ಪಡಿತರ ವಿತರಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ- ಸಚಿವ ಕೆ.ಎಚ್.ಮುನಿಯಪ್ಪ

ದೇವನಹಳ್ಳಿ: ಪಡಿತರ ವಿತರಕರು ಕೆಲ ಸಮಸ್ಯೆಗಳನ್ನು ತಿಳಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ತಿಳಿಸಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸರಕಾರಿ ಪಡಿತರ ವಿತರಕರ ಸಂಘದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರದಲ್ಲಿ ಮಾತನಾಡಿದ ಅವರು, ನಾನು ಸಚಿವನಾದ ಮೇಲೆ ಪಡಿತರ ವಿತರಕರಿಗೆ ಸ್ವಲ್ಪಮಟ್ಟಿಗೆ ಸಹಾಯ ಮಾಡಲು ಸಾಧ್ಯವಾಗಿದೆ. ಮತ್ತಷ್ಟು ಹೆಚ್ಚಿನ ಬೇಡಿಕೆಯನ್ನು ರಾಜ್ಯಾಧ್ಯಕ್ಷ ಕೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ ಎಂದು ತಿಳಿಸಿದ್ದಾರೆ. ಜನ ಕೂಡ ಸಕ್ಕರೆ, ಬೇಳೆ ಬೇಕು ಎಂದು ಕೇಳಿದ್ದಾರೆ. ಅದರ ಪ್ರಸ್ತಾವನೆ ಸರಕಾರದ ಮುಂದಿದೆ. ಅದನ್ನು ಕೊಡುವ ಚಿಂತನೆ ಇದೆ. ವಿತರಕರು ಗ್ರಾಹಕರು ಮೆಚ್ಚುವಂತೆ ಕೆಲಸ ಮಾಡಿ ಎಲ್ಲರು ವಿದ್ಯಾವಂತರಿರುವುದಿಲ್ಲ. ಆಹಾರ ವಿತರಣೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡಿ ನಿಮ್ಮ ಕಷ್ಟಸುಕಗಳಿಗೆ ಸ್ಪಂದಿಸುತ್ತೇವೆ. ಗ್ರಾಕರಿಂದ ಯಾವುದೇ ದೂರು ಬರದಂತೆ ವಿತರಣೆ ಮಾಡಿ. ಗುಣಮಟ್ಟದ ರಾಗಿ ಜೋಳ ಶುದ್ದೀಕರಿಸಿ ನೀಡಲು ಅಧಿಕಾರಿಗಳೊಂದಿಗೆ ಸಭೆ ಮಾಡಿ ಕ್ರಮವಹಿಸಲಾಗಿದೆ. ವಿತರಕರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಸರಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಕೃಷ್ಣಪ್ಪ ಮಾತನಾಡಿ ಉಚಿತ ಭಾಗ್ಯಗಳಲ್ಲಿ ಮಹತ್ವಕಾಂಕ್ಷಿ ಯೋಜನೆಯಾದ ಅನ್ನ ಭಾಗ್ಯ ಯೋಜನೆಯನ್ನು ಸಮಾಜದ ಯಾವ ವ್ಯಕ್ತಿಯು ಸಹ ಹಸಿವಿನಿಂದ ಇರಬಾರದೆಂಬ ಸರ್ಕಾರದ ಯೋಜನೆಯನ್ನು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರು ಮತ್ತು ವಿ.ಎಸ್.ಎಸ್.ಎನ್. ಕಾರ್ಯದರ್ಶಿಗಳು ಹಲವು ನ್ಯಾಯಯುತ ಬೇಡಿಕೆಗಳಾದ ನ್ಯಾಯಬೆಲೆ ಅಂಗಡಿಗಳನ್ನು ನಿರ್ವಹಿಸುತ್ತಿರುವ ನಮಗೆ ಕ್ವಿಂಟಾಲಿಗೆ 50 ರೂಪಾಯಿ ನೀಡುತ್ತಿದ್ದು ಕ್ವಿಂಟಾಲಿಗೆ ಕಮಿಷನ್ 300 ಗಳಿಗೆ ಏರಿಸಬೇಕು, ಅಹಾರ ಭದ್ರಾತಾ ಯೋಜನೆಯಿಂದ ವಂಚಿತರಾಗುತ್ತಿರುವ ಒಬ್ಬರು ಇಬ್ಬರು ವಯಸ್ಸಾದವರು, ಅಂಗವಿಕಲರು, ರೋಗಿಗಳಿಗೆ ಆಹಾರ ಧಾನ್ಯ ತೆಗೆದು ಕೊಳ್ಳಲು ಕಾರ್ಡುಗಳಿಗೆ ವಿನಾಯಿತಿ ನೀಡಬೇಕು ಅಥವಾ ಓ.ಟಿ.ಪಿ ಮುಖಾಂತರ ಆಹಾರ ಧಾನ್ಯ ನೀಡಲು ಅವಕಾಶ ನೀಡಬೇಕು, ಇ ಕೆ.ವೈ.ಸಿ ಮಾಡಿದ ಹಣ 5 ವರ್ಷಗಳಿಂದ ಬಾಕಿ ಇದ್ದು ಈ ಹಣವನ್ನು ಬಿಡುಗಡೆ ಮಾಡಿಸಿ ಕೊಡಬೇಕು. ಸರ್ವರ್ ಸಮಸ್ಯೆ ಸರಿ ಪಡಿಸಿ ಕೊಡಬೇಕು. ವಿತರಣೆ ಸಮಯದಲ್ಲಿ ದಾಸ್ತಾನು ಮುಗಿದ ನಂತರ ವಿತರಣೆ ಮಾಡಲು ಅಗದಂತೆ ಸಾಫ್ಟ್ವೇರ್ ಆಫ್‌ಡೇಟ್ ಮಾಡಬೇಕು. ಸಗಟು ಮಳಿಗೆಯಲ್ಲಿ ಎಲೆಟ್ರಾನಿಕ್ ಯಂತ್ರ ಇಟ್ಟು ಅಲ್ಲೆ ತೂಕ ಮಾಡಿ ಕೊಡಬೇಕು ಎಂದು ಸಗಟು ಮಳಿಗೆಯವರಿಗೆ ನಿರ್ದೇಶನ ನೀಡಬೇಕು. ಪ್ರತಿ ತಿಂಗಳು ವಿತರಣೆ ಮುಗಿದ ನಂತರ ಆಯಾ ತಿಂಗಳ ಕಮೀಷನ್ ಹಣವನ್ನು ಡಿ.ಬಿ.ಟಿ ಮುಖಾಂತರ ಅಯಾ ತಿಂಗಳಲ್ಲೇ ನೀಡಬೇಕು ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸಿ ಕೊಡಬೇಕೆಂದು ಮನವಿ ಮಾಡಿದರು.

ಇದೇ ವೇಳೆ 5ನೇ ಹಣಕಾಸು ಆಯೋಗದಾ ಅಧ್ಯಕ್ಷ ನಾರಾಯಣಸ್ವಾಮಿ, ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ರಾಜಣ್ಣ, ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್, ಸರಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಗೋಪಾಲಕೃಷ್ಣ, ತಾಲೂಕು ಅಧ್ಯಕ್ಷ ಸಿ.ಎಸ್.ರಾಜಣ್ಣ, ವೆಂಕಟೇಶಪ್ಪ, ಸಂಘದ ಪದಾಧಿಕಾರಿಗಳು ತಾಲೂಕಿನ ಮುಖಂಡರು ಇದ್ದರು.

Ramesh Babu

Journalist

Recent Posts

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

57 minutes ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

7 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

8 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

11 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

12 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago