Categories: Crime

ಪತಿಯನ್ನೇ ಕಟುಕ ಪ್ರಿಯಕರನಿಗಾಗಿ ಹತ್ಯೆ ಮಾಡಿದ ಪತ್ನಿ: ಬಿರಿಯಾನಿಯಲ್ಲಿ 20 ನಿದ್ರೆ ಮಾತ್ರೆ ಹಾಕಿ ಕೊಂದ ಪಾಪಿ ಕಿರಾತಕಿ: ಪತಿಯ ಶವದ ಪಕ್ಕದಲ್ಲೇ ಕುಳಿತು ರಾತ್ರಿಯಿಡೀ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆ

ಸಿನಿಮಾ ಕಥೆಗಳನ್ನೂ ಮೀರಿಸುವಂತಹ ಭೀಕರ ಕೃತ್ಯಯೊಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ.

ನೂರು ಕಾಲ ಸುಖವಾಗಿ ಬಾಳಬೇಕಾದ ಪತಿಯನ್ನೇ ಕಟುಕ ಪ್ರಿಯಕರನಿಗಾಗಿ ಹತ್ಯೆ ಮಾಡಿದ ಮಹಿಳೆಯೊಬ್ಬಳು, ಆ ನಂತರ ಪತಿಯ ಶವದ ಪಕ್ಕದಲ್ಲೇ ಕುಳಿತು ಮಾಡಿದ ಕೆಲಸ ಈಗ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

ಅಕ್ರಮ ಸಂಬಂಧದ ಅಮಲಿನಲ್ಲಿ ಮಾನವೀಯತೆಯನ್ನೇ ಮರೆತ ಆ ಸೈಕೋ ಪತ್ನಿಯ ಅಸಲಿ ಮುಖವಾಡ ಈಗ ಬಯಲಾಗಿದೆ.

ಚಿಲುವೂರು ನಿವಾಸಿಯಾದ ಉಳ್ಳಾಗಡ್ಡೆ (ಈರುಳ್ಳಿ) ವ್ಯಾಪಾರಿ ಶಿವನಾಗರಾಜು ಮತ್ತು ಲಕ್ಷ್ಮಿ ಮಾಧುರಿ ದಂಪತಿಗೆ 2007ರಲ್ಲಿ ಮದುವೆಯಾಗಿತ್ತು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಸುಖವಾಗಿಯೇ ಸಾಗುತ್ತಿದ್ದ ಸಂಸಾರದಲ್ಲಿ ಬಿರುಗಾಳಿ ಎದ್ದಿದ್ದು ಮಾಧುರಿಗೆ ವಿಜಯವಾಡದಲ್ಲಿ ಕೆಲಸ ಮಾಡುವಾಗ ಗೋಪಾಲ್ ಎಂಬಾತನ ಪರಿಚಯವಾದಾಗ.

ಈ ಪರಿಚಯ ಅಕ್ರಮ ಸಂಬಂಧಕ್ಕೆ ತಿರುಗಿತ್ತು. ತನ್ನ ಸುಖಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಹೇಗಾದರೂ ಮಾಡಿ ಮುಗಿಸಬೇಕೆಂದು ಮಾಧುರಿ ಸಂಚು ರೂಪಿಸಿದ್ದಳು.

ಜ. 18ರ ರಾತ್ರಿ ಮಾಧುರಿ ತನ್ನ ಪ್ಲಾನ್ ಜಾರಿಗೆ ತಂದಿದ್ದಾಳೆ. ಪತಿಗಾಗಿ ಪ್ರೀತಿಯಿಂದ ಬಿರಿಯಾನಿ ತಯಾರಿಸಿದ ಮಾಧುರಿ, ಅದರಲ್ಲಿ ಬರೋಬ್ಬರಿ 20 ನಿದ್ರೆ ಮಾತ್ರೆಗಳನ್ನು ಬೆರೆಸಿದ್ದಾಳೆ. ಪತಿ ಗಾಢ ನಿದ್ರೆಗೆ ಜಾರುತ್ತಿದ್ದಂತೆ ಪ್ರಿಯಕರ ಗೋಪಿಯನ್ನು ಮನೆಗೆ ಕರೆಸಿಕೊಂಡಿದ್ದಾಳೆ. ಗೋಪಿ ನಾಗರಾಜನ ಎದೆಯ ಮೇಲೆ ಕುಳಿತು ಹಿಸುಕಿದರೆ, ಮಾಧುರಿ ದಿಂಬಿನಿಂದ ಮುಖವನ್ನು ಒತ್ತಿ ಹಿಡಿದು ಉಸಿರುಗಟ್ಟಿಸಿ ಕೊಂದಿದ್ದಾಳೆ.

ಪತಿ ಮೃತಪಟ್ಟ ಬಳಿಕ ಪ್ರಿಯಕರ ಅಲ್ಲಿಂದ ಪರಾರಿಯಾಗಿದ್ದಾನೆ. ಆದರೆ, ಮಾಧುರಿ ಮಾತ್ರ ಕಿಂಚಿತ್ತೂ ಭಯವಿಲ್ಲದೆ, ಏನೇನೂ ತಿಳಿಯದವಳಂತೆ ಸತ್ತ ಪತಿಯ ಶವದ ಪಕ್ಕದಲ್ಲೇ ಕುಳಿತು ರಾತ್ರಿಯಿಡೀ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡುತ್ತಾ ಕಾಲ ಕಳೆದಿದ್ದಾಳೆ. ಅವಳ ಈ ವಿಕೃತ ಮನಸ್ಥಿತಿ ಈಗ ಎಲ್ಲರಿಗೂ ಶಾಕ್ ನೀಡಿದೆ.

ಬೆಳಗ್ಗೆಯಾಗುತ್ತಿದ್ದಂತೆ ಮಾಧುರಿ ಹೊಸ ನಾಟಕ ಶುರು ಮಾಡಿದ್ದಾಳೆ. ತನ್ನ ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ನೆರೆಹೊರೆಯವರನ್ನು ನಂಬಿಸಲು ಯತ್ನಿಸಿದ್ದಾಳೆ. ಆದರೆ, ದಂಪತಿಗಳ ನಡುವಿನ ಗಲಾಟೆ ಮತ್ತು ಮಾಧುರಿಯ ಅಕ್ರಮ ಸಂಬಂಧದ ಬಗ್ಗೆ ಮೊದಲೇ ಅನುಮಾನವಿದ್ದ ಗ್ರಾಮಸ್ಥರಿಗೆ ಆಕೆಯ ಮೇಲೆ ಸಂಶಯ ಮೂಡಿದೆ.

ಅಂತ್ಯಕ್ರಿಯೆಯ ಸಮಯದಲ್ಲಿ ಶಿವನಾಗರಾಜು ಕಿವಿಯಿಂದ ರಕ್ತ ಬರುತ್ತಿರುವುದನ್ನು ಗಮನಿಸಿದ ಆತನ ಸ್ನೇಹಿತರು ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಶವವನ್ನು ಪೋಸ್ಟ್‌ಮಾರ್ಟಮ್‌ಗೆ ಕಳುಹಿಸಿದಾಗ ಅಸಲಿ ಸತ್ಯ ಹೊರಬಿದ್ದಿದೆ.

ನಾಗರಾಜನ ಎದೆಯ ಎಲುಬುಗಳು ಮುರಿದಿರುವುದು ಪತ್ತೆಯಾಗಿದೆ. ಉಸಿರುಗಟ್ಟಿಸಿದ್ದರಿಂದಲೇ ಸಾವು ಸಂಭವಿಸಿದೆ ಎಂದು ವರದಿಯಲ್ಲಿ ದೃಢಪಟ್ಟಿದೆ ಎಂದು ತಿಳಿದುಬಂದಿದೆ..

ಪೊಲೀಸರ ಬಿಗಿ ವಿಚಾರಣೆಯ ಮುಂದೆ ತತ್ತರಿಸಿದ ಮಾಧುರಿ, ತನ್ನ ಪ್ರಿಯಕರನೊಂದಿಗೆ ಸೇರಿ ಮಾಡಿದ ಈ ಭೀಕರ ಕೊಲೆಯನ್ನು ಒಪ್ಪಿಕೊಂಡಿದ್ದಾಳೆ.

ಸದ್ಯ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

16 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago