ಪತ್ನಿಯಿಂದ ಫೋನ್ ತೆಗೆದುಕೊಂಡ ಪತಿ: ಕೋಪಗೊಂಡು ಪತಿಗೆ ವಿದ್ಯುತ್ ಶಾಕ್ ನೀಡಿದ ಪತ್ನಿ

ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ, ಪ್ರದೀಪ್ ಸಿಂಗ್ ಎಂಬ ವ್ಯಕ್ತಿ ತನ್ನ ಪತ್ನಿ ಬೇಬಿ ಯಾದವ್ ಅವರಿಂದ ಫೋನ್ ತೆಗೆದುಕೊಂಡಿದ್ದಕ್ಕೆ ಕೋಪಗೊಂಡು ಪತಿಗೆ ವಿದ್ಯುತ್ ಶಾಕ್ ನೀಡಿದ್ದಾಳೆ.

33ರ ಹರೆಯದ ಮಹಿಳೆ ಮೊದಲು ಪತಿಗೆ ಮತ್ತು ಬರುವ ಮದ್ದು ನೀಡಿ ಹಾಸಿಗೆಗೆ ಕಟ್ಟಿ ಹಾಕಿದ್ದಾಳೆ. ಅಕೆ ಆತನನ್ನು ಚೆನ್ನಾಗಿ ಥಳಿಸಿ ವಿದ್ಯುತ್ ಶಾಕ್ ನೀಡಲು ಹೋದ್ದಾಳೆ.

ಅವರ 14 ವರ್ಷದ ಮಗ ತನ್ನ ತಂದೆಯನ್ನು ಉಳಿಸಲು ಪ್ರಯತ್ನಿಸಿದಾಗ, ಮಗನಿಗೂ ಥಳಿಸಲಾಗಿದೆ.

ಸದ್ಯ, ಪ್ರದೀಪ್ ಸಿಂಗ್ ಸೈಫೈ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.  ಸಿಂಗ್ 2007 ರಲ್ಲಿ ಔರೈಯಾದಿಂದ ದಿವಾನ್ ಸಿಂಗ್ ಅವರ ಮಗಳು ಬೇಬಿ ಯಾದವ್ ಅವರನ್ನು ವಿವಾಹವಾದರು.

“ನನ್ನ ಹೆಂಡತಿ ತನ್ನ ಮೊಬೈಲ್ ಫೋನ್‌ನಲ್ಲಿ ಪ್ರತಿದಿನ ಬೇರೊಬ್ಬರ ಜೊತೆ ಸದಾ ಮಾತನಾಡುತ್ತಿದ್ದಳು. ನಾನು ಅದನ್ನು ವಿರೋಧಿಸಿದೆ ಮತ್ತು ಅವಳ ಕುಟುಂಬಕ್ಕೆ ತಿಳಿಸಿದ್ದೇನೆ. ಅವರ ಅನುಮತಿ ಮೇರೆಗೆ ನಾನು ಅವಳ ಮೊಬೈಲ್ ಫೋನ್ ತೆಗೆದುಕೊಂಡೆ. ಇದರಿಂದ ಕೋಪಗೊಂಡ ಅವಳು ನನ್ನನ್ನು ಮತ್ತು ನಮ್ಮ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದಳು. ಕಳೆದ ವಾರದಲ್ಲಿ ಅವಳು ನನ್ನನ್ನು ಕ್ರೂರ ಚಿತ್ರಹಿಂಸೆಗೆ ಒಳಪಡಿಸಿದ್ದಳು. ಅವಳು ಪದೇ ಪದೇ ಕ್ರಿಕೆಟ್ ಬ್ಯಾಟ್‌ನಿಂದ ನನ್ನನ್ನು ಹೊಡೆದಳು, ನನ್ನ ತಲೆ ಮತ್ತು ದೇಹಕ್ಕೆ ತೀವ್ರವಾದ ಗಾಯಗಳನ್ನು ಉಂಟುಮಾಡಿದಳು. ನಂತರ ವಿದ್ಯುತ್ ಶಾಕ್ ನೀಡಿದಳು. ನನ್ನ ಮಗ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಅವಳು ಅವನ ಮೇಲೂ ಹಲ್ಲೆ ಮಾಡಿದಳು” ಎಂದು ದೂರಿನಲ್ಲಿ ಪತಿ ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

5 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

7 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

16 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

20 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

23 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago