬದಲ್ಲಿ ವಿಧಿಯಾಟಗಳು ಜೀವನದ ಸಂತೋಷವನ್ನೆ ಕಸಿದುಕೊಂಡಿವೆ. ಶ್ರೀನಿವಾಸ ದಂಪತಿಗೆ ಇಬ್ಬರು ಗಂಡು ಮಕ್ಕಳು ಮೊದಲ ಮಗ ಗಗನ್ ಕಳೆದ ವರ್ಷ ಕೆರೆಯಲ್ಲಿ ಆಟ ಆಡುವಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಎಸ್ಎಸ್ಎಲ್ ಸಿ ಓದುತ್ತಿದ್ದ ಹುಡುಗನ ಕಳೆದುಕೊಂಡು ನೋವಿನಲ್ಲಿದ್ದ ಕುಂಟಬಕ್ಕೆ ಈ ವರ್ಷ ಗಣೇಶ ಹಬ್ಬ ಮತ್ತೊಂದು ಆಘಾತವನ್ನ ತಂದೊಡ್ಡಿದೆ.

ಮನೆಯ ಬಳಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ಮೂರು ದಿನಗಳ ವಿಸರ್ಜನಾ ಮೆರವಣಿಗೆಯಲ್ಲಿ ಖುಷಿಯಿಂದ ಕುಣಿದು ಕುಪ್ಪಳಿಸುತ್ತಿದ್ದ ಸಂತೋಷದಿಂದ್ದ ಎರಡನೇ ಮಗ ಧನುಶ್ ರಾವ್ ಮೇಲೆ ಪಟಾಕಿ ಸಿಡಿದು ಬಾರದ ಲೋಕಕ್ಕೆ ಹೋಗಿದ್ದಾನೆ.

ಮಗನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದ ತಾಯಿ:

ಎರಡನೇ ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆ ತಾಯಿ ವೆಂಕೂಬಾಯಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ ಚೇತರಿಕೆ ಕಂಡಿದ್ದಾರೆ. ಕುಟುಂಬಸ್ಥರ ನೋವು ಹೇಳತೀರದ್ದಾಗಿತ್ತು.

ಒಟ್ಟಿನಲ್ಲಿ ಯಾರೋ ಮಾಡಿದ ತಪ್ಪಿನಿಂದಾಗಿ ಮತ್ಯಾರೋ ಅಮಾಯಕ ಮುಗ್ಧ ಜೀವಗಳ ಬಲಿಯಾಗಿವೆ. ವಿಧಿ ಎಷ್ಟು ಕ್ರೂರಿ ಎಂದರೆ…..ಪಾಪ ಆ ಪೋಷಕರಿಗೆ ಎಂದೆಂದಿಗೂ ಮರೆಯಲಾರದ ದುಃಖವನ್ನು ತಂದೊಡ್ಡಿದೆ.

Ramesh Babu

Journalist

Recent Posts

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

26 minutes ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

3 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

18 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

23 hours ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

2 days ago