ಉತ್ತರ ಪ್ರದೇಶದ ಮೈನ್ಪುರಿಯಲ್ಲಿ, ಪ್ರದೀಪ್ ಸಿಂಗ್ ಎಂಬ ವ್ಯಕ್ತಿ ತನ್ನ ಪತ್ನಿ ಬೇಬಿ ಯಾದವ್ ಅವರಿಂದ ಫೋನ್ ತೆಗೆದುಕೊಂಡಿದ್ದಕ್ಕೆ ಕೋಪಗೊಂಡು ಪತಿಗೆ ವಿದ್ಯುತ್ ಶಾಕ್ ನೀಡಿದ್ದಾಳೆ.
33ರ ಹರೆಯದ ಮಹಿಳೆ ಮೊದಲು ಪತಿಗೆ ಮತ್ತು ಬರುವ ಮದ್ದು ನೀಡಿ ಹಾಸಿಗೆಗೆ ಕಟ್ಟಿ ಹಾಕಿದ್ದಾಳೆ. ಅಕೆ ಆತನನ್ನು ಚೆನ್ನಾಗಿ ಥಳಿಸಿ ವಿದ್ಯುತ್ ಶಾಕ್ ನೀಡಲು ಹೋದ್ದಾಳೆ.
ಅವರ 14 ವರ್ಷದ ಮಗ ತನ್ನ ತಂದೆಯನ್ನು ಉಳಿಸಲು ಪ್ರಯತ್ನಿಸಿದಾಗ, ಮಗನಿಗೂ ಥಳಿಸಲಾಗಿದೆ.
ಸದ್ಯ, ಪ್ರದೀಪ್ ಸಿಂಗ್ ಸೈಫೈ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಸಿಂಗ್ 2007 ರಲ್ಲಿ ಔರೈಯಾದಿಂದ ದಿವಾನ್ ಸಿಂಗ್ ಅವರ ಮಗಳು ಬೇಬಿ ಯಾದವ್ ಅವರನ್ನು ವಿವಾಹವಾದರು.
“ನನ್ನ ಹೆಂಡತಿ ತನ್ನ ಮೊಬೈಲ್ ಫೋನ್ನಲ್ಲಿ ಪ್ರತಿದಿನ ಬೇರೊಬ್ಬರ ಜೊತೆ ಸದಾ ಮಾತನಾಡುತ್ತಿದ್ದಳು. ನಾನು ಅದನ್ನು ವಿರೋಧಿಸಿದೆ ಮತ್ತು ಅವಳ ಕುಟುಂಬಕ್ಕೆ ತಿಳಿಸಿದ್ದೇನೆ. ಅವರ ಅನುಮತಿ ಮೇರೆಗೆ ನಾನು ಅವಳ ಮೊಬೈಲ್ ಫೋನ್ ತೆಗೆದುಕೊಂಡೆ. ಇದರಿಂದ ಕೋಪಗೊಂಡ ಅವಳು ನನ್ನನ್ನು ಮತ್ತು ನಮ್ಮ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದಳು. ಕಳೆದ ವಾರದಲ್ಲಿ ಅವಳು ನನ್ನನ್ನು ಕ್ರೂರ ಚಿತ್ರಹಿಂಸೆಗೆ ಒಳಪಡಿಸಿದ್ದಳು. ಅವಳು ಪದೇ ಪದೇ ಕ್ರಿಕೆಟ್ ಬ್ಯಾಟ್ನಿಂದ ನನ್ನನ್ನು ಹೊಡೆದಳು, ನನ್ನ ತಲೆ ಮತ್ತು ದೇಹಕ್ಕೆ ತೀವ್ರವಾದ ಗಾಯಗಳನ್ನು ಉಂಟುಮಾಡಿದಳು. ನಂತರ ವಿದ್ಯುತ್ ಶಾಕ್ ನೀಡಿದಳು. ನನ್ನ ಮಗ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಅವಳು ಅವನ ಮೇಲೂ ಹಲ್ಲೆ ಮಾಡಿದಳು” ಎಂದು ದೂರಿನಲ್ಲಿ ಪತಿ ತಿಳಿಸಿದ್ದಾರೆ.
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…
ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…
ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…