Categories: Crime

ಪತಿಯ ಕಿರುಕುಳದಿಂದ ಬೇಸತ್ತ ಪತ್ನಿ: ಇಟ್ಟಿಗೆಯಿಂದ ಪತಿ ತಲೆ ಜಜ್ಜಿ ಕೊಂದ ಪತ್ನಿ: ಸತ್ತ ಗಂಡನ ಎದೆಯ ಮೇಲೆ ಕುಳಿತು ತಲೆಯನ್ನು ಹರಿದು ಮಾಂಸದ ತುಂಡುಗಳನ್ನು ಎಸೆದ ಪತ್ನಿ

ಉತ್ತರಪ್ರದೇಶ ಶಹಜಹಾನ್‌ಪುರ ಜಿಲ್ಲೆಯ ಹಥೋಡಾ ಗ್ರಾಮದಲ್ಲಿ ಗಾಯತ್ರಿ ದೇವಿ ಎಂಬಾಕೆ ತನ್ನ 40 ವರ್ಷದ ಪತಿ ಸತ್ಯಪಾಲ್‌ನ ತಲೆಯನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದಲ್ಲದೇ ಸತ್ತ ಗಂಡನ ಎದೆಯ ಮೇಲೆ ಕುಳಿತು 10 ನಿಮಿಷಗಳ ಕಾಲ ಅವನ ತಲೆಯನ್ನು ಹರಿದು ಮಾಂಸದ ತುಂಡುಗಳನ್ನು ಎಸೆಯುತ್ತಲೇ ಇದ್ದಳು. ಈ‌ ವೇಳೆ ಪೊಲೀಸರು ಅಲ್ಲಿದ್ದರೂ‌ ಸಹ, ನಿರೀಕ್ಷೆಯಂತೆ ಅಬಲಾ ನಾರಿಯ ಮುಂದೆ ಅಸಹಾಯಕರಾಗಿದ್ದರು.

ಈ ಘಟನೆ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ‌ ವೈರಲ್ ಆಗಿದೆ.

ಕೊಲೆಗೆ ಕಾರಣ ಕೌಟುಂಬಿಕ ಕಲಹ ಎನ್ನಲಾಗಿದೆ. ಮೃತ ಸತ್ಯಪಾಲ್ ಮತ್ತು ಪತ್ನಿ ಗಾಯತ್ರಿ ದೇವಿ ಕೊಲೆಗೂ ಮುನ್ನ ತೀವ್ರ ಜಗಳವಾಡಿದ್ದರು. ಮೃತ ಪತಿಯು ಮನೆಯಲ್ಲಿ ನಡೆದ ಜಗಳದಲ್ಲಿ ತನ್ನ ಹೆಂಡತಿಯನ್ನು ತೀವ್ರವಾಗಿ ಹೊಡೆದಿದ್ದನು. ಇದಕ್ಕೆ ಪ್ರತೀಕಾರವಾಗಿ ದೇವಿ ತನ್ನ ಗಂಡನ ತಲೆಗೆ ಇಟ್ಟಿಗೆಯಿಂದ ಹಲವಾರು ಬಾರಿ ಹೊಡೆದಿದ್ದಾಳೆ, ಅದು ಅಂತಿಮವಾಗಿ ಅವನ ಸಾವಿಗೆ ಕಾರಣವಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ನನ್ನ ಪತಿ ಕ್ರೂರಿ ಎಂದು ಪೊಲೀಸ್ ವಿಚಾರಣೆಯಲ್ಲಿ ಕೊಲೆ ಆರೋಪಿ ಗಾಯತ್ರಿ ದೇವಿ ತಿಳಿಸಿದ್ದಾಳೆ.

ಪತ್ನಿ 300 ರೂ.ಕೊಡದಿದ್ದಾಗ ಹೊಡೆಯಲು ಕೋಲು ಕೈಗೆತ್ತಿಕೊಂಡು ಆಕೆಗೆ ಹೊಡೆದಿದ್ದಾನೆ. ನಂತರ ಮನೆಯಲ್ಲಿ ಬಿದ್ದಿದ್ದ ಇಟ್ಟಿಗೆಯನ್ನೂ ಎತ್ತಿಕೊಂಡು ತಲೆ ಬೀಸಿದ್ದಾನೆ. ಇದಾದ ನಂತರ ದೇವಿಯ ಕೋಪ ಹೆಚ್ಚಾಗಿ‌ ಅದೇ ಇಟ್ಟಿಗೆಯಿಂದ ತನ್ನ ಪತಿಯ ತಲೆಗೆ ಹೊಡೆಯುತ್ತಲೇ ಇದ್ದಳು. ಘಟನೆಯ ಸಮಯದಲ್ಲಿ ಕೋಪದಿಂದ ಅವಳು ಪ್ರಜ್ಞೆ ಕಳೆದುಕೊಂಡಿದ್ದಳು ಎನ್ನಲಾಗಿದೆ.

ಪೊಲೀಸರಿಂದ ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

18 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

18 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

23 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

4 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

4 days ago