Oplus_131072
ಪತ್ನಿಯ ರುಂಡ ಕಡಿದ ಪತಿರಾಯ ಬೈಕ್ ನಲ್ಲಿ ರುಂಡದ ಸಮೇತ ಸೂರ್ಯನಗರ ಠಾಣೆಗೆ ಬಂದು ಶರಣಾಗಿದ್ದಾನೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಹೆನ್ನಾಗರ ನಿವಾಸಿ ಶಂಕರ್(28) ಪತ್ನಿ ರುಂಡ ಕಡಿದ ಆರೋಪಿ, ಹೆಬ್ಬಗೋಡಿ ನಿವಾಸಿ ಮಾನಸ(26) ಮೃತ ಮಹಿಳೆ.
ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಪತ್ನಿ ರುಂಡ ಕಡಿದು ಕೊಂದ ಆರೋಪಿ. ಪ್ರೀತಿಸಿ 5 ವರ್ಷಗಳ ಹಿಂದೆ ಮದುವೆ ಆಗಿದ್ದ ಈ ದಂಪತಿ.
ತಿಂಗಳ ಹಿಂದೆ ಹೀಲಲಿಗೆ ಗ್ರಾಮದ ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರಂತೆ. ಕೆಲಸದ ನಿಮಿತ್ತ ಪತಿ ಹೊರಗಡೆ ತೆರಳಿದ್ದ. ಕೆಲಸ ಬೇಗ ಮುಗಿದ ಹಿನ್ನೆಲೆ, ಪತ್ನಿ ಒಬ್ಬಳೇ ಇದ್ದಾಳೆಂದು ವಾಪಸ್ ಆಗಿದ್ದ, ಆದ್ರೆ ಪತ್ನಿ ಮಾತ್ರ ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದಳಂತೆ. ಪತಿಗೆ ರೆಡ್ ಹ್ಯಾಂಡೇಡ್ ಆಗಿ ಪ್ರಿಯಕರನ ಜೊತೆ ಪತ್ನಿ ಸಿಕ್ಕಿಬಿದ್ದಿದ್ದಾಳೆ. ಈ ಹಿನ್ನೆಲೆ ಆಕ್ರೋಶಗೊಂಡ ಪತಿ ಶಂಕರ್ ನಿಂದ ಇಬ್ಬರ ಮೇಲೂ ಹಲ್ಲೆ ನಡೆದಿದೆ.
ಪತ್ನಿ ಇನ್ನೂ ಬೇಡ ಎಂದು ಪ್ರಿಯಕರನ ಜೊತೆ ಕಳುಹಿಸಿದ್ದಾನೆ. ಆದ್ರೆ ಪತ್ನಿ ಮಾನಸ ಮಾತ್ರ ಪದೇ ಪದೇ ಮನೆಗೆ ಬಂದು ಪತಿಗೆ ಟಾರ್ಚರ್ ಮಾಡುತ್ತಿದ್ದಳಂತೆ. ನಿನ್ನೆ ರಾತ್ರಿ ಸಹ ಮನೆಗೆ ಬಂದು ಗಲಾಟೆ ಮಾಡಿದ್ದಾಳಂತೆ. ಪತ್ನಿಯ ಟಾರ್ಚರ್ ಗೆ ಆಕ್ರೋಶಗೊಂಡ ಪತಿ ಶಂಕರ್ ಪತ್ನಿಯ ತಲೆ ಕಡಿದು ಠಾಣೆಗೆ ಬಂದಿದ್ದಾನೆ.
ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…