ಉತ್ತರ ಪ್ರದೇಶದ ಮೈನ್ಪುರಿಯಲ್ಲಿ, ಪ್ರದೀಪ್ ಸಿಂಗ್ ಎಂಬ ವ್ಯಕ್ತಿ ತನ್ನ ಪತ್ನಿ ಬೇಬಿ ಯಾದವ್ ಅವರಿಂದ ಫೋನ್ ತೆಗೆದುಕೊಂಡಿದ್ದಕ್ಕೆ ಕೋಪಗೊಂಡು ಪತಿಗೆ ವಿದ್ಯುತ್ ಶಾಕ್ ನೀಡಿದ್ದಾಳೆ.
33ರ ಹರೆಯದ ಮಹಿಳೆ ಮೊದಲು ಪತಿಗೆ ಮತ್ತು ಬರುವ ಮದ್ದು ನೀಡಿ ಹಾಸಿಗೆಗೆ ಕಟ್ಟಿ ಹಾಕಿದ್ದಾಳೆ. ಅಕೆ ಆತನನ್ನು ಚೆನ್ನಾಗಿ ಥಳಿಸಿ ವಿದ್ಯುತ್ ಶಾಕ್ ನೀಡಲು ಹೋದ್ದಾಳೆ.
ಅವರ 14 ವರ್ಷದ ಮಗ ತನ್ನ ತಂದೆಯನ್ನು ಉಳಿಸಲು ಪ್ರಯತ್ನಿಸಿದಾಗ, ಮಗನಿಗೂ ಥಳಿಸಲಾಗಿದೆ.
ಸದ್ಯ, ಪ್ರದೀಪ್ ಸಿಂಗ್ ಸೈಫೈ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಸಿಂಗ್ 2007 ರಲ್ಲಿ ಔರೈಯಾದಿಂದ ದಿವಾನ್ ಸಿಂಗ್ ಅವರ ಮಗಳು ಬೇಬಿ ಯಾದವ್ ಅವರನ್ನು ವಿವಾಹವಾದರು.
“ನನ್ನ ಹೆಂಡತಿ ತನ್ನ ಮೊಬೈಲ್ ಫೋನ್ನಲ್ಲಿ ಪ್ರತಿದಿನ ಬೇರೊಬ್ಬರ ಜೊತೆ ಸದಾ ಮಾತನಾಡುತ್ತಿದ್ದಳು. ನಾನು ಅದನ್ನು ವಿರೋಧಿಸಿದೆ ಮತ್ತು ಅವಳ ಕುಟುಂಬಕ್ಕೆ ತಿಳಿಸಿದ್ದೇನೆ. ಅವರ ಅನುಮತಿ ಮೇರೆಗೆ ನಾನು ಅವಳ ಮೊಬೈಲ್ ಫೋನ್ ತೆಗೆದುಕೊಂಡೆ. ಇದರಿಂದ ಕೋಪಗೊಂಡ ಅವಳು ನನ್ನನ್ನು ಮತ್ತು ನಮ್ಮ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದಳು. ಕಳೆದ ವಾರದಲ್ಲಿ ಅವಳು ನನ್ನನ್ನು ಕ್ರೂರ ಚಿತ್ರಹಿಂಸೆಗೆ ಒಳಪಡಿಸಿದ್ದಳು. ಅವಳು ಪದೇ ಪದೇ ಕ್ರಿಕೆಟ್ ಬ್ಯಾಟ್ನಿಂದ ನನ್ನನ್ನು ಹೊಡೆದಳು, ನನ್ನ ತಲೆ ಮತ್ತು ದೇಹಕ್ಕೆ ತೀವ್ರವಾದ ಗಾಯಗಳನ್ನು ಉಂಟುಮಾಡಿದಳು. ನಂತರ ವಿದ್ಯುತ್ ಶಾಕ್ ನೀಡಿದಳು. ನನ್ನ ಮಗ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಅವಳು ಅವನ ಮೇಲೂ ಹಲ್ಲೆ ಮಾಡಿದಳು” ಎಂದು ದೂರಿನಲ್ಲಿ ಪತಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…