ಉತ್ತರ ಪ್ರದೇಶದ ಮೈನ್ಪುರಿಯಲ್ಲಿ, ಪ್ರದೀಪ್ ಸಿಂಗ್ ಎಂಬ ವ್ಯಕ್ತಿ ತನ್ನ ಪತ್ನಿ ಬೇಬಿ ಯಾದವ್ ಅವರಿಂದ ಫೋನ್ ತೆಗೆದುಕೊಂಡಿದ್ದಕ್ಕೆ ಕೋಪಗೊಂಡು ಪತಿಗೆ ವಿದ್ಯುತ್ ಶಾಕ್ ನೀಡಿದ್ದಾಳೆ.
33ರ ಹರೆಯದ ಮಹಿಳೆ ಮೊದಲು ಪತಿಗೆ ಮತ್ತು ಬರುವ ಮದ್ದು ನೀಡಿ ಹಾಸಿಗೆಗೆ ಕಟ್ಟಿ ಹಾಕಿದ್ದಾಳೆ. ಅಕೆ ಆತನನ್ನು ಚೆನ್ನಾಗಿ ಥಳಿಸಿ ವಿದ್ಯುತ್ ಶಾಕ್ ನೀಡಲು ಹೋದ್ದಾಳೆ.
ಅವರ 14 ವರ್ಷದ ಮಗ ತನ್ನ ತಂದೆಯನ್ನು ಉಳಿಸಲು ಪ್ರಯತ್ನಿಸಿದಾಗ, ಮಗನಿಗೂ ಥಳಿಸಲಾಗಿದೆ.
ಸದ್ಯ, ಪ್ರದೀಪ್ ಸಿಂಗ್ ಸೈಫೈ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಸಿಂಗ್ 2007 ರಲ್ಲಿ ಔರೈಯಾದಿಂದ ದಿವಾನ್ ಸಿಂಗ್ ಅವರ ಮಗಳು ಬೇಬಿ ಯಾದವ್ ಅವರನ್ನು ವಿವಾಹವಾದರು.
“ನನ್ನ ಹೆಂಡತಿ ತನ್ನ ಮೊಬೈಲ್ ಫೋನ್ನಲ್ಲಿ ಪ್ರತಿದಿನ ಬೇರೊಬ್ಬರ ಜೊತೆ ಸದಾ ಮಾತನಾಡುತ್ತಿದ್ದಳು. ನಾನು ಅದನ್ನು ವಿರೋಧಿಸಿದೆ ಮತ್ತು ಅವಳ ಕುಟುಂಬಕ್ಕೆ ತಿಳಿಸಿದ್ದೇನೆ. ಅವರ ಅನುಮತಿ ಮೇರೆಗೆ ನಾನು ಅವಳ ಮೊಬೈಲ್ ಫೋನ್ ತೆಗೆದುಕೊಂಡೆ. ಇದರಿಂದ ಕೋಪಗೊಂಡ ಅವಳು ನನ್ನನ್ನು ಮತ್ತು ನಮ್ಮ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದಳು. ಕಳೆದ ವಾರದಲ್ಲಿ ಅವಳು ನನ್ನನ್ನು ಕ್ರೂರ ಚಿತ್ರಹಿಂಸೆಗೆ ಒಳಪಡಿಸಿದ್ದಳು. ಅವಳು ಪದೇ ಪದೇ ಕ್ರಿಕೆಟ್ ಬ್ಯಾಟ್ನಿಂದ ನನ್ನನ್ನು ಹೊಡೆದಳು, ನನ್ನ ತಲೆ ಮತ್ತು ದೇಹಕ್ಕೆ ತೀವ್ರವಾದ ಗಾಯಗಳನ್ನು ಉಂಟುಮಾಡಿದಳು. ನಂತರ ವಿದ್ಯುತ್ ಶಾಕ್ ನೀಡಿದಳು. ನನ್ನ ಮಗ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಅವಳು ಅವನ ಮೇಲೂ ಹಲ್ಲೆ ಮಾಡಿದಳು” ಎಂದು ದೂರಿನಲ್ಲಿ ಪತಿ ತಿಳಿಸಿದ್ದಾರೆ.
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…