Categories: Crime

ಪತಿಯ ಕಿರುಕುಳದಿಂದ ಬೇಸತ್ತ ಪತ್ನಿ: ಇಟ್ಟಿಗೆಯಿಂದ ಪತಿ ತಲೆ ಜಜ್ಜಿ ಕೊಂದ ಪತ್ನಿ: ಸತ್ತ ಗಂಡನ ಎದೆಯ ಮೇಲೆ ಕುಳಿತು ತಲೆಯನ್ನು ಹರಿದು ಮಾಂಸದ ತುಂಡುಗಳನ್ನು ಎಸೆದ ಪತ್ನಿ

ಉತ್ತರಪ್ರದೇಶ ಶಹಜಹಾನ್‌ಪುರ ಜಿಲ್ಲೆಯ ಹಥೋಡಾ ಗ್ರಾಮದಲ್ಲಿ ಗಾಯತ್ರಿ ದೇವಿ ಎಂಬಾಕೆ ತನ್ನ 40 ವರ್ಷದ ಪತಿ ಸತ್ಯಪಾಲ್‌ನ ತಲೆಯನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದಲ್ಲದೇ ಸತ್ತ ಗಂಡನ ಎದೆಯ ಮೇಲೆ ಕುಳಿತು 10 ನಿಮಿಷಗಳ ಕಾಲ ಅವನ ತಲೆಯನ್ನು ಹರಿದು ಮಾಂಸದ ತುಂಡುಗಳನ್ನು ಎಸೆಯುತ್ತಲೇ ಇದ್ದಳು. ಈ‌ ವೇಳೆ ಪೊಲೀಸರು ಅಲ್ಲಿದ್ದರೂ‌ ಸಹ, ನಿರೀಕ್ಷೆಯಂತೆ ಅಬಲಾ ನಾರಿಯ ಮುಂದೆ ಅಸಹಾಯಕರಾಗಿದ್ದರು.

ಈ ಘಟನೆ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ‌ ವೈರಲ್ ಆಗಿದೆ.

ಕೊಲೆಗೆ ಕಾರಣ ಕೌಟುಂಬಿಕ ಕಲಹ ಎನ್ನಲಾಗಿದೆ. ಮೃತ ಸತ್ಯಪಾಲ್ ಮತ್ತು ಪತ್ನಿ ಗಾಯತ್ರಿ ದೇವಿ ಕೊಲೆಗೂ ಮುನ್ನ ತೀವ್ರ ಜಗಳವಾಡಿದ್ದರು. ಮೃತ ಪತಿಯು ಮನೆಯಲ್ಲಿ ನಡೆದ ಜಗಳದಲ್ಲಿ ತನ್ನ ಹೆಂಡತಿಯನ್ನು ತೀವ್ರವಾಗಿ ಹೊಡೆದಿದ್ದನು. ಇದಕ್ಕೆ ಪ್ರತೀಕಾರವಾಗಿ ದೇವಿ ತನ್ನ ಗಂಡನ ತಲೆಗೆ ಇಟ್ಟಿಗೆಯಿಂದ ಹಲವಾರು ಬಾರಿ ಹೊಡೆದಿದ್ದಾಳೆ, ಅದು ಅಂತಿಮವಾಗಿ ಅವನ ಸಾವಿಗೆ ಕಾರಣವಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ನನ್ನ ಪತಿ ಕ್ರೂರಿ ಎಂದು ಪೊಲೀಸ್ ವಿಚಾರಣೆಯಲ್ಲಿ ಕೊಲೆ ಆರೋಪಿ ಗಾಯತ್ರಿ ದೇವಿ ತಿಳಿಸಿದ್ದಾಳೆ.

ಪತ್ನಿ 300 ರೂ.ಕೊಡದಿದ್ದಾಗ ಹೊಡೆಯಲು ಕೋಲು ಕೈಗೆತ್ತಿಕೊಂಡು ಆಕೆಗೆ ಹೊಡೆದಿದ್ದಾನೆ. ನಂತರ ಮನೆಯಲ್ಲಿ ಬಿದ್ದಿದ್ದ ಇಟ್ಟಿಗೆಯನ್ನೂ ಎತ್ತಿಕೊಂಡು ತಲೆ ಬೀಸಿದ್ದಾನೆ. ಇದಾದ ನಂತರ ದೇವಿಯ ಕೋಪ ಹೆಚ್ಚಾಗಿ‌ ಅದೇ ಇಟ್ಟಿಗೆಯಿಂದ ತನ್ನ ಪತಿಯ ತಲೆಗೆ ಹೊಡೆಯುತ್ತಲೇ ಇದ್ದಳು. ಘಟನೆಯ ಸಮಯದಲ್ಲಿ ಕೋಪದಿಂದ ಅವಳು ಪ್ರಜ್ಞೆ ಕಳೆದುಕೊಂಡಿದ್ದಳು ಎನ್ನಲಾಗಿದೆ.

ಪೊಲೀಸರಿಂದ ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

5 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

6 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

8 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

17 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

18 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

20 hours ago