Categories: Crime

ಪತಿಗೆ ಪತ್ನಿ ಟಾರ್ಚರ್: ಟಾರ್ಚರ್ ತಾಳಲಾರದೇ ಪತ್ನಿಯ ರುಂಡ ಕಡಿದ ಪತಿ: ಪತ್ನಿ ರುಂಡದ ಜೊತೆ ಪೊಲೀಸ್ ಠಾಣೆಗೆ ಬಂದ ಪತಿ

ಪತ್ನಿಯ ರುಂಡ ಕಡಿದ ಪತಿರಾಯ ಬೈಕ್ ನಲ್ಲಿ ರುಂಡದ ಸಮೇತ ಸೂರ್ಯನಗರ ಠಾಣೆಗೆ ಬಂದು ಶರಣಾಗಿದ್ದಾನೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಘಟನೆ ನಡೆದಿದೆ.

ಹೆನ್ನಾಗರ ನಿವಾಸಿ ಶಂಕರ್(28)  ಪತ್ನಿ ರುಂಡ ಕಡಿದ ಆರೋಪಿ, ಹೆಬ್ಬಗೋಡಿ ನಿವಾಸಿ ಮಾನಸ(26) ಮೃತ ಮಹಿಳೆ.

ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಪತ್ನಿ ರುಂಡ ಕಡಿದು ಕೊಂದ ಆರೋಪಿ. ಪ್ರೀತಿಸಿ 5 ವರ್ಷಗಳ ಹಿಂದೆ ಮದುವೆ ಆಗಿದ್ದ ಈ ದಂಪತಿ.

ತಿಂಗಳ ಹಿಂದೆ ಹೀಲಲಿಗೆ ಗ್ರಾಮದ ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರಂತೆ‌. ಕೆಲಸದ ನಿಮಿತ್ತ ಪತಿ ಹೊರಗಡೆ ತೆರಳಿದ್ದ. ಕೆಲಸ ಬೇಗ ಮುಗಿದ ಹಿನ್ನೆಲೆ, ಪತ್ನಿ ಒಬ್ಬಳೇ ಇದ್ದಾಳೆಂದು ವಾಪಸ್ ಆಗಿದ್ದ, ಆದ್ರೆ ಪತ್ನಿ ಮಾತ್ರ ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದಳಂತೆ. ಪತಿಗೆ ರೆಡ್ ಹ್ಯಾಂಡೇಡ್ ಆಗಿ ಪ್ರಿಯಕರನ ಜೊತೆ ಪತ್ನಿ ಸಿಕ್ಕಿಬಿದ್ದಿದ್ದಾಳೆ. ಈ ಹಿನ್ನೆಲೆ ಆಕ್ರೋಶಗೊಂಡ ಪತಿ ಶಂಕರ್ ನಿಂದ ಇಬ್ಬರ ಮೇಲೂ ಹಲ್ಲೆ ನಡೆದಿದೆ.

ಪತ್ನಿ ಇನ್ನೂ ಬೇಡ ಎಂದು ಪ್ರಿಯಕರನ ಜೊತೆ ಕಳುಹಿಸಿದ್ದಾನೆ. ಆದ್ರೆ ಪತ್ನಿ ಮಾನಸ ಮಾತ್ರ ಪದೇ ಪದೇ ಮನೆಗೆ ಬಂದು ಪತಿಗೆ ಟಾರ್ಚರ್ ಮಾಡುತ್ತಿದ್ದಳಂತೆ. ನಿನ್ನೆ ರಾತ್ರಿ ಸಹ ಮನೆಗೆ ಬಂದು ಗಲಾಟೆ ಮಾಡಿದ್ದಾಳಂತೆ. ಪತ್ನಿಯ ಟಾರ್ಚರ್ ಗೆ ಆಕ್ರೋಶಗೊಂಡ ಪತಿ ಶಂಕರ್ ಪತ್ನಿಯ ತಲೆ ಕಡಿದು ಠಾಣೆಗೆ ಬಂದಿದ್ದಾನೆ.

ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

14 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

24 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago