‘ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಸಮಯ ಮೀಸಲಿಡಿ’-ಜೆ. ರಾಜೇಂದ್ರ

ದೊಡ್ಡಬಳ್ಳಾಪುರ: ಯುವಕರು ಪಠ್ಯದ ಜೊತೆಗೆ ಪಠ್ಯೇತರ ಚಟುಟಿಕೆಗಳಾದ ಕ್ರೀಡೆ, ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಕಲಿಕೆಗೂ ಸ್ವಲ್ಪ ಸಮಯ ಮೀಸಲಿಡಿ ಎಂದು ಶ್ರೀ ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಜೆ. ರಾಜೇಂದ್ರ ಹೇಳಿದರು.

ನಗರದ ಶ್ರೀ ದೇವರಾಜ ಅರಸ್ ಅಂತಾರಾಷ್ಟ್ರೀಯ ವಸತಿ ಪ್ರೌಢಶಾಲಾ ವಿಭಾಗದಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ, ಶಿಕ್ಷಣವನ್ನು ಅಳೆಯುವ ಕಾಲ ಬದಲಾಗಿದೆ. ಆಧುನಿಕ ಕಾಲದಲ್ಲಿ ಯುವಕರ ಶಿಕ್ಷಣ ಮಟ್ಟವನ್ನು ನಿರ್ಧರಿಸುವುದು ಕೌಶಲ್ಯ, ಸಾಮಾನ್ಯ ಜ್ಞಾನಗಳ ಮೇಲೆ, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸುಲಭವಾಗಿ ಸ್ಪರ್ಧಿಸಲು ಕೌಶಲ್ಯಗಳು ಬಹಳ ಮುಖ್ಯ ಎಂದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಜಿಯಾವುಲ್ಲಾಖಾನ್ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯಾವುದಕ್ಕೂ ಹಿಂಜರಿಯದೆ ಸಾಧನೆಗೆ ವಿದ್ಯಾರ್ಥಿಗಳು ಹೆಚ್ಚು ಶ್ರಮವಹಿಸಬೇಕು ಶಾಲೆಯಲ್ಲಿ ವಿದ್ಯಾಭ್ಯಾಸಕ್ಕೆ ಮತ್ತು ಸಾಧನೆಗೆ ಎಲ್ಲಾ ತರಹದ ಸಹಕಾರವಿದ್ದು, ವಿದ್ಯಾರ್ಥಿಗಳು  ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಂ ಚಿಕ್ಕಣ್ಣ, ಶ್ರೀ ದೇವರಾಜ ಅರಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಾಂತೇಶಪ್ಪ,, ದೈಹಿಕ ಶಿಕ್ಷಣ ನಿರ್ದೇಶಕರಾದ ವಿ ಶ್ರೀನಿವಾಸ್, ಶಿಕ್ಷಕರಾದ ವಿಜಯಕುಮಾರ್, ಮಹಮ್ಮದ್ ಕೈಸರ್ ಪಾಷಾ, ದೇವರಾಜ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

3 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

10 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

13 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago