Categories: Crime

ಪತಿಯನ್ನೇ ಕಟುಕ ಪ್ರಿಯಕರನಿಗಾಗಿ ಹತ್ಯೆ ಮಾಡಿದ ಪತ್ನಿ: ಬಿರಿಯಾನಿಯಲ್ಲಿ 20 ನಿದ್ರೆ ಮಾತ್ರೆ ಹಾಕಿ ಕೊಂದ ಪಾಪಿ ಕಿರಾತಕಿ: ಪತಿಯ ಶವದ ಪಕ್ಕದಲ್ಲೇ ಕುಳಿತು ರಾತ್ರಿಯಿಡೀ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆ

ಸಿನಿಮಾ ಕಥೆಗಳನ್ನೂ ಮೀರಿಸುವಂತಹ ಭೀಕರ ಕೃತ್ಯಯೊಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ.

ನೂರು ಕಾಲ ಸುಖವಾಗಿ ಬಾಳಬೇಕಾದ ಪತಿಯನ್ನೇ ಕಟುಕ ಪ್ರಿಯಕರನಿಗಾಗಿ ಹತ್ಯೆ ಮಾಡಿದ ಮಹಿಳೆಯೊಬ್ಬಳು, ಆ ನಂತರ ಪತಿಯ ಶವದ ಪಕ್ಕದಲ್ಲೇ ಕುಳಿತು ಮಾಡಿದ ಕೆಲಸ ಈಗ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

ಅಕ್ರಮ ಸಂಬಂಧದ ಅಮಲಿನಲ್ಲಿ ಮಾನವೀಯತೆಯನ್ನೇ ಮರೆತ ಆ ಸೈಕೋ ಪತ್ನಿಯ ಅಸಲಿ ಮುಖವಾಡ ಈಗ ಬಯಲಾಗಿದೆ.

ಚಿಲುವೂರು ನಿವಾಸಿಯಾದ ಉಳ್ಳಾಗಡ್ಡೆ (ಈರುಳ್ಳಿ) ವ್ಯಾಪಾರಿ ಶಿವನಾಗರಾಜು ಮತ್ತು ಲಕ್ಷ್ಮಿ ಮಾಧುರಿ ದಂಪತಿಗೆ 2007ರಲ್ಲಿ ಮದುವೆಯಾಗಿತ್ತು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಸುಖವಾಗಿಯೇ ಸಾಗುತ್ತಿದ್ದ ಸಂಸಾರದಲ್ಲಿ ಬಿರುಗಾಳಿ ಎದ್ದಿದ್ದು ಮಾಧುರಿಗೆ ವಿಜಯವಾಡದಲ್ಲಿ ಕೆಲಸ ಮಾಡುವಾಗ ಗೋಪಾಲ್ ಎಂಬಾತನ ಪರಿಚಯವಾದಾಗ.

ಈ ಪರಿಚಯ ಅಕ್ರಮ ಸಂಬಂಧಕ್ಕೆ ತಿರುಗಿತ್ತು. ತನ್ನ ಸುಖಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಹೇಗಾದರೂ ಮಾಡಿ ಮುಗಿಸಬೇಕೆಂದು ಮಾಧುರಿ ಸಂಚು ರೂಪಿಸಿದ್ದಳು.

ಜ. 18ರ ರಾತ್ರಿ ಮಾಧುರಿ ತನ್ನ ಪ್ಲಾನ್ ಜಾರಿಗೆ ತಂದಿದ್ದಾಳೆ. ಪತಿಗಾಗಿ ಪ್ರೀತಿಯಿಂದ ಬಿರಿಯಾನಿ ತಯಾರಿಸಿದ ಮಾಧುರಿ, ಅದರಲ್ಲಿ ಬರೋಬ್ಬರಿ 20 ನಿದ್ರೆ ಮಾತ್ರೆಗಳನ್ನು ಬೆರೆಸಿದ್ದಾಳೆ. ಪತಿ ಗಾಢ ನಿದ್ರೆಗೆ ಜಾರುತ್ತಿದ್ದಂತೆ ಪ್ರಿಯಕರ ಗೋಪಿಯನ್ನು ಮನೆಗೆ ಕರೆಸಿಕೊಂಡಿದ್ದಾಳೆ. ಗೋಪಿ ನಾಗರಾಜನ ಎದೆಯ ಮೇಲೆ ಕುಳಿತು ಹಿಸುಕಿದರೆ, ಮಾಧುರಿ ದಿಂಬಿನಿಂದ ಮುಖವನ್ನು ಒತ್ತಿ ಹಿಡಿದು ಉಸಿರುಗಟ್ಟಿಸಿ ಕೊಂದಿದ್ದಾಳೆ.

ಪತಿ ಮೃತಪಟ್ಟ ಬಳಿಕ ಪ್ರಿಯಕರ ಅಲ್ಲಿಂದ ಪರಾರಿಯಾಗಿದ್ದಾನೆ. ಆದರೆ, ಮಾಧುರಿ ಮಾತ್ರ ಕಿಂಚಿತ್ತೂ ಭಯವಿಲ್ಲದೆ, ಏನೇನೂ ತಿಳಿಯದವಳಂತೆ ಸತ್ತ ಪತಿಯ ಶವದ ಪಕ್ಕದಲ್ಲೇ ಕುಳಿತು ರಾತ್ರಿಯಿಡೀ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡುತ್ತಾ ಕಾಲ ಕಳೆದಿದ್ದಾಳೆ. ಅವಳ ಈ ವಿಕೃತ ಮನಸ್ಥಿತಿ ಈಗ ಎಲ್ಲರಿಗೂ ಶಾಕ್ ನೀಡಿದೆ.

ಬೆಳಗ್ಗೆಯಾಗುತ್ತಿದ್ದಂತೆ ಮಾಧುರಿ ಹೊಸ ನಾಟಕ ಶುರು ಮಾಡಿದ್ದಾಳೆ. ತನ್ನ ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ನೆರೆಹೊರೆಯವರನ್ನು ನಂಬಿಸಲು ಯತ್ನಿಸಿದ್ದಾಳೆ. ಆದರೆ, ದಂಪತಿಗಳ ನಡುವಿನ ಗಲಾಟೆ ಮತ್ತು ಮಾಧುರಿಯ ಅಕ್ರಮ ಸಂಬಂಧದ ಬಗ್ಗೆ ಮೊದಲೇ ಅನುಮಾನವಿದ್ದ ಗ್ರಾಮಸ್ಥರಿಗೆ ಆಕೆಯ ಮೇಲೆ ಸಂಶಯ ಮೂಡಿದೆ.

ಅಂತ್ಯಕ್ರಿಯೆಯ ಸಮಯದಲ್ಲಿ ಶಿವನಾಗರಾಜು ಕಿವಿಯಿಂದ ರಕ್ತ ಬರುತ್ತಿರುವುದನ್ನು ಗಮನಿಸಿದ ಆತನ ಸ್ನೇಹಿತರು ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಶವವನ್ನು ಪೋಸ್ಟ್‌ಮಾರ್ಟಮ್‌ಗೆ ಕಳುಹಿಸಿದಾಗ ಅಸಲಿ ಸತ್ಯ ಹೊರಬಿದ್ದಿದೆ.

ನಾಗರಾಜನ ಎದೆಯ ಎಲುಬುಗಳು ಮುರಿದಿರುವುದು ಪತ್ತೆಯಾಗಿದೆ. ಉಸಿರುಗಟ್ಟಿಸಿದ್ದರಿಂದಲೇ ಸಾವು ಸಂಭವಿಸಿದೆ ಎಂದು ವರದಿಯಲ್ಲಿ ದೃಢಪಟ್ಟಿದೆ ಎಂದು ತಿಳಿದುಬಂದಿದೆ..

ಪೊಲೀಸರ ಬಿಗಿ ವಿಚಾರಣೆಯ ಮುಂದೆ ತತ್ತರಿಸಿದ ಮಾಧುರಿ, ತನ್ನ ಪ್ರಿಯಕರನೊಂದಿಗೆ ಸೇರಿ ಮಾಡಿದ ಈ ಭೀಕರ ಕೊಲೆಯನ್ನು ಒಪ್ಪಿಕೊಂಡಿದ್ದಾಳೆ.

ಸದ್ಯ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

30 minutes ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

2 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

6 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

7 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

7 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

11 hours ago