ಉತ್ತರ ಪ್ರದೇಶದ ಮೈನ್ಪುರಿಯಲ್ಲಿ, ಪ್ರದೀಪ್ ಸಿಂಗ್ ಎಂಬ ವ್ಯಕ್ತಿ ತನ್ನ ಪತ್ನಿ ಬೇಬಿ ಯಾದವ್ ಅವರಿಂದ ಫೋನ್ ತೆಗೆದುಕೊಂಡಿದ್ದಕ್ಕೆ ಕೋಪಗೊಂಡು ಪತಿಗೆ ವಿದ್ಯುತ್ ಶಾಕ್ ನೀಡಿದ್ದಾಳೆ.
33ರ ಹರೆಯದ ಮಹಿಳೆ ಮೊದಲು ಪತಿಗೆ ಮತ್ತು ಬರುವ ಮದ್ದು ನೀಡಿ ಹಾಸಿಗೆಗೆ ಕಟ್ಟಿ ಹಾಕಿದ್ದಾಳೆ. ಅಕೆ ಆತನನ್ನು ಚೆನ್ನಾಗಿ ಥಳಿಸಿ ವಿದ್ಯುತ್ ಶಾಕ್ ನೀಡಲು ಹೋದ್ದಾಳೆ.
ಅವರ 14 ವರ್ಷದ ಮಗ ತನ್ನ ತಂದೆಯನ್ನು ಉಳಿಸಲು ಪ್ರಯತ್ನಿಸಿದಾಗ, ಮಗನಿಗೂ ಥಳಿಸಲಾಗಿದೆ.
ಸದ್ಯ, ಪ್ರದೀಪ್ ಸಿಂಗ್ ಸೈಫೈ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಸಿಂಗ್ 2007 ರಲ್ಲಿ ಔರೈಯಾದಿಂದ ದಿವಾನ್ ಸಿಂಗ್ ಅವರ ಮಗಳು ಬೇಬಿ ಯಾದವ್ ಅವರನ್ನು ವಿವಾಹವಾದರು.
“ನನ್ನ ಹೆಂಡತಿ ತನ್ನ ಮೊಬೈಲ್ ಫೋನ್ನಲ್ಲಿ ಪ್ರತಿದಿನ ಬೇರೊಬ್ಬರ ಜೊತೆ ಸದಾ ಮಾತನಾಡುತ್ತಿದ್ದಳು. ನಾನು ಅದನ್ನು ವಿರೋಧಿಸಿದೆ ಮತ್ತು ಅವಳ ಕುಟುಂಬಕ್ಕೆ ತಿಳಿಸಿದ್ದೇನೆ. ಅವರ ಅನುಮತಿ ಮೇರೆಗೆ ನಾನು ಅವಳ ಮೊಬೈಲ್ ಫೋನ್ ತೆಗೆದುಕೊಂಡೆ. ಇದರಿಂದ ಕೋಪಗೊಂಡ ಅವಳು ನನ್ನನ್ನು ಮತ್ತು ನಮ್ಮ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದಳು. ಕಳೆದ ವಾರದಲ್ಲಿ ಅವಳು ನನ್ನನ್ನು ಕ್ರೂರ ಚಿತ್ರಹಿಂಸೆಗೆ ಒಳಪಡಿಸಿದ್ದಳು. ಅವಳು ಪದೇ ಪದೇ ಕ್ರಿಕೆಟ್ ಬ್ಯಾಟ್ನಿಂದ ನನ್ನನ್ನು ಹೊಡೆದಳು, ನನ್ನ ತಲೆ ಮತ್ತು ದೇಹಕ್ಕೆ ತೀವ್ರವಾದ ಗಾಯಗಳನ್ನು ಉಂಟುಮಾಡಿದಳು. ನಂತರ ವಿದ್ಯುತ್ ಶಾಕ್ ನೀಡಿದಳು. ನನ್ನ ಮಗ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಅವಳು ಅವನ ಮೇಲೂ ಹಲ್ಲೆ ಮಾಡಿದಳು” ಎಂದು ದೂರಿನಲ್ಲಿ ಪತಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…