ಪತ್ನಿಯಿಂದ ಫೋನ್ ತೆಗೆದುಕೊಂಡ ಪತಿ: ಕೋಪಗೊಂಡು ಪತಿಗೆ ವಿದ್ಯುತ್ ಶಾಕ್ ನೀಡಿದ ಪತ್ನಿ

ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ, ಪ್ರದೀಪ್ ಸಿಂಗ್ ಎಂಬ ವ್ಯಕ್ತಿ ತನ್ನ ಪತ್ನಿ ಬೇಬಿ ಯಾದವ್ ಅವರಿಂದ ಫೋನ್ ತೆಗೆದುಕೊಂಡಿದ್ದಕ್ಕೆ ಕೋಪಗೊಂಡು ಪತಿಗೆ ವಿದ್ಯುತ್ ಶಾಕ್ ನೀಡಿದ್ದಾಳೆ.

33ರ ಹರೆಯದ ಮಹಿಳೆ ಮೊದಲು ಪತಿಗೆ ಮತ್ತು ಬರುವ ಮದ್ದು ನೀಡಿ ಹಾಸಿಗೆಗೆ ಕಟ್ಟಿ ಹಾಕಿದ್ದಾಳೆ. ಅಕೆ ಆತನನ್ನು ಚೆನ್ನಾಗಿ ಥಳಿಸಿ ವಿದ್ಯುತ್ ಶಾಕ್ ನೀಡಲು ಹೋದ್ದಾಳೆ.

ಅವರ 14 ವರ್ಷದ ಮಗ ತನ್ನ ತಂದೆಯನ್ನು ಉಳಿಸಲು ಪ್ರಯತ್ನಿಸಿದಾಗ, ಮಗನಿಗೂ ಥಳಿಸಲಾಗಿದೆ.

ಸದ್ಯ, ಪ್ರದೀಪ್ ಸಿಂಗ್ ಸೈಫೈ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.  ಸಿಂಗ್ 2007 ರಲ್ಲಿ ಔರೈಯಾದಿಂದ ದಿವಾನ್ ಸಿಂಗ್ ಅವರ ಮಗಳು ಬೇಬಿ ಯಾದವ್ ಅವರನ್ನು ವಿವಾಹವಾದರು.

“ನನ್ನ ಹೆಂಡತಿ ತನ್ನ ಮೊಬೈಲ್ ಫೋನ್‌ನಲ್ಲಿ ಪ್ರತಿದಿನ ಬೇರೊಬ್ಬರ ಜೊತೆ ಸದಾ ಮಾತನಾಡುತ್ತಿದ್ದಳು. ನಾನು ಅದನ್ನು ವಿರೋಧಿಸಿದೆ ಮತ್ತು ಅವಳ ಕುಟುಂಬಕ್ಕೆ ತಿಳಿಸಿದ್ದೇನೆ. ಅವರ ಅನುಮತಿ ಮೇರೆಗೆ ನಾನು ಅವಳ ಮೊಬೈಲ್ ಫೋನ್ ತೆಗೆದುಕೊಂಡೆ. ಇದರಿಂದ ಕೋಪಗೊಂಡ ಅವಳು ನನ್ನನ್ನು ಮತ್ತು ನಮ್ಮ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದಳು. ಕಳೆದ ವಾರದಲ್ಲಿ ಅವಳು ನನ್ನನ್ನು ಕ್ರೂರ ಚಿತ್ರಹಿಂಸೆಗೆ ಒಳಪಡಿಸಿದ್ದಳು. ಅವಳು ಪದೇ ಪದೇ ಕ್ರಿಕೆಟ್ ಬ್ಯಾಟ್‌ನಿಂದ ನನ್ನನ್ನು ಹೊಡೆದಳು, ನನ್ನ ತಲೆ ಮತ್ತು ದೇಹಕ್ಕೆ ತೀವ್ರವಾದ ಗಾಯಗಳನ್ನು ಉಂಟುಮಾಡಿದಳು. ನಂತರ ವಿದ್ಯುತ್ ಶಾಕ್ ನೀಡಿದಳು. ನನ್ನ ಮಗ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಅವಳು ಅವನ ಮೇಲೂ ಹಲ್ಲೆ ಮಾಡಿದಳು” ಎಂದು ದೂರಿನಲ್ಲಿ ಪತಿ ತಿಳಿಸಿದ್ದಾರೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

5 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

5 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

14 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago