Categories: Crime

ಪತಿಯ ಕಿರುಕುಳದಿಂದ ಬೇಸತ್ತ ಪತ್ನಿ: ಇಟ್ಟಿಗೆಯಿಂದ ಪತಿ ತಲೆ ಜಜ್ಜಿ ಕೊಂದ ಪತ್ನಿ: ಸತ್ತ ಗಂಡನ ಎದೆಯ ಮೇಲೆ ಕುಳಿತು ತಲೆಯನ್ನು ಹರಿದು ಮಾಂಸದ ತುಂಡುಗಳನ್ನು ಎಸೆದ ಪತ್ನಿ

ಉತ್ತರಪ್ರದೇಶ ಶಹಜಹಾನ್‌ಪುರ ಜಿಲ್ಲೆಯ ಹಥೋಡಾ ಗ್ರಾಮದಲ್ಲಿ ಗಾಯತ್ರಿ ದೇವಿ ಎಂಬಾಕೆ ತನ್ನ 40 ವರ್ಷದ ಪತಿ ಸತ್ಯಪಾಲ್‌ನ ತಲೆಯನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದಲ್ಲದೇ ಸತ್ತ ಗಂಡನ ಎದೆಯ ಮೇಲೆ ಕುಳಿತು 10 ನಿಮಿಷಗಳ ಕಾಲ ಅವನ ತಲೆಯನ್ನು ಹರಿದು ಮಾಂಸದ ತುಂಡುಗಳನ್ನು ಎಸೆಯುತ್ತಲೇ ಇದ್ದಳು. ಈ‌ ವೇಳೆ ಪೊಲೀಸರು ಅಲ್ಲಿದ್ದರೂ‌ ಸಹ, ನಿರೀಕ್ಷೆಯಂತೆ ಅಬಲಾ ನಾರಿಯ ಮುಂದೆ ಅಸಹಾಯಕರಾಗಿದ್ದರು.

ಈ ಘಟನೆ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ‌ ವೈರಲ್ ಆಗಿದೆ.

ಕೊಲೆಗೆ ಕಾರಣ ಕೌಟುಂಬಿಕ ಕಲಹ ಎನ್ನಲಾಗಿದೆ. ಮೃತ ಸತ್ಯಪಾಲ್ ಮತ್ತು ಪತ್ನಿ ಗಾಯತ್ರಿ ದೇವಿ ಕೊಲೆಗೂ ಮುನ್ನ ತೀವ್ರ ಜಗಳವಾಡಿದ್ದರು. ಮೃತ ಪತಿಯು ಮನೆಯಲ್ಲಿ ನಡೆದ ಜಗಳದಲ್ಲಿ ತನ್ನ ಹೆಂಡತಿಯನ್ನು ತೀವ್ರವಾಗಿ ಹೊಡೆದಿದ್ದನು. ಇದಕ್ಕೆ ಪ್ರತೀಕಾರವಾಗಿ ದೇವಿ ತನ್ನ ಗಂಡನ ತಲೆಗೆ ಇಟ್ಟಿಗೆಯಿಂದ ಹಲವಾರು ಬಾರಿ ಹೊಡೆದಿದ್ದಾಳೆ, ಅದು ಅಂತಿಮವಾಗಿ ಅವನ ಸಾವಿಗೆ ಕಾರಣವಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ನನ್ನ ಪತಿ ಕ್ರೂರಿ ಎಂದು ಪೊಲೀಸ್ ವಿಚಾರಣೆಯಲ್ಲಿ ಕೊಲೆ ಆರೋಪಿ ಗಾಯತ್ರಿ ದೇವಿ ತಿಳಿಸಿದ್ದಾಳೆ.

ಪತ್ನಿ 300 ರೂ.ಕೊಡದಿದ್ದಾಗ ಹೊಡೆಯಲು ಕೋಲು ಕೈಗೆತ್ತಿಕೊಂಡು ಆಕೆಗೆ ಹೊಡೆದಿದ್ದಾನೆ. ನಂತರ ಮನೆಯಲ್ಲಿ ಬಿದ್ದಿದ್ದ ಇಟ್ಟಿಗೆಯನ್ನೂ ಎತ್ತಿಕೊಂಡು ತಲೆ ಬೀಸಿದ್ದಾನೆ. ಇದಾದ ನಂತರ ದೇವಿಯ ಕೋಪ ಹೆಚ್ಚಾಗಿ‌ ಅದೇ ಇಟ್ಟಿಗೆಯಿಂದ ತನ್ನ ಪತಿಯ ತಲೆಗೆ ಹೊಡೆಯುತ್ತಲೇ ಇದ್ದಳು. ಘಟನೆಯ ಸಮಯದಲ್ಲಿ ಕೋಪದಿಂದ ಅವಳು ಪ್ರಜ್ಞೆ ಕಳೆದುಕೊಂಡಿದ್ದಳು ಎನ್ನಲಾಗಿದೆ.

ಪೊಲೀಸರಿಂದ ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

36 minutes ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

9 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

19 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

20 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

1 day ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago