ದೊಡ್ಡಬಳ್ಳಾಪುರ: ಯುವಕರು ಪಠ್ಯದ ಜೊತೆಗೆ ಪಠ್ಯೇತರ ಚಟುಟಿಕೆಗಳಾದ ಕ್ರೀಡೆ, ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಕಲಿಕೆಗೂ ಸ್ವಲ್ಪ ಸಮಯ ಮೀಸಲಿಡಿ ಎಂದು ಶ್ರೀ ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಜೆ. ರಾಜೇಂದ್ರ ಹೇಳಿದರು.
ನಗರದ ಶ್ರೀ ದೇವರಾಜ ಅರಸ್ ಅಂತಾರಾಷ್ಟ್ರೀಯ ವಸತಿ ಪ್ರೌಢಶಾಲಾ ವಿಭಾಗದಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ, ಶಿಕ್ಷಣವನ್ನು ಅಳೆಯುವ ಕಾಲ ಬದಲಾಗಿದೆ. ಆಧುನಿಕ ಕಾಲದಲ್ಲಿ ಯುವಕರ ಶಿಕ್ಷಣ ಮಟ್ಟವನ್ನು ನಿರ್ಧರಿಸುವುದು ಕೌಶಲ್ಯ, ಸಾಮಾನ್ಯ ಜ್ಞಾನಗಳ ಮೇಲೆ, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸುಲಭವಾಗಿ ಸ್ಪರ್ಧಿಸಲು ಕೌಶಲ್ಯಗಳು ಬಹಳ ಮುಖ್ಯ ಎಂದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಜಿಯಾವುಲ್ಲಾಖಾನ್ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯಾವುದಕ್ಕೂ ಹಿಂಜರಿಯದೆ ಸಾಧನೆಗೆ ವಿದ್ಯಾರ್ಥಿಗಳು ಹೆಚ್ಚು ಶ್ರಮವಹಿಸಬೇಕು ಶಾಲೆಯಲ್ಲಿ ವಿದ್ಯಾಭ್ಯಾಸಕ್ಕೆ ಮತ್ತು ಸಾಧನೆಗೆ ಎಲ್ಲಾ ತರಹದ ಸಹಕಾರವಿದ್ದು, ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಂ ಚಿಕ್ಕಣ್ಣ, ಶ್ರೀ ದೇವರಾಜ ಅರಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಾಂತೇಶಪ್ಪ,, ದೈಹಿಕ ಶಿಕ್ಷಣ ನಿರ್ದೇಶಕರಾದ ವಿ ಶ್ರೀನಿವಾಸ್, ಶಿಕ್ಷಕರಾದ ವಿಜಯಕುಮಾರ್, ಮಹಮ್ಮದ್ ಕೈಸರ್ ಪಾಷಾ, ದೇವರಾಜ್ ಮತ್ತಿತರರು ಹಾಜರಿದ್ದರು.
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…