ಪತ್ನಿಯಿಂದ ಫೋನ್ ತೆಗೆದುಕೊಂಡ ಪತಿ: ಕೋಪಗೊಂಡು ಪತಿಗೆ ವಿದ್ಯುತ್ ಶಾಕ್ ನೀಡಿದ ಪತ್ನಿ

ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ, ಪ್ರದೀಪ್ ಸಿಂಗ್ ಎಂಬ ವ್ಯಕ್ತಿ ತನ್ನ ಪತ್ನಿ ಬೇಬಿ ಯಾದವ್ ಅವರಿಂದ ಫೋನ್ ತೆಗೆದುಕೊಂಡಿದ್ದಕ್ಕೆ ಕೋಪಗೊಂಡು ಪತಿಗೆ ವಿದ್ಯುತ್ ಶಾಕ್ ನೀಡಿದ್ದಾಳೆ.

33ರ ಹರೆಯದ ಮಹಿಳೆ ಮೊದಲು ಪತಿಗೆ ಮತ್ತು ಬರುವ ಮದ್ದು ನೀಡಿ ಹಾಸಿಗೆಗೆ ಕಟ್ಟಿ ಹಾಕಿದ್ದಾಳೆ. ಅಕೆ ಆತನನ್ನು ಚೆನ್ನಾಗಿ ಥಳಿಸಿ ವಿದ್ಯುತ್ ಶಾಕ್ ನೀಡಲು ಹೋದ್ದಾಳೆ.

ಅವರ 14 ವರ್ಷದ ಮಗ ತನ್ನ ತಂದೆಯನ್ನು ಉಳಿಸಲು ಪ್ರಯತ್ನಿಸಿದಾಗ, ಮಗನಿಗೂ ಥಳಿಸಲಾಗಿದೆ.

ಸದ್ಯ, ಪ್ರದೀಪ್ ಸಿಂಗ್ ಸೈಫೈ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.  ಸಿಂಗ್ 2007 ರಲ್ಲಿ ಔರೈಯಾದಿಂದ ದಿವಾನ್ ಸಿಂಗ್ ಅವರ ಮಗಳು ಬೇಬಿ ಯಾದವ್ ಅವರನ್ನು ವಿವಾಹವಾದರು.

“ನನ್ನ ಹೆಂಡತಿ ತನ್ನ ಮೊಬೈಲ್ ಫೋನ್‌ನಲ್ಲಿ ಪ್ರತಿದಿನ ಬೇರೊಬ್ಬರ ಜೊತೆ ಸದಾ ಮಾತನಾಡುತ್ತಿದ್ದಳು. ನಾನು ಅದನ್ನು ವಿರೋಧಿಸಿದೆ ಮತ್ತು ಅವಳ ಕುಟುಂಬಕ್ಕೆ ತಿಳಿಸಿದ್ದೇನೆ. ಅವರ ಅನುಮತಿ ಮೇರೆಗೆ ನಾನು ಅವಳ ಮೊಬೈಲ್ ಫೋನ್ ತೆಗೆದುಕೊಂಡೆ. ಇದರಿಂದ ಕೋಪಗೊಂಡ ಅವಳು ನನ್ನನ್ನು ಮತ್ತು ನಮ್ಮ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದಳು. ಕಳೆದ ವಾರದಲ್ಲಿ ಅವಳು ನನ್ನನ್ನು ಕ್ರೂರ ಚಿತ್ರಹಿಂಸೆಗೆ ಒಳಪಡಿಸಿದ್ದಳು. ಅವಳು ಪದೇ ಪದೇ ಕ್ರಿಕೆಟ್ ಬ್ಯಾಟ್‌ನಿಂದ ನನ್ನನ್ನು ಹೊಡೆದಳು, ನನ್ನ ತಲೆ ಮತ್ತು ದೇಹಕ್ಕೆ ತೀವ್ರವಾದ ಗಾಯಗಳನ್ನು ಉಂಟುಮಾಡಿದಳು. ನಂತರ ವಿದ್ಯುತ್ ಶಾಕ್ ನೀಡಿದಳು. ನನ್ನ ಮಗ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಅವಳು ಅವನ ಮೇಲೂ ಹಲ್ಲೆ ಮಾಡಿದಳು” ಎಂದು ದೂರಿನಲ್ಲಿ ಪತಿ ತಿಳಿಸಿದ್ದಾರೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

5 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

13 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

14 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago