Categories: Crime

ಪತಿಯನ್ನೇ ಕಟುಕ ಪ್ರಿಯಕರನಿಗಾಗಿ ಹತ್ಯೆ ಮಾಡಿದ ಪತ್ನಿ: ಬಿರಿಯಾನಿಯಲ್ಲಿ 20 ನಿದ್ರೆ ಮಾತ್ರೆ ಹಾಕಿ ಕೊಂದ ಪಾಪಿ ಕಿರಾತಕಿ: ಪತಿಯ ಶವದ ಪಕ್ಕದಲ್ಲೇ ಕುಳಿತು ರಾತ್ರಿಯಿಡೀ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆ

ಸಿನಿಮಾ ಕಥೆಗಳನ್ನೂ ಮೀರಿಸುವಂತಹ ಭೀಕರ ಕೃತ್ಯಯೊಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ.

ನೂರು ಕಾಲ ಸುಖವಾಗಿ ಬಾಳಬೇಕಾದ ಪತಿಯನ್ನೇ ಕಟುಕ ಪ್ರಿಯಕರನಿಗಾಗಿ ಹತ್ಯೆ ಮಾಡಿದ ಮಹಿಳೆಯೊಬ್ಬಳು, ಆ ನಂತರ ಪತಿಯ ಶವದ ಪಕ್ಕದಲ್ಲೇ ಕುಳಿತು ಮಾಡಿದ ಕೆಲಸ ಈಗ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

ಅಕ್ರಮ ಸಂಬಂಧದ ಅಮಲಿನಲ್ಲಿ ಮಾನವೀಯತೆಯನ್ನೇ ಮರೆತ ಆ ಸೈಕೋ ಪತ್ನಿಯ ಅಸಲಿ ಮುಖವಾಡ ಈಗ ಬಯಲಾಗಿದೆ.

ಚಿಲುವೂರು ನಿವಾಸಿಯಾದ ಉಳ್ಳಾಗಡ್ಡೆ (ಈರುಳ್ಳಿ) ವ್ಯಾಪಾರಿ ಶಿವನಾಗರಾಜು ಮತ್ತು ಲಕ್ಷ್ಮಿ ಮಾಧುರಿ ದಂಪತಿಗೆ 2007ರಲ್ಲಿ ಮದುವೆಯಾಗಿತ್ತು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಸುಖವಾಗಿಯೇ ಸಾಗುತ್ತಿದ್ದ ಸಂಸಾರದಲ್ಲಿ ಬಿರುಗಾಳಿ ಎದ್ದಿದ್ದು ಮಾಧುರಿಗೆ ವಿಜಯವಾಡದಲ್ಲಿ ಕೆಲಸ ಮಾಡುವಾಗ ಗೋಪಾಲ್ ಎಂಬಾತನ ಪರಿಚಯವಾದಾಗ.

ಈ ಪರಿಚಯ ಅಕ್ರಮ ಸಂಬಂಧಕ್ಕೆ ತಿರುಗಿತ್ತು. ತನ್ನ ಸುಖಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಹೇಗಾದರೂ ಮಾಡಿ ಮುಗಿಸಬೇಕೆಂದು ಮಾಧುರಿ ಸಂಚು ರೂಪಿಸಿದ್ದಳು.

ಜ. 18ರ ರಾತ್ರಿ ಮಾಧುರಿ ತನ್ನ ಪ್ಲಾನ್ ಜಾರಿಗೆ ತಂದಿದ್ದಾಳೆ. ಪತಿಗಾಗಿ ಪ್ರೀತಿಯಿಂದ ಬಿರಿಯಾನಿ ತಯಾರಿಸಿದ ಮಾಧುರಿ, ಅದರಲ್ಲಿ ಬರೋಬ್ಬರಿ 20 ನಿದ್ರೆ ಮಾತ್ರೆಗಳನ್ನು ಬೆರೆಸಿದ್ದಾಳೆ. ಪತಿ ಗಾಢ ನಿದ್ರೆಗೆ ಜಾರುತ್ತಿದ್ದಂತೆ ಪ್ರಿಯಕರ ಗೋಪಿಯನ್ನು ಮನೆಗೆ ಕರೆಸಿಕೊಂಡಿದ್ದಾಳೆ. ಗೋಪಿ ನಾಗರಾಜನ ಎದೆಯ ಮೇಲೆ ಕುಳಿತು ಹಿಸುಕಿದರೆ, ಮಾಧುರಿ ದಿಂಬಿನಿಂದ ಮುಖವನ್ನು ಒತ್ತಿ ಹಿಡಿದು ಉಸಿರುಗಟ್ಟಿಸಿ ಕೊಂದಿದ್ದಾಳೆ.

ಪತಿ ಮೃತಪಟ್ಟ ಬಳಿಕ ಪ್ರಿಯಕರ ಅಲ್ಲಿಂದ ಪರಾರಿಯಾಗಿದ್ದಾನೆ. ಆದರೆ, ಮಾಧುರಿ ಮಾತ್ರ ಕಿಂಚಿತ್ತೂ ಭಯವಿಲ್ಲದೆ, ಏನೇನೂ ತಿಳಿಯದವಳಂತೆ ಸತ್ತ ಪತಿಯ ಶವದ ಪಕ್ಕದಲ್ಲೇ ಕುಳಿತು ರಾತ್ರಿಯಿಡೀ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡುತ್ತಾ ಕಾಲ ಕಳೆದಿದ್ದಾಳೆ. ಅವಳ ಈ ವಿಕೃತ ಮನಸ್ಥಿತಿ ಈಗ ಎಲ್ಲರಿಗೂ ಶಾಕ್ ನೀಡಿದೆ.

ಬೆಳಗ್ಗೆಯಾಗುತ್ತಿದ್ದಂತೆ ಮಾಧುರಿ ಹೊಸ ನಾಟಕ ಶುರು ಮಾಡಿದ್ದಾಳೆ. ತನ್ನ ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ನೆರೆಹೊರೆಯವರನ್ನು ನಂಬಿಸಲು ಯತ್ನಿಸಿದ್ದಾಳೆ. ಆದರೆ, ದಂಪತಿಗಳ ನಡುವಿನ ಗಲಾಟೆ ಮತ್ತು ಮಾಧುರಿಯ ಅಕ್ರಮ ಸಂಬಂಧದ ಬಗ್ಗೆ ಮೊದಲೇ ಅನುಮಾನವಿದ್ದ ಗ್ರಾಮಸ್ಥರಿಗೆ ಆಕೆಯ ಮೇಲೆ ಸಂಶಯ ಮೂಡಿದೆ.

ಅಂತ್ಯಕ್ರಿಯೆಯ ಸಮಯದಲ್ಲಿ ಶಿವನಾಗರಾಜು ಕಿವಿಯಿಂದ ರಕ್ತ ಬರುತ್ತಿರುವುದನ್ನು ಗಮನಿಸಿದ ಆತನ ಸ್ನೇಹಿತರು ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಶವವನ್ನು ಪೋಸ್ಟ್‌ಮಾರ್ಟಮ್‌ಗೆ ಕಳುಹಿಸಿದಾಗ ಅಸಲಿ ಸತ್ಯ ಹೊರಬಿದ್ದಿದೆ.

ನಾಗರಾಜನ ಎದೆಯ ಎಲುಬುಗಳು ಮುರಿದಿರುವುದು ಪತ್ತೆಯಾಗಿದೆ. ಉಸಿರುಗಟ್ಟಿಸಿದ್ದರಿಂದಲೇ ಸಾವು ಸಂಭವಿಸಿದೆ ಎಂದು ವರದಿಯಲ್ಲಿ ದೃಢಪಟ್ಟಿದೆ ಎಂದು ತಿಳಿದುಬಂದಿದೆ..

ಪೊಲೀಸರ ಬಿಗಿ ವಿಚಾರಣೆಯ ಮುಂದೆ ತತ್ತರಿಸಿದ ಮಾಧುರಿ, ತನ್ನ ಪ್ರಿಯಕರನೊಂದಿಗೆ ಸೇರಿ ಮಾಡಿದ ಈ ಭೀಕರ ಕೊಲೆಯನ್ನು ಒಪ್ಪಿಕೊಂಡಿದ್ದಾಳೆ.

ಸದ್ಯ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

5 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

11 hours ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

17 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

1 day ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

1 day ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

1 day ago