Categories: Crime

ಪತಿಗೆ ಪತ್ನಿ ಟಾರ್ಚರ್: ಟಾರ್ಚರ್ ತಾಳಲಾರದೇ ಪತ್ನಿಯ ರುಂಡ ಕಡಿದ ಪತಿ: ಪತ್ನಿ ರುಂಡದ ಜೊತೆ ಪೊಲೀಸ್ ಠಾಣೆಗೆ ಬಂದ ಪತಿ

ಪತ್ನಿಯ ರುಂಡ ಕಡಿದ ಪತಿರಾಯ ಬೈಕ್ ನಲ್ಲಿ ರುಂಡದ ಸಮೇತ ಸೂರ್ಯನಗರ ಠಾಣೆಗೆ ಬಂದು ಶರಣಾಗಿದ್ದಾನೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಘಟನೆ ನಡೆದಿದೆ.

ಹೆನ್ನಾಗರ ನಿವಾಸಿ ಶಂಕರ್(28)  ಪತ್ನಿ ರುಂಡ ಕಡಿದ ಆರೋಪಿ, ಹೆಬ್ಬಗೋಡಿ ನಿವಾಸಿ ಮಾನಸ(26) ಮೃತ ಮಹಿಳೆ.

ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಪತ್ನಿ ರುಂಡ ಕಡಿದು ಕೊಂದ ಆರೋಪಿ. ಪ್ರೀತಿಸಿ 5 ವರ್ಷಗಳ ಹಿಂದೆ ಮದುವೆ ಆಗಿದ್ದ ಈ ದಂಪತಿ.

ತಿಂಗಳ ಹಿಂದೆ ಹೀಲಲಿಗೆ ಗ್ರಾಮದ ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರಂತೆ‌. ಕೆಲಸದ ನಿಮಿತ್ತ ಪತಿ ಹೊರಗಡೆ ತೆರಳಿದ್ದ. ಕೆಲಸ ಬೇಗ ಮುಗಿದ ಹಿನ್ನೆಲೆ, ಪತ್ನಿ ಒಬ್ಬಳೇ ಇದ್ದಾಳೆಂದು ವಾಪಸ್ ಆಗಿದ್ದ, ಆದ್ರೆ ಪತ್ನಿ ಮಾತ್ರ ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದಳಂತೆ. ಪತಿಗೆ ರೆಡ್ ಹ್ಯಾಂಡೇಡ್ ಆಗಿ ಪ್ರಿಯಕರನ ಜೊತೆ ಪತ್ನಿ ಸಿಕ್ಕಿಬಿದ್ದಿದ್ದಾಳೆ. ಈ ಹಿನ್ನೆಲೆ ಆಕ್ರೋಶಗೊಂಡ ಪತಿ ಶಂಕರ್ ನಿಂದ ಇಬ್ಬರ ಮೇಲೂ ಹಲ್ಲೆ ನಡೆದಿದೆ.

ಪತ್ನಿ ಇನ್ನೂ ಬೇಡ ಎಂದು ಪ್ರಿಯಕರನ ಜೊತೆ ಕಳುಹಿಸಿದ್ದಾನೆ. ಆದ್ರೆ ಪತ್ನಿ ಮಾನಸ ಮಾತ್ರ ಪದೇ ಪದೇ ಮನೆಗೆ ಬಂದು ಪತಿಗೆ ಟಾರ್ಚರ್ ಮಾಡುತ್ತಿದ್ದಳಂತೆ. ನಿನ್ನೆ ರಾತ್ರಿ ಸಹ ಮನೆಗೆ ಬಂದು ಗಲಾಟೆ ಮಾಡಿದ್ದಾಳಂತೆ. ಪತ್ನಿಯ ಟಾರ್ಚರ್ ಗೆ ಆಕ್ರೋಶಗೊಂಡ ಪತಿ ಶಂಕರ್ ಪತ್ನಿಯ ತಲೆ ಕಡಿದು ಠಾಣೆಗೆ ಬಂದಿದ್ದಾನೆ.

ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

15 minutes ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

3 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

3 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

12 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

13 hours ago