ಪತ್ನಿಯ ರುಂಡ ಕಡಿದ ಪತಿರಾಯ ಬೈಕ್ ನಲ್ಲಿ ರುಂಡದ ಸಮೇತ ಸೂರ್ಯನಗರ ಠಾಣೆಗೆ ಬಂದು ಶರಣಾಗಿದ್ದಾನೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಹೆನ್ನಾಗರ ನಿವಾಸಿ ಶಂಕರ್(28) ಪತ್ನಿ ರುಂಡ ಕಡಿದ ಆರೋಪಿ, ಹೆಬ್ಬಗೋಡಿ ನಿವಾಸಿ ಮಾನಸ(26) ಮೃತ ಮಹಿಳೆ.
ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಪತ್ನಿ ರುಂಡ ಕಡಿದು ಕೊಂದ ಆರೋಪಿ. ಪ್ರೀತಿಸಿ 5 ವರ್ಷಗಳ ಹಿಂದೆ ಮದುವೆ ಆಗಿದ್ದ ಈ ದಂಪತಿ.
ತಿಂಗಳ ಹಿಂದೆ ಹೀಲಲಿಗೆ ಗ್ರಾಮದ ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರಂತೆ. ಕೆಲಸದ ನಿಮಿತ್ತ ಪತಿ ಹೊರಗಡೆ ತೆರಳಿದ್ದ. ಕೆಲಸ ಬೇಗ ಮುಗಿದ ಹಿನ್ನೆಲೆ, ಪತ್ನಿ ಒಬ್ಬಳೇ ಇದ್ದಾಳೆಂದು ವಾಪಸ್ ಆಗಿದ್ದ, ಆದ್ರೆ ಪತ್ನಿ ಮಾತ್ರ ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದಳಂತೆ. ಪತಿಗೆ ರೆಡ್ ಹ್ಯಾಂಡೇಡ್ ಆಗಿ ಪ್ರಿಯಕರನ ಜೊತೆ ಪತ್ನಿ ಸಿಕ್ಕಿಬಿದ್ದಿದ್ದಾಳೆ. ಈ ಹಿನ್ನೆಲೆ ಆಕ್ರೋಶಗೊಂಡ ಪತಿ ಶಂಕರ್ ನಿಂದ ಇಬ್ಬರ ಮೇಲೂ ಹಲ್ಲೆ ನಡೆದಿದೆ.
ಪತ್ನಿ ಇನ್ನೂ ಬೇಡ ಎಂದು ಪ್ರಿಯಕರನ ಜೊತೆ ಕಳುಹಿಸಿದ್ದಾನೆ. ಆದ್ರೆ ಪತ್ನಿ ಮಾನಸ ಮಾತ್ರ ಪದೇ ಪದೇ ಮನೆಗೆ ಬಂದು ಪತಿಗೆ ಟಾರ್ಚರ್ ಮಾಡುತ್ತಿದ್ದಳಂತೆ. ನಿನ್ನೆ ರಾತ್ರಿ ಸಹ ಮನೆಗೆ ಬಂದು ಗಲಾಟೆ ಮಾಡಿದ್ದಾಳಂತೆ. ಪತ್ನಿಯ ಟಾರ್ಚರ್ ಗೆ ಆಕ್ರೋಶಗೊಂಡ ಪತಿ ಶಂಕರ್ ಪತ್ನಿಯ ತಲೆ ಕಡಿದು ಠಾಣೆಗೆ ಬಂದಿದ್ದಾನೆ.
ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.