ಪಟಾಕಿ ಸ್ಫೋಟ ಬಾಲಕ ಸಾವು ಪ್ರಕರಣ: ಓ ವಿಧಿಯೇ ನೀನೆಷ್ಟು ಕ್ರೂರಿ…? ಜವರಾಯನ ಅಟ್ಟಹಾಸಕ್ಕೆ ಇಬ್ಬರ ಗಂಡು ಮಕ್ಕಳನ್ನ ಕಳೆದುಕೊಂಡು ತಬ್ಬಲಿಗಳಾದ ಪೋಷಕರು: ಮೊದಲ ಮಗ ನೀರಿನಲ್ಲಿ ಮುಳುಗಿ ಸಾವು, ಎರಡನೇ ಮಗ ಪಟಾಕಿ ಸಿಡಿದು ಸಾವು: ಶೋಕಸಾಗರದಲ್ಲಿ ತಂದೆ-ತಾಯಿ

ಇವರದ್ದು ಆರತಿಗೊಬ್ಬ ಕೀರ್ತಿಗೊಬ್ಬ ಎಂಬಂತೆ‌ ಇಬ್ಬರು ಮಕ್ಕಳನ್ನು ಪಡೆದಿದ್ದ ಕುಟುಂಬ. ತಂದೆ ಶ್ರೀನಿವಾಸ ರಾವ್ ಪತ್ನಿ ವೆಂಕೂಬಾಯಿ ಮಕ್ಕಳಿಗೆ ಉತ್ತಮ ವಿದ್ಯಾಬ್ಯಾಸ ಕೊಡಿಸಿ ಚೆನ್ನಾಗಿ ಸಾಕಿ ಸಲುಹಿ, ಎದೆ ಎತ್ತರಕ್ಕೆ ಬೆಳೆಸಿದ್ದರು. ಎಸ್ಎಸ್ಎಲ್ಎಸಿ ಓದಿ ಮುಂದೆ ಉತ್ತಮ ಶಿಕ್ಷಣ ಪಡೆಯುವ ದಾರಿಯಲ್ಲಿದ್ದ ವಿದ್ಯಾರ್ಥಿಗಳ ವಿಧಿಯಾಟದ ಲಿಖಿತವೇ ಬೇರೆಯಾಗಿ, ತಂದೆ ತಾಯಿಯ ಕನಸುಗಳು ನುಚ್ಚು ನೂರಾಗಿದೆ. ಮೊದಲ ಮಗ ಗಗನ್ ದುರಾದೃಷ್ಟವಾಶಾತ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರೆ, ಎರಡನೇ ಮಗ ಧನುಷ್ ರಾವ್ ಪಟಾಕಿ ಸಿಡಿದು ಕೊನೆಯುಸಿರೆಳೆದಿದ್ದಾನೆ.

ಹೌದು ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಪವರ್ ಲಿಫ್ಟರ್ ವಾಹನದ ಇಂಜಿನ್ ಮೇಲೆ ಇಟ್ಟಿದ್ದ ಪಟಾಕಿಗಳು ಸಿಡಿದು ಸಾವನ್ನಪ್ಪಿದ ಮುತ್ತೂರಿನ ಬಾಲಕ ಧನುಷ್ ರಾವ್ ತಂದೆ ತಾಯಿಯ ದುಃಖವನ್ನು ದೇವರ ಬಲ್ಲ.

ತಂದೆ ಶ್ರೀನಿವಾಸರಾವ್ ಪ್ರತಿದಿನ ಕೂಲಿ ಕೆಲಸ ಮಾಡಿ, ತಾಯಿ ವೆಂಕೂಬಾಯಿ ಗಾರ್ಮೆಂಟ್ಸ್ ನಲ್ಲಿ ದುಡಿದು ಎದೆ ಎತ್ತರಕ್ಕೆ ಬೆಳದ ಮಕ್ಕಳನ್ನ ವಿಧಿಯಾಟದಲ್ಲಿ ಕಳೆದುಕೊಂಡಿದ್ದಾರೆ.

ಇಬ್ಬರು ಗಂಡು ಮಕ್ಕಳಿದ್ದ ಸುಂದರ ಕುಟುಂಬದಲ್ಲಿ ವಿಧಿಯಾಟಗಳು ಜೀವನದ ಸಂತೋಷವನ್ನೆ ಕಸಿದುಕೊಂಡಿವೆ. ಶ್ರೀನಿವಾಸ ದಂಪತಿಗೆ ಇಬ್ಬರು ಗಂಡು ಮಕ್ಕಳು ಮೊದಲ ಮಗ ಗಗನ್ ಕಳೆದ ವರ್ಷ ಕೆರೆಯಲ್ಲಿ ಆಟ ಆಡುವಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಎಸ್ಎಸ್ಎಲ್ ಸಿ ಓದುತ್ತಿದ್ದ ಹುಡುಗನ ಕಳೆದುಕೊಂಡು ನೋವಿನಲ್ಲಿದ್ದ ಕುಂಟಬಕ್ಕೆ ಈ ವರ್ಷ ಗಣೇಶ ಹಬ್ಬ ಮತ್ತೊಂದು ಆಘಾತವನ್ನ ತಂದೊಡ್ಡಿದೆ.

ಮನೆಯ ಬಳಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ಮೂರು ದಿನಗಳ ವಿಸರ್ಜನಾ ಮೆರವಣಿಗೆಯಲ್ಲಿ ಖುಷಿಯಿಂದ ಕುಣಿದು ಕುಪ್ಪಳಿಸುತ್ತಿದ್ದ ಸಂತೋಷದಿಂದ್ದ ಎರಡನೇ ಮಗ ಧನುಶ್ ರಾವ್ ಮೇಲೆ ಪಟಾಕಿ ಸಿಡಿದು ಬಾರದ ಲೋಕಕ್ಕೆ ಹೋಗಿದ್ದಾನೆ.

ಮಗನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದ ತಾಯಿ:

ಎರಡನೇ ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆ ತಾಯಿ ವೆಂಕೂಬಾಯಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ ಚೇತರಿಕೆ ಕಂಡಿದ್ದಾರೆ. ಕುಟುಂಬಸ್ಥರ ನೋವು ಹೇಳತೀರದ್ದಾಗಿತ್ತು.

ಒಟ್ಟಿನಲ್ಲಿ ಯಾರೋ ಮಾಡಿದ ತಪ್ಪಿನಿಂದಾಗಿ ಮತ್ಯಾರೋ ಅಮಾಯಕ ಮುಗ್ಧ ಜೀವಗಳ ಬಲಿಯಾಗಿವೆ. ವಿಧಿ ಎಷ್ಟು ಕ್ರೂರಿ ಎಂದರೆ…..ಪಾಪ ಆ ಪೋಷಕರಿಗೆ ಎಂದೆಂದಿಗೂ ಮರೆಯಲಾರದ ದುಃಖವನ್ನು ತಂದೊಡ್ಡಿದೆ.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

16 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago