ಗುಡಿಬಂಡೆ: ಗಂಡ ಹೆಂಡತಿಯ ಜಗಳದಲ್ಲಿ ಪತ್ನಿಯ ಭೀಕರ ಕೊಲೆಯಾದ ಘಟನೆ ಪಟ್ಟಣದ ಎಂಟನೇ ವಾರ್ಡ್ ನಲ್ಲಿ ನಡೆದಿದೆ.
ರಾಮಿಜಾಬಿ (25) ಕೊಲೆಯಾದ ಮಹಿಳೆ, ಈಕೆ ಪಟ್ಟಣದಲ್ಲಿ ಸುಮಾರು 3 ವರ್ಷಗಳಿಂದ, ಎರಡನೇ ಗಂಡನಾದ ಬಾಬಾ ಜಾನ್ ರೊಂದಿಗೆ ವಾಸವಾಗಿದ್ದು, ಶುಕ್ರವಾರ ಮಧ್ಯಾಹ್ನ ಸುಮಾರು 4 ಗಂಟೆ ಸಮಯದಲ್ಲಿ ಗಂಡ ಹೆಂಡತಿ ಕ್ಷುಲಕ ಕಾರಣಕ್ಕೆ ಜಗಳವಾಗಿದ್ದು, ಇಬ್ಬರ ಜಗಳದಲ್ಲಿ ಪತ್ನಿಯನ್ನು ಗಂಡ ಭೀಕರವಾಗಿ ಕೊಲೆ ಮಾಡಿದ್ದು, ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಆರೋಪಿ ಬಾಬಾಜಾನ್ ರನ್ನು ಬಂಧಿಸಿದ್ದಾರೆ.
ಮೃತ ದುರ್ದೈವಿ ರಮಿಜಾಬಿ ಮೂಲತಃ ಶ್ರೀನಿವಾಸಪುರ ಗ್ರಾಮದವಳಾಗಿದ್ದು, ಮೊದಲು ಮುಳಬಾಗಿಲು ತಾಲೂಕಿನ ಅಲ್ಲಾಬಕಾಶ್ ರೊಂದಿಗೆ ಮದುವೆಯಾಗಿದ್ದು, ನಂತರ ಆತನನ್ನು ಬಿಟ್ಟು ಬಾಬಾಜಾನ್ ರೊಂದಿಗೆ ಎರಡನೇ ಮದುವೆಯಾಗಿ ಗುಡಿಬಂಡೆ ಪಟ್ಟಣದಲ್ಲಿ ವಾಸವಾಗಿದ್ದು, ಆಗಾಗ್ಗೆ ಇಬ್ಬರ ನಡುವೆ ಗಲಾಟೆಗಳು ಆಗುತ್ತಿದ್ದು, ಗಂಡ ಹೆಂಡತಿ ಗಲಾಟೆ ಕೊನೆಯಾಗಿ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದ್ದು, ಸದ್ಯ ಗಂಡ ಪೊಲೀಸರ ಅತಿಥಿಯಾಗಿದ್ದಾನೆ,
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…
ನ್ಯೂಯಾರ್ಕ್–ನ್ಯೂಜೆರ್ಸಿ: ತೀವ್ರ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವಕಪ್-2026ರ ಫೈನಲ್ನಲ್ಲಿ ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ವಿಶ್ವ ಚಾಂಪಿಯನ್ ಅರ್ಜೆಂಟೀನಾವನ್ನು 1-0…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಡಿಯೋ…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಬರ ಪರಿಸ್ಥಿತಿ, ಮಳೆಗಾಲ, ಕುಡಿಯುವ ನೀರು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು…