ಪಡಿತರ ವಿತರಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ- ಸಚಿವ ಕೆ.ಎಚ್.ಮುನಿಯಪ್ಪ

ದೇವನಹಳ್ಳಿ: ಪಡಿತರ ವಿತರಕರು ಕೆಲ ಸಮಸ್ಯೆಗಳನ್ನು ತಿಳಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ತಿಳಿಸಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸರಕಾರಿ ಪಡಿತರ ವಿತರಕರ ಸಂಘದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರದಲ್ಲಿ ಮಾತನಾಡಿದ ಅವರು, ನಾನು ಸಚಿವನಾದ ಮೇಲೆ ಪಡಿತರ ವಿತರಕರಿಗೆ ಸ್ವಲ್ಪಮಟ್ಟಿಗೆ ಸಹಾಯ ಮಾಡಲು ಸಾಧ್ಯವಾಗಿದೆ. ಮತ್ತಷ್ಟು ಹೆಚ್ಚಿನ ಬೇಡಿಕೆಯನ್ನು ರಾಜ್ಯಾಧ್ಯಕ್ಷ ಕೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ ಎಂದು ತಿಳಿಸಿದ್ದಾರೆ. ಜನ ಕೂಡ ಸಕ್ಕರೆ, ಬೇಳೆ ಬೇಕು ಎಂದು ಕೇಳಿದ್ದಾರೆ. ಅದರ ಪ್ರಸ್ತಾವನೆ ಸರಕಾರದ ಮುಂದಿದೆ. ಅದನ್ನು ಕೊಡುವ ಚಿಂತನೆ ಇದೆ. ವಿತರಕರು ಗ್ರಾಹಕರು ಮೆಚ್ಚುವಂತೆ ಕೆಲಸ ಮಾಡಿ ಎಲ್ಲರು ವಿದ್ಯಾವಂತರಿರುವುದಿಲ್ಲ. ಆಹಾರ ವಿತರಣೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡಿ ನಿಮ್ಮ ಕಷ್ಟಸುಕಗಳಿಗೆ ಸ್ಪಂದಿಸುತ್ತೇವೆ. ಗ್ರಾಕರಿಂದ ಯಾವುದೇ ದೂರು ಬರದಂತೆ ವಿತರಣೆ ಮಾಡಿ. ಗುಣಮಟ್ಟದ ರಾಗಿ ಜೋಳ ಶುದ್ದೀಕರಿಸಿ ನೀಡಲು ಅಧಿಕಾರಿಗಳೊಂದಿಗೆ ಸಭೆ ಮಾಡಿ ಕ್ರಮವಹಿಸಲಾಗಿದೆ. ವಿತರಕರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಸರಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಕೃಷ್ಣಪ್ಪ ಮಾತನಾಡಿ ಉಚಿತ ಭಾಗ್ಯಗಳಲ್ಲಿ ಮಹತ್ವಕಾಂಕ್ಷಿ ಯೋಜನೆಯಾದ ಅನ್ನ ಭಾಗ್ಯ ಯೋಜನೆಯನ್ನು ಸಮಾಜದ ಯಾವ ವ್ಯಕ್ತಿಯು ಸಹ ಹಸಿವಿನಿಂದ ಇರಬಾರದೆಂಬ ಸರ್ಕಾರದ ಯೋಜನೆಯನ್ನು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರು ಮತ್ತು ವಿ.ಎಸ್.ಎಸ್.ಎನ್. ಕಾರ್ಯದರ್ಶಿಗಳು ಹಲವು ನ್ಯಾಯಯುತ ಬೇಡಿಕೆಗಳಾದ ನ್ಯಾಯಬೆಲೆ ಅಂಗಡಿಗಳನ್ನು ನಿರ್ವಹಿಸುತ್ತಿರುವ ನಮಗೆ ಕ್ವಿಂಟಾಲಿಗೆ 50 ರೂಪಾಯಿ ನೀಡುತ್ತಿದ್ದು ಕ್ವಿಂಟಾಲಿಗೆ ಕಮಿಷನ್ 300 ಗಳಿಗೆ ಏರಿಸಬೇಕು, ಅಹಾರ ಭದ್ರಾತಾ ಯೋಜನೆಯಿಂದ ವಂಚಿತರಾಗುತ್ತಿರುವ ಒಬ್ಬರು ಇಬ್ಬರು ವಯಸ್ಸಾದವರು, ಅಂಗವಿಕಲರು, ರೋಗಿಗಳಿಗೆ ಆಹಾರ ಧಾನ್ಯ ತೆಗೆದು ಕೊಳ್ಳಲು ಕಾರ್ಡುಗಳಿಗೆ ವಿನಾಯಿತಿ ನೀಡಬೇಕು ಅಥವಾ ಓ.ಟಿ.ಪಿ ಮುಖಾಂತರ ಆಹಾರ ಧಾನ್ಯ ನೀಡಲು ಅವಕಾಶ ನೀಡಬೇಕು, ಇ ಕೆ.ವೈ.ಸಿ ಮಾಡಿದ ಹಣ 5 ವರ್ಷಗಳಿಂದ ಬಾಕಿ ಇದ್ದು ಈ ಹಣವನ್ನು ಬಿಡುಗಡೆ ಮಾಡಿಸಿ ಕೊಡಬೇಕು. ಸರ್ವರ್ ಸಮಸ್ಯೆ ಸರಿ ಪಡಿಸಿ ಕೊಡಬೇಕು. ವಿತರಣೆ ಸಮಯದಲ್ಲಿ ದಾಸ್ತಾನು ಮುಗಿದ ನಂತರ ವಿತರಣೆ ಮಾಡಲು ಅಗದಂತೆ ಸಾಫ್ಟ್ವೇರ್ ಆಫ್‌ಡೇಟ್ ಮಾಡಬೇಕು. ಸಗಟು ಮಳಿಗೆಯಲ್ಲಿ ಎಲೆಟ್ರಾನಿಕ್ ಯಂತ್ರ ಇಟ್ಟು ಅಲ್ಲೆ ತೂಕ ಮಾಡಿ ಕೊಡಬೇಕು ಎಂದು ಸಗಟು ಮಳಿಗೆಯವರಿಗೆ ನಿರ್ದೇಶನ ನೀಡಬೇಕು. ಪ್ರತಿ ತಿಂಗಳು ವಿತರಣೆ ಮುಗಿದ ನಂತರ ಆಯಾ ತಿಂಗಳ ಕಮೀಷನ್ ಹಣವನ್ನು ಡಿ.ಬಿ.ಟಿ ಮುಖಾಂತರ ಅಯಾ ತಿಂಗಳಲ್ಲೇ ನೀಡಬೇಕು ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸಿ ಕೊಡಬೇಕೆಂದು ಮನವಿ ಮಾಡಿದರು.

ಇದೇ ವೇಳೆ 5ನೇ ಹಣಕಾಸು ಆಯೋಗದಾ ಅಧ್ಯಕ್ಷ ನಾರಾಯಣಸ್ವಾಮಿ, ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ರಾಜಣ್ಣ, ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್, ಸರಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಗೋಪಾಲಕೃಷ್ಣ, ತಾಲೂಕು ಅಧ್ಯಕ್ಷ ಸಿ.ಎಸ್.ರಾಜಣ್ಣ, ವೆಂಕಟೇಶಪ್ಪ, ಸಂಘದ ಪದಾಧಿಕಾರಿಗಳು ತಾಲೂಕಿನ ಮುಖಂಡರು ಇದ್ದರು.

Ramesh Babu

Journalist

Recent Posts

ತಿರುಮಗೊಂಡಹಳ್ಳಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಘಾಟಿ ಪ್ರಾಧಿಕಾರದ ಸದಸ್ಯರ ಮನವಿ

ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ‌‌ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…

8 hours ago

ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ ಆರ್‌ಟಿಐ ಅರ್ಜಿಗಳ ವಿಲೇವಾರಿ ವಿಳಂಬ- ಮಾಹಿತಿ ಆಯುಕ್ತ ಹರೀಶ್ ಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…

10 hours ago

ಧರ್ಮಸ್ಥಳ ಕೇಸ್ ವಿಚಾರ: ತನಿಖೆ ಬೇಗ ಮುಗಿಸಿ ನ್ಯಾಯ ಕೊಡಿಸಿ ಭಾರತೀಯ ಪರಂಪರೆಯನ್ನ ಉಳಿಸಬೇಕು- ಸಚಿವ ವಿ.ಸೋಮಣ್ಣ

ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…

11 hours ago

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ 20ನೇ ಕಂತಿನ ಹಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…

11 hours ago

ಪ್ರಜ್ವಲ್ ರೇವಣ್ಣ ಕೇಸ್: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜೀವನ‌ಪರ್ಯಂತ ಸೆರೆಮನೆ ವಾಸ

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂದು…

13 hours ago

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

22 hours ago