Oplus_131072
ಪತ್ನಿಯ ರುಂಡ ಕಡಿದ ಪತಿರಾಯ ಬೈಕ್ ನಲ್ಲಿ ರುಂಡದ ಸಮೇತ ಸೂರ್ಯನಗರ ಠಾಣೆಗೆ ಬಂದು ಶರಣಾಗಿದ್ದಾನೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಹೆನ್ನಾಗರ ನಿವಾಸಿ ಶಂಕರ್(28) ಪತ್ನಿ ರುಂಡ ಕಡಿದ ಆರೋಪಿ, ಹೆಬ್ಬಗೋಡಿ ನಿವಾಸಿ ಮಾನಸ(26) ಮೃತ ಮಹಿಳೆ.
ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಪತ್ನಿ ರುಂಡ ಕಡಿದು ಕೊಂದ ಆರೋಪಿ. ಪ್ರೀತಿಸಿ 5 ವರ್ಷಗಳ ಹಿಂದೆ ಮದುವೆ ಆಗಿದ್ದ ಈ ದಂಪತಿ.
ತಿಂಗಳ ಹಿಂದೆ ಹೀಲಲಿಗೆ ಗ್ರಾಮದ ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರಂತೆ. ಕೆಲಸದ ನಿಮಿತ್ತ ಪತಿ ಹೊರಗಡೆ ತೆರಳಿದ್ದ. ಕೆಲಸ ಬೇಗ ಮುಗಿದ ಹಿನ್ನೆಲೆ, ಪತ್ನಿ ಒಬ್ಬಳೇ ಇದ್ದಾಳೆಂದು ವಾಪಸ್ ಆಗಿದ್ದ, ಆದ್ರೆ ಪತ್ನಿ ಮಾತ್ರ ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದಳಂತೆ. ಪತಿಗೆ ರೆಡ್ ಹ್ಯಾಂಡೇಡ್ ಆಗಿ ಪ್ರಿಯಕರನ ಜೊತೆ ಪತ್ನಿ ಸಿಕ್ಕಿಬಿದ್ದಿದ್ದಾಳೆ. ಈ ಹಿನ್ನೆಲೆ ಆಕ್ರೋಶಗೊಂಡ ಪತಿ ಶಂಕರ್ ನಿಂದ ಇಬ್ಬರ ಮೇಲೂ ಹಲ್ಲೆ ನಡೆದಿದೆ.
ಪತ್ನಿ ಇನ್ನೂ ಬೇಡ ಎಂದು ಪ್ರಿಯಕರನ ಜೊತೆ ಕಳುಹಿಸಿದ್ದಾನೆ. ಆದ್ರೆ ಪತ್ನಿ ಮಾನಸ ಮಾತ್ರ ಪದೇ ಪದೇ ಮನೆಗೆ ಬಂದು ಪತಿಗೆ ಟಾರ್ಚರ್ ಮಾಡುತ್ತಿದ್ದಳಂತೆ. ನಿನ್ನೆ ರಾತ್ರಿ ಸಹ ಮನೆಗೆ ಬಂದು ಗಲಾಟೆ ಮಾಡಿದ್ದಾಳಂತೆ. ಪತ್ನಿಯ ಟಾರ್ಚರ್ ಗೆ ಆಕ್ರೋಶಗೊಂಡ ಪತಿ ಶಂಕರ್ ಪತ್ನಿಯ ತಲೆ ಕಡಿದು ಠಾಣೆಗೆ ಬಂದಿದ್ದಾನೆ.
ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…