Categories: Crime

ಪತಿಗೆ ಪತ್ನಿ ಟಾರ್ಚರ್: ಟಾರ್ಚರ್ ತಾಳಲಾರದೇ ಪತ್ನಿಯ ರುಂಡ ಕಡಿದ ಪತಿ: ಪತ್ನಿ ರುಂಡದ ಜೊತೆ ಪೊಲೀಸ್ ಠಾಣೆಗೆ ಬಂದ ಪತಿ

ಪತ್ನಿಯ ರುಂಡ ಕಡಿದ ಪತಿರಾಯ ಬೈಕ್ ನಲ್ಲಿ ರುಂಡದ ಸಮೇತ ಸೂರ್ಯನಗರ ಠಾಣೆಗೆ ಬಂದು ಶರಣಾಗಿದ್ದಾನೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಘಟನೆ ನಡೆದಿದೆ.

ಹೆನ್ನಾಗರ ನಿವಾಸಿ ಶಂಕರ್(28)  ಪತ್ನಿ ರುಂಡ ಕಡಿದ ಆರೋಪಿ, ಹೆಬ್ಬಗೋಡಿ ನಿವಾಸಿ ಮಾನಸ(26) ಮೃತ ಮಹಿಳೆ.

ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಪತ್ನಿ ರುಂಡ ಕಡಿದು ಕೊಂದ ಆರೋಪಿ. ಪ್ರೀತಿಸಿ 5 ವರ್ಷಗಳ ಹಿಂದೆ ಮದುವೆ ಆಗಿದ್ದ ಈ ದಂಪತಿ.

ತಿಂಗಳ ಹಿಂದೆ ಹೀಲಲಿಗೆ ಗ್ರಾಮದ ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರಂತೆ‌. ಕೆಲಸದ ನಿಮಿತ್ತ ಪತಿ ಹೊರಗಡೆ ತೆರಳಿದ್ದ. ಕೆಲಸ ಬೇಗ ಮುಗಿದ ಹಿನ್ನೆಲೆ, ಪತ್ನಿ ಒಬ್ಬಳೇ ಇದ್ದಾಳೆಂದು ವಾಪಸ್ ಆಗಿದ್ದ, ಆದ್ರೆ ಪತ್ನಿ ಮಾತ್ರ ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದಳಂತೆ. ಪತಿಗೆ ರೆಡ್ ಹ್ಯಾಂಡೇಡ್ ಆಗಿ ಪ್ರಿಯಕರನ ಜೊತೆ ಪತ್ನಿ ಸಿಕ್ಕಿಬಿದ್ದಿದ್ದಾಳೆ. ಈ ಹಿನ್ನೆಲೆ ಆಕ್ರೋಶಗೊಂಡ ಪತಿ ಶಂಕರ್ ನಿಂದ ಇಬ್ಬರ ಮೇಲೂ ಹಲ್ಲೆ ನಡೆದಿದೆ.

ಪತ್ನಿ ಇನ್ನೂ ಬೇಡ ಎಂದು ಪ್ರಿಯಕರನ ಜೊತೆ ಕಳುಹಿಸಿದ್ದಾನೆ. ಆದ್ರೆ ಪತ್ನಿ ಮಾನಸ ಮಾತ್ರ ಪದೇ ಪದೇ ಮನೆಗೆ ಬಂದು ಪತಿಗೆ ಟಾರ್ಚರ್ ಮಾಡುತ್ತಿದ್ದಳಂತೆ. ನಿನ್ನೆ ರಾತ್ರಿ ಸಹ ಮನೆಗೆ ಬಂದು ಗಲಾಟೆ ಮಾಡಿದ್ದಾಳಂತೆ. ಪತ್ನಿಯ ಟಾರ್ಚರ್ ಗೆ ಆಕ್ರೋಶಗೊಂಡ ಪತಿ ಶಂಕರ್ ಪತ್ನಿಯ ತಲೆ ಕಡಿದು ಠಾಣೆಗೆ ಬಂದಿದ್ದಾನೆ.

ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

4 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

5 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

5 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

16 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

17 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago