‘ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಸಮಯ ಮೀಸಲಿಡಿ’-ಜೆ. ರಾಜೇಂದ್ರ

ದೊಡ್ಡಬಳ್ಳಾಪುರ: ಯುವಕರು ಪಠ್ಯದ ಜೊತೆಗೆ ಪಠ್ಯೇತರ ಚಟುಟಿಕೆಗಳಾದ ಕ್ರೀಡೆ, ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಕಲಿಕೆಗೂ ಸ್ವಲ್ಪ ಸಮಯ ಮೀಸಲಿಡಿ ಎಂದು ಶ್ರೀ ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಜೆ. ರಾಜೇಂದ್ರ ಹೇಳಿದರು.

ನಗರದ ಶ್ರೀ ದೇವರಾಜ ಅರಸ್ ಅಂತಾರಾಷ್ಟ್ರೀಯ ವಸತಿ ಪ್ರೌಢಶಾಲಾ ವಿಭಾಗದಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ, ಶಿಕ್ಷಣವನ್ನು ಅಳೆಯುವ ಕಾಲ ಬದಲಾಗಿದೆ. ಆಧುನಿಕ ಕಾಲದಲ್ಲಿ ಯುವಕರ ಶಿಕ್ಷಣ ಮಟ್ಟವನ್ನು ನಿರ್ಧರಿಸುವುದು ಕೌಶಲ್ಯ, ಸಾಮಾನ್ಯ ಜ್ಞಾನಗಳ ಮೇಲೆ, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸುಲಭವಾಗಿ ಸ್ಪರ್ಧಿಸಲು ಕೌಶಲ್ಯಗಳು ಬಹಳ ಮುಖ್ಯ ಎಂದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಜಿಯಾವುಲ್ಲಾಖಾನ್ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯಾವುದಕ್ಕೂ ಹಿಂಜರಿಯದೆ ಸಾಧನೆಗೆ ವಿದ್ಯಾರ್ಥಿಗಳು ಹೆಚ್ಚು ಶ್ರಮವಹಿಸಬೇಕು ಶಾಲೆಯಲ್ಲಿ ವಿದ್ಯಾಭ್ಯಾಸಕ್ಕೆ ಮತ್ತು ಸಾಧನೆಗೆ ಎಲ್ಲಾ ತರಹದ ಸಹಕಾರವಿದ್ದು, ವಿದ್ಯಾರ್ಥಿಗಳು  ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಂ ಚಿಕ್ಕಣ್ಣ, ಶ್ರೀ ದೇವರಾಜ ಅರಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಾಂತೇಶಪ್ಪ,, ದೈಹಿಕ ಶಿಕ್ಷಣ ನಿರ್ದೇಶಕರಾದ ವಿ ಶ್ರೀನಿವಾಸ್, ಶಿಕ್ಷಕರಾದ ವಿಜಯಕುಮಾರ್, ಮಹಮ್ಮದ್ ಕೈಸರ್ ಪಾಷಾ, ದೇವರಾಜ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

10 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

12 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

12 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

13 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

17 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

18 hours ago