Categories: Crime

ಪತಿಯ ಕಿರುಕುಳದಿಂದ ಬೇಸತ್ತ ಪತ್ನಿ: ಇಟ್ಟಿಗೆಯಿಂದ ಪತಿ ತಲೆ ಜಜ್ಜಿ ಕೊಂದ ಪತ್ನಿ: ಸತ್ತ ಗಂಡನ ಎದೆಯ ಮೇಲೆ ಕುಳಿತು ತಲೆಯನ್ನು ಹರಿದು ಮಾಂಸದ ತುಂಡುಗಳನ್ನು ಎಸೆದ ಪತ್ನಿ

ಉತ್ತರಪ್ರದೇಶ ಶಹಜಹಾನ್‌ಪುರ ಜಿಲ್ಲೆಯ ಹಥೋಡಾ ಗ್ರಾಮದಲ್ಲಿ ಗಾಯತ್ರಿ ದೇವಿ ಎಂಬಾಕೆ ತನ್ನ 40 ವರ್ಷದ ಪತಿ ಸತ್ಯಪಾಲ್‌ನ ತಲೆಯನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದಲ್ಲದೇ ಸತ್ತ ಗಂಡನ ಎದೆಯ ಮೇಲೆ ಕುಳಿತು 10 ನಿಮಿಷಗಳ ಕಾಲ ಅವನ ತಲೆಯನ್ನು ಹರಿದು ಮಾಂಸದ ತುಂಡುಗಳನ್ನು ಎಸೆಯುತ್ತಲೇ ಇದ್ದಳು. ಈ‌ ವೇಳೆ ಪೊಲೀಸರು ಅಲ್ಲಿದ್ದರೂ‌ ಸಹ, ನಿರೀಕ್ಷೆಯಂತೆ ಅಬಲಾ ನಾರಿಯ ಮುಂದೆ ಅಸಹಾಯಕರಾಗಿದ್ದರು.

ಈ ಘಟನೆ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ‌ ವೈರಲ್ ಆಗಿದೆ.

ಕೊಲೆಗೆ ಕಾರಣ ಕೌಟುಂಬಿಕ ಕಲಹ ಎನ್ನಲಾಗಿದೆ. ಮೃತ ಸತ್ಯಪಾಲ್ ಮತ್ತು ಪತ್ನಿ ಗಾಯತ್ರಿ ದೇವಿ ಕೊಲೆಗೂ ಮುನ್ನ ತೀವ್ರ ಜಗಳವಾಡಿದ್ದರು. ಮೃತ ಪತಿಯು ಮನೆಯಲ್ಲಿ ನಡೆದ ಜಗಳದಲ್ಲಿ ತನ್ನ ಹೆಂಡತಿಯನ್ನು ತೀವ್ರವಾಗಿ ಹೊಡೆದಿದ್ದನು. ಇದಕ್ಕೆ ಪ್ರತೀಕಾರವಾಗಿ ದೇವಿ ತನ್ನ ಗಂಡನ ತಲೆಗೆ ಇಟ್ಟಿಗೆಯಿಂದ ಹಲವಾರು ಬಾರಿ ಹೊಡೆದಿದ್ದಾಳೆ, ಅದು ಅಂತಿಮವಾಗಿ ಅವನ ಸಾವಿಗೆ ಕಾರಣವಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ನನ್ನ ಪತಿ ಕ್ರೂರಿ ಎಂದು ಪೊಲೀಸ್ ವಿಚಾರಣೆಯಲ್ಲಿ ಕೊಲೆ ಆರೋಪಿ ಗಾಯತ್ರಿ ದೇವಿ ತಿಳಿಸಿದ್ದಾಳೆ.

ಪತ್ನಿ 300 ರೂ.ಕೊಡದಿದ್ದಾಗ ಹೊಡೆಯಲು ಕೋಲು ಕೈಗೆತ್ತಿಕೊಂಡು ಆಕೆಗೆ ಹೊಡೆದಿದ್ದಾನೆ. ನಂತರ ಮನೆಯಲ್ಲಿ ಬಿದ್ದಿದ್ದ ಇಟ್ಟಿಗೆಯನ್ನೂ ಎತ್ತಿಕೊಂಡು ತಲೆ ಬೀಸಿದ್ದಾನೆ. ಇದಾದ ನಂತರ ದೇವಿಯ ಕೋಪ ಹೆಚ್ಚಾಗಿ‌ ಅದೇ ಇಟ್ಟಿಗೆಯಿಂದ ತನ್ನ ಪತಿಯ ತಲೆಗೆ ಹೊಡೆಯುತ್ತಲೇ ಇದ್ದಳು. ಘಟನೆಯ ಸಮಯದಲ್ಲಿ ಕೋಪದಿಂದ ಅವಳು ಪ್ರಜ್ಞೆ ಕಳೆದುಕೊಂಡಿದ್ದಳು ಎನ್ನಲಾಗಿದೆ.

ಪೊಲೀಸರಿಂದ ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

12 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

13 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

21 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago