Categories: ಕೊಡಗು

ಪತ್ನಿಯ ಕೊಲೆ ಆರೋಪದಡಿ ಜೈಲುಪಾಲಾಗಿದ್ದ ಪತಿಗೆ ಶಾಕ್!: ಸತ್ತಿದ್ದಾಳೆ ಅಂದುಕೊಂಡರೆ 5 ವರ್ಷ ಬಳಿಕ ಲವರ್ ಜತೆ ರೆಡ್​ಹ್ಯಾಂಡ್ ಆಗಿ ಲಾಕ್

ಆಕೆಯನ್ನು ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಪಾಲಾಗಿದ್ದ. ಮಾತ್ರವಲ್ಲ ಗಂಡನೇ ಹೆಂಡತಿಯ ಅಸ್ಥಿಪಂಜರದ ಅಂತ್ಯಸಂಸ್ಕಾರ ಕೂಡ ಮಾಡಿದ್ದ. ಶಿಕ್ಷೆ ಅನುಭವಿಸಿದ ಬಳಿಕ ಜೈಲಿನಿಂದ ಹೊರಬಂದಿದ್ದ. ಆದರೆ, ಸೋಮವಾರ ಸಂಜೆ ಆತನಿಗೆ, ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಅದೇ ಹೆಂಡತಿ ಹೋಟೆಲ್​​ನಲ್ಲಿ ಕುಳಿತುಕೊಂಡು ತಿಂಡಿ ತಿನ್ನುತ್ತಿರುವುದು ಕಾಣಿಸಿದೆ! ಅದೂ ಕೂಡ ಲವರ್​ ಜೊತೆ!

ಇದೇನು ಸಿನಿಮಾ ಕಥೆ ಅಂದುಕೊಂಡಿರಾ? ಖಂಡಿತಾ ಅಲ್ಲ. ಕೊಡಗಿನ ಕುಶಾಲನಗರದ ಮಲ್ಲಿಗೆ ಎಂಬುವವಳ ಸಿನಿಮೀಯ ಕಥೆ ಇಲ್ಲಿದೆ.

ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ಐದು ವರ್ಷಗಳ ಹಿಂದೆ ನಡೆದಿದೆ ಎನ್ನಲಾಗಿದ್ದ ಕೊಲೆ ಪ್ರಕರಣವೊಂದಕ್ಕೆ ಇದೀಗ ಭಾರಿ ಟ್ವಿಸ್ಟ್ ದೊರೆತಿದೆ. ಅಷ್ಟೇ ಅಲ್ಲ, ಯಾವ ಸಸ್ಪೆನ್ಸ್​, ಹಾರರ್, ಥ್ರಿಲ್ಲರ್, ರೊಮ್ಯಾಂಟಿಕ್ ಸಿನಿಮಾಗೂ ಕಡಿಮೆ ಇಲ್ಲದ ರೀತಿಯಲ್ಲಿ ಇದೀಗ ಅನಾವರಣಗೊಂಡಿದೆ.

ಪೊಲೀಸರ ದಾಖಲೆಗಳ ಪ್ರಕಾರ ಮಲ್ಲಿಗೆ ಎಂಬಾಕೆ ಆಕೆಯ ಗಂಡನ ಕೈಯಿಂದಲೇ ಹತ್ಯೆ ಆಗಿ ಅದಾಗಲೇ ಐದು ವರ್ಷ ಆಗಿ ಹೋಗಿದೆ. ಆಕೆಯನ್ನು ಕೊಲೆ ಮಾಡಿದ್ದಕ್ಕಾಗಿ ಗಂಡ ಸುರೇಶ್​ ಎರಡು ವರ್ಷ ಜೈಲೂಟ ಕೂಡ ಮಾಡಿ ಬಂದಿದ್ದಾರೆ. ಆದರೆ, ವಿಚಿತ್ರ ಎಂದರೆ, ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಲ್ಲಿಗೆ ಮಂಗಳವಾರ ಸಂಜೆ ಮಡಿಕೇರಿ ನಗರದ ಹೋಟೆಲ್​ ಒಂದರಲ್ಲಿ ತಿಂಡಿ ತಿನ್ನುತ್ತಾ ಇರುವುದು ಸುರೇಶ್​ಗೆ ಕಾಣಿಸಿದೆ. ಅದೂ ಕೂಡ ಆಕೆಯ ಲವರ್ ಜತೆ! ಇದನ್ನು ಗಂಡ ಸುರೇಶ್​ನ ಸ್ನೇಹಿತರು ನೋಡಿ, ತಕ್ಷಣವೇ ಪೊಲಿಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮಡಿಕೇರಿ ನಗರ ಪೊಲಿಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲೇ ನೋಡಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದೆ.

ಐದು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಲ್ಲಿಗೆ
ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಗ್ರಾಮದ ಆದಿವಾಸಿ ಜನಾಂಗದ ಯುವಕ ಸುಮಾರು 18 ವರ್ಷಗಳ ಹಿಂದೆ ಮಲ್ಲಿಗೆ ಎಂಬಾಕೆಯನ್ನು ವಿವಾಹವಾಗಿರುತ್ತಾರೆ. ದಂಪತಿಗೆ ಇಬ್ಬರು ಮಕ್ಕಳೂ ಜನಿಸಿದ್ದರು. ಆದರೆ, 2020 ರ ನವೆಂಬರ್​ನಲ್ಲಿ ಇದ್ದಕ್ಕಿದ್ದಂತೆ ಒಂದಿನ ಪತ್ನಿ ಮಲ್ಲಿಗೆ ನಾಪತ್ತೆಯಾಗಿದ್ದಾಳೆ. ಹಾಗಾಗಿ ಸುರೇಶ್ ಕುಶಾಲನಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಪೊಲಿಸರು ಒಂದಷ್ಟು ದಿನ ಹುಡುಕಿದರೂ ಮಲ್ಲಿಗೆ ಸಿಕ್ಕಿಲ್ಲ. ಹಾಗಾಗಿ ಎಲ್ಲರೂ ಸುಮ್ಮನಾಗಿದ್ದರು. ಪತ್ನಿ ಗಣೇಶ್​ ಎಂಬಾತನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಓಡಿ ಹೋಗಿರುವುದು ಗೊತ್ತಿದ್ದರೂ ಸುರೇಶ್​ ಮನನೊಂದು ಸುಮ್ಮನಾಗಿದ್ದರು.
*******************
ಸುರೇಶನ ದುರಾದೃಷ್ಟ ವಕ್ಕರಿಸಿತು ಕೊಲೆ ಆರೋಪ
*******************
ಆದರೆ ಸುರೇಶ್​ಗೆ ದುರಾದೃಷ್ಟ ವಕ್ಕರಿಸಿತು. 2021ರ ಜೂನ್​ ಮೂರನೇ ವಾರದಲ್ಲಿ ಕುಶಾಲನಗರಕ್ಕೆ ಖಾಸಗಿ ಕಾರಿನಲ್ಲಿ ಒಂದಷ್ಟು ಮಂದಿ ಪೊಲೀಸರು ಬಂದಿದ್ದಾರೆ. ಬಂದವರು, ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಪೊಲಿಸ್ ಠಾಣೆಯ ಸಿಬ್ಬಂದಿಯಾಗಿರುತ್ತಾರೆ. ಅವರು ಸುರೇಶನನ್ನು ಬರ ಹೇಳಿ, ಮಹಿಳೆಯೊಬ್ಬಳ ಮೃತದೇಹ ಸಿಕ್ಕಿದೆ, ಬಂದು ಗುರುತು ಪತ್ತೆ ಮಾಡು ಎಂದು ಬಲವಂತದಿಂದ ಬೆಟ್ಟದಪುರಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಯಾವುದೋ ಮಹಿಳೆಯ ಸೀರೆ ಲಂಗ, ಒಳ ಉಡುಪು ಚಪ್ಪಲಿ ಎಲ್ಲಾ ತೋರಿಸಿ, ‘ಇದು ನಿನ್ನದೇ ಹೆಂಡತಿಯದ್ದು. ನೀನೇ ಕೊಲೆ ಮಾಡಿದ್ದೀ, ಒಪ್ಪಿಕೋ’ ಎಂದು ಚಿತ್ರ ಹಿಂಸೆ ಕೊಟ್ಟಿದ್ದರಂತೆ.

ಇದೇ ಪ್ರಕರಣದಲ್ಲಿ 18-07-2021ರಲ್ಲಿ ಬೆಟ್ಟದಪುರ ಠಾಣೆಯಲ್ಲಿ ಸುರೇಶ್ ವಿರುದ್ಧ ಪ್ರಕರಣ ಕೂಡ ದಾಖಲಾಗಿ ನಂತರ ಅವರು ಜೈಲು ಸೇರಿದ್ದಾರೆ.
*******************
ಡಿಎನ್​ಎ ಪರೀಕ್ಷೆ ಮಾಡಿದಾಗ ಹೊರಬಂತು ರಹಸ್ಯ!

ಜೈಲುಪಾಲಾದ ಸುರೇಶ್​ ಗೆ ಮೈಸೂರಿನ ಪಾಂಡು ಪೂಜಾರಿ ಎಂಬ ವಕೀಲರ ರೂಪದಲ್ಲಿ ಸಹಾಯ ಬರುತ್ತದೆ. 2022ರ ಜನವರಿಯಲ್ಲಿ ವಕೀಲರ ಕೊರಿಕೆ ಮೇರೆಗೆ ಪೊಲೀಸರು ಸತ್ತಿದ್ದಾಳೆ ಎಂದು ತಿಳಿಸಿದ್ದ ಮಹಿಳೆಯ ಅಸ್ತಿ ಪಂಜರ ಹಾಗೂ ಮಲ್ಲಿಗೆಯ ತಾಯಿಯ ರಕ್ತದ ಮಾದರಿ ಸಂಗ್ರಹಿಸಿ ಡಿಎನ್​ಎ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಆದರೆ ಅಲ್ಲಿ ಬೆಟ್ಟದಪುರ ಪೊಲಿಸರು ಮಲ್ಲಿಗೆಯದ್ದು ಎಂದು ಪ್ರತಿಪಾದಿಸಿದ ದೇಹ ಆಕೆಯದ್ದಲ್ಲ ಎಂಬ ವರದಿ ಬರುತ್ತದೆ. ಆದರೂ ಬೆಟ್ಟದಪುರ ಪೊಲೀಸರು ಸುರೇಶನನ್ನು ಎರಡು ವರ್ಷ ಜೈಲಿನಲ್ಲಿ ಕೊಳೆಯುವಂತೆ ಮಾಡಿರುತ್ತಾರೆ. ಇದಾದ ಬಳಿಕ ವಕೀಲ ಪಾಂಡು, ಹರಸಾಸಹಪಟ್ಟು ಹೈಕೋರ್ಟ್​ ಮೊರೆ ಹೋಗಿ 2024ರಲ್ಲಿ ಸುರೇಶ್​​ ಅವರನ್ನು ಜಾಮೀನಿನ ಮೇಲೆ ಬಿಡಿಸಿಕೊಂಡು ಬಂದಿದ್ದರು.
*******************
ಪತ್ನಿಯ ಹುಡುಕಿಕೊಡುವಂತೆ ಮತ್ತೆ ಪೊಲೀಸ್ ಮೊರೆ ಹೋಗಿದ್ದ ಸುರೇಶ್

ಇಷ್ಟೆಲ್ಲ ಆದ ಬಳಿಕ, ಕೊಲೆಯಾಗಿರುವ ಮಹಿಳೆ ತನ್ನ ಹೆಂಡತಿಯಲ್ಲ. ತಾನು ಕೊಲೆ ಮಾಡಿಲ್ಲ, ಹೆಂಡತಿಯನ್ನು ಹುಡುಕಿಕೊಡಿ ಎಂದು ಸುರೇಶ್ ಮತ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ವಕೀಲರು ಆರೋಪಿಸಿದ್ದಾರೆ.
*******************
ಮಡಿಕೇರಿಯಲ್ಲಿ ಲವರ್ ಜತೆ ಮಲ್ಲಿಗೆ ಪ್ರತ್ಯಕ್ಷ: ಸುರೇಶ್ ಸ್ನೇಹಿತರು ಶಾಕ್!

ಇಷ್ಟೆಲ್ಲ ಬೆಳವಣಿಗೆಗಳು ನಡೆಯುತ್ತಿರುವಾಗ ಇದ್ದಕ್ಕಿದ್ದ ಹಾಗೆ ಕೊಲೆಯಾಗಿದ್ದಾಳೆ ಎಂಬುದಾಗಿ ಭಾವಿಸಲಾಗಿದ್ದ ಮಲ್ಲಿಗೆ ಜೀವಂತವಾಗಿ ಮಡಿಕೇರಿ ಹೋಟೆಲ್​​ನಲ್ಲಿ ತಿಂಡಿ ತಿನ್ನುತ್ತಾ ಇರುವುದು ಸುರೇಶ್ ಹಾಗೂ ಅವರ ಸ್ನೇಹಿತರ ಕಣ್ಣಿಗೆ ಬಿದ್ದಿದೆ. ಈ ಅವಕಾಶ ಬಿಟ್ಟರೆ ಮತ್ತೆ ಸಿಗಲ್ಲ ಎಂದು ಯೋಚಿಸಿದ ಸುರೇಶ್​ ಮತ್ತು ಆತನ ಸ್ನೇಹಿತರು ಮಡಿಕೇರಿ ಪೊಲಿಸರ ಸಹಾಯ ಪಡೆದು ಮಲ್ಲಿಗೆಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆಕೆ ತನ್ನ ಪ್ರಿಯಕರ ಗಣೇಶನ ಜೊತೆ ವಿರಾಜಪೇಟೆ ತಾಲ್ಲೂಕಿನ ಟಿ. ಶೆಟ್ಟಿಗೇರಿ ಗ್ರಾಮದಲ್ಲಿ ವಾಸವಿರುವುದಾಗಿ ಹೇಳಿದ್ದಾಳೆ.

ಸದ್ಯ ಮಲ್ಲಿಗೆಯನ್ನು ಕುಶಾಲನಗರ ಗ್ರಾಮಾಂತರ ಠಾಣಾ ಪೊಲೀಸರು ಬೆಟ್ಟದಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ವಕೀಲ ಪಾಂಡು ಅವರ ಶ್ರಮದಿಂದಾಗಿ ಮಲ್ಲಿಗೆಯನ್ನು ಇದೀಗ ಮೈಸೂರು ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಇದೀಗ ಸುಳ್ಳು ಆರೋಪ ಪಟ್ಟಿ ದಾಖಲಿಸಿದ ಬೆಟ್ಟದಪುರ ಠಾಣೆಯ ತನಿಖಾಧಿಕಾರಿ, ಮೈಸೂರು ಎಸ್​ಪಿ ಸೇರಿದಂತೆ ಹಲವು ಅಧಿಕಾರಿಗಳನ್ನು ವಿಚಾರಣೆಗೆ ಕರೆದಿದೆ. ಕುಶಾಲನಗರ ಗ್ರಾಮಾಂತರ ಠಾಣೆ ಪೊಲಿಸರು ಯಾಕೆ ಮಲ್ಲಿಗೆಯನ್ನು ಹುಡುಕಲಿಲ್ಲ? ಇತ್ತ ಬೆಟ್ಟದಪುರ ಠಾಣೆ ಪೊಲೀಸರು ಯಾವುದೋ ಮಹಿಳೆಯ ಮೃತದೇಹವನ್ನು ಮಲ್ಲಿಗೆಯದ್ದೇ ಮೃತದೇಹ ಎಂದು ಯಾಕೆ ಕೇಸ್ ದಾಖಲಿಸಿದ್ದರು? ಹಾಗೆಯೇ ಅಂದು ಪತ್ತೆಯಾದ ದೇಹ ಯಾರದ್ದು? ಆಕೆಯನ್ನು ಯಾರು ಕೊಲೆ ಮಾಡಿದ್ದು? ಈ ಎಲ್ಲಾ ವಿಚಾರಗಳು ಇದೀಗ ಹೊಸ ತನಿಖೆಯಿಂದ ಬೆಳಕಿಗೆ ಬರಬೇಕಿದೆ. ಹಾಗೆಯೇ ಈ ಮೂಲಕ ಅಮಾಯಕ ಆದಿವಾಸಿ ಸುರೇಶ್​ ಮತ್ತು ಆತನ ಕುಟುಂಬಕ್ಕೆ ನ್ಯಾಯ ದೊರಕಬೇಕಿದೆ. ಕೃಪೆ… Tv 9

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 hour ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

4 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

16 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

17 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

20 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

22 hours ago