ಪತ್ನಿ‌ ಕೊಂದು ಮಿಸ್ಸಿಂಗ್ ಕಂಪ್ಲೇಂಟ್ ಕೊಟ್ಟ ಭೂಪ: ಆ ಒಂದು ಕುರುಹುವಿನಿಂದ ಸಿಕ್ಕಿಬಿದ್ದ ಹಂತಕ ಪತಿ.. ಇಲ್ಲಿದೆ ಈ ಕುರಿತ ಒಂದು ಸ್ಟೋರಿ‌…

ದೊಡ್ಡಬಳ್ಳಾಪುರ: ಅನಾಥ ಯುವತಿಗೆ ಬಾಳು ಕೊಡುವುದಾಗಿ ಮದುವೆಯಾಗಿದ್ದ ಆ ಭೂಪ. ಆದರೆ, ಪರಸ್ತ್ರೀ ವ್ಯಾಮೋಹ ಅನಾಥೆಯ ಎರಡು ವರ್ಷದ ದಾಂಪತ್ಯಕ್ಕೆ ಹುಳಿ ಹಿಂಡಿ, ಗೃಹಿಣಿಯ ಸಾವಿಗೆ ಮುನ್ನುಡಿ ಬರೆಯಿತು.

ಕರೇನಹಳ್ಳಿಯ ನಿವಾಸಿ ವೀಣಾ ತನ್ನ ಪತಿಯಿಂದಲೇ ದಾರುಣವಾಗಿ ಹತ್ಯೆಗೀಡಾದ ದುರ್ದೈವಿ. ಪತಿ‌ ರವಿಚಂದ್ರನೇ ಹಂತಕ.

ಪೊಲೀಸರು ಪ್ರಕರಣ ಭೇದಿಸಿದ್ದು ಹೇಗೆ..?

ವೀಣಾ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ‌ ಮಾಡುತ್ತಿದ್ದರು. ಏ.21 ರಂದು ತನ್ನ ಪತ್ನಿ ಕೆಲಸಕ್ಕೆ ಹೋದವಳು ವಾಪಸ್ ಬರಲಿಲ್ಲ ಎಂದು ಹೇಳಿ ಪತಿ ರವಿಚಂದ್ರ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ. ಮರುದಿನ ಬಂದು ಮಹಿಳಾ ಠಾಣೆಗೆ ದೂರು ನೀಡುವಂತೆ ಪೊಲೀಸರು ತಿಳಿಸಿದ್ದರು. ಆದರೆ, ರವಿಚಂದ್ರ ಏ.25 ರಂದು ಬಂದು ದೂರು ದಾಖಲಿಸಿದ್ದ.

ಇದಾದ ಒಂದು ವಾರಕ್ಕೆ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿಯ ಅರಣ್ಯ ಪ್ರದೇಶದಲ್ಲಿ  ಸುಟ್ಟು ಕರಕಲಾಗಿರುವ ಅಪರಿಚಿತ ಮಹಿಳೆಯ ಶವ ನೋಡಿ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಸಾದಿಕ್ ಪಾಷ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಯಾವುದೇ ಸಾಕ್ಷ್ಯ‌ ಸಿಗದಂತೆ ಮೃತದೇಹ ಸುಟ್ಟು ಹಾಕಿದ್ದರಿಂದ ತನಿಖೆ ಸವಾಲಾಗಿ ಪರಿಣಮಿಸಿತ್ತು.

ತನಿಖೆ ಆರಂಭಿಸಿದ ಪೊಲೀಸರು ವಿವಿಧ ಠಾಣೆಗಳಲ್ಲಿ ದಾಖಲಾದ ನಾಪತ್ತೆಯಾದ ಪ್ರಕರಣಗಳನ್ನು ಪರಿಶೀಲಿಸಿದಾಗ ಏಪ್ರಿಲ್ 25 ರಂದು ರವಿಚಂದ್ರ ಎಂಬುವರು ನೀಡಿದ್ದ ದೂರು ಗಮನಕ್ಕೆ ಬಂದಿದೆ.

ಅಪರಿಚಿತ‌ ಮಹಿಳೆಯ ಮೃತದೇಹ ಸಿಕ್ಕ ಜಾಗದಲ್ಲಿ ದೊರೆತ ಕಾಲುಂಗುರ, ಕಿವಿ ಓಲೆ, ಕಾಲ್ಗೆಜ್ಜೆಯನ್ನು ನಾಪತ್ತೆಯಾದ ಮಹಿಳೆಯ‌ ಸಂಬಂಧಿಕರಿಗೆ ತೋರಿಸಿದಾಗ ಗುರುತು ಪತ್ತೆಯಾಯಿತು. ನಂತರ ಮೃತಳ ಗಂಡನನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದಾಗ ಅಸಲಿ ಸತ್ಯ ಬಾಯ್ಬಿಟ್ಟ ಎಂದು ಇನ್ ಸ್ಪೆಕ್ಟರ್ ಸಾದಿಕ್‌ ಪಾಷಾ ವಿವರಿಸಿದರು.

ಪರಸ್ತ್ರೀ ಜೊತೆ ಅನೈತಿಕ ಸಂಬಂಧವೇ ಕೊಲೆಗೆ ಕಾರಣ

ಆರೋಪಿ ರವಿಚಂದ್ರ ಪರಸ್ತ್ರೀಯೊಂದಿಗೆ ಅನೈತಿಕ ಸಂಬಂಧ ಇರಿಸಿಕೊಂಡಿದ್ದ ವಿಷಯ ವೀಣಾಳಿಗೆ ಗೊತ್ತಾಗಿ ನಿತ್ಯ ಗಲಾಟೆ ನಡೆಯುತ್ತಿತ್ತು. ಆದರೆ, ಆಂಟಿಯನ್ನು ಬಿಡಲು ಒಲ್ಲದ ರವಿಚಂದ್ರ, ಮಧ್ಯರಾತ್ರಿ ಹೆಂಡತಿ ಮಲಗಿದ‌ ಮೇಲೆ ರೂಮಿಗೆ ಬೀಗ ಹಾಕಿಕೊಂಡು ಆಂಟಿ ಮನೆ ಸೇರಿಕೊಳ್ಳುತ್ತಿದ್ದ. ಈ ಕುರಿತು ಹಲವಾರು ಬಾರಿ ನ್ಯಾಯ ಪಂಚಾಯಿತಿ ಮಾಡಿ ಗಂಡನಿಗೆ ಬುದ್ಧಿವಾದ ಹೇಳಿದರೂ ಉಪಯೋಗವಾಗಲಿಲ್ಲ. ಇದನ್ನು ಹೀಗೆ ಬಿಟ್ಟರೆ ನನಗೆ ತೊಂದರೆ ಎಂದು ಭಾವಿಸಿ ಹೆಂಡತಿಯನ್ನು ಮುಗಿಸಲು ರವಿ ಸಂಚು ರೂಪಿಸಿದ್ದ.

ಏಪ್ರಿಲ್ 21 ರಂದು ಆಕೆ ಕೆಲಸ ಮಾಡುತ್ತಿದ್ದ ಗಾರ್ಮೆಂಟ್ಸ್ ಫ್ಯಾಕ್ಟರಿ ಹೋಗಿ, ಕೆಲಸ ಬಿಟ್ಟ ನಂತರ ಹೆಂಡತಿಯನ್ನು ಬೈಕ್ ನಲ್ಲಿ ಜೊತೆಯಾಗಿ ಕರೆದುಕೊಂಡು ತೂಬಗೆರೆ ಸಮೀಪದ ನಾರಸಿಂಹನಹಳ್ಳಿಯ ಅರಣ್ಯ ಪ್ರದೇಶಕ್ಕೆ ಹೋಗಿದ್ದ. ಅಲ್ಲಿ ಕೆಲಹೊತ್ತು ಇಬ್ಬರ ನಡುವೆ ಮಾತುಕತೆ, ಗಲಾಟೆ ನಡೆದಿದೆ. ಹೆಂಡತಿ ತನ್ನ ಮಾತು ಕೇಳದಿದ್ದಾಗ ಆಕೆಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ಸಾಕ್ಷಿ ನಾಶ ಮಾಡಲು ಬೈಕಿನಿಂದ ಪೆಟ್ರೋಲ್ ತೆಗೆದು ಶವವನ್ನು ಸುಟ್ಟುಹಾಕಿದ್ದಾನೆ.

ಅಂದು ರಾತ್ರಿ ಮನೆಗೆ ಬಂದವನು ತನಗೇನು ಗೊತ್ತೇ ಇಲ್ಲ ಎಂಬಂತೆ, ಅಕ್ಕಪಕ್ಕದ ಮನೆಯ ಬಳಿ ಹೋಗಿ ವೀಣಾ ಇದ್ದಾಳಾ ಎಂದು ಕೇಳಿದ್ದಾನೆ, ರಾತ್ರಿ 10 ಗಂಟೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಹೋಗಿ ಹೆಂಡತಿ ಕಾಣೆಯಾಗಿರುವ ಬಗ್ಗೆ ದೂರು ನೀಡಲು ಬಂದಿದ್ದ. ಗ್ರಾಮಾಂತರ ಠಾಣೆ ಪೊಲೀಸರು ಮಹಿಳಾ ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದರು.

ಗಂಡನಿಗೆ ಹರ್ನಿಯಾ ಆಪರೇಷನ್

ಕೊಲೆ ಆರೋಪಿಗೆ ಕೆಲ ದಿನಗಳ ಹಿಂದೆ ಹರ್ನಿಯಾ ಆಪರೇಷನ್ ಆಗಿತ್ತು, ಲೈಂಗಿಕ‌ ಕ್ರಿಯೆಯಲ್ಲಿ ತೊಡಗಬಾರದು ಎಂದು ವೈದ್ಯರು ಸಲಹೆ ನೀಡಿದ್ದರು. ಆಗ ತನ್ನ ಹೆಂಡತಿ ಮೇಲೆ ಸದಾ ಅನುಮಾನ ಪಡುತ್ತಿದ್ದ. ಹೆಂಡತಿಯ ಫೋನ್ ಪರಿಶೀಲನೆ, ಆಕೆಯ ಚಲನವಲನದ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದ. ಆದರೆ ತಾನು‌ ಮಾತ್ರ ಬೇರೊಬ್ಬ ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ, ಈತನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಪತಿ ಲಾರಿ ಡ್ರೈವರ್ ಆಗಿದ್ದ. ಒಂದೆರಡು ತಿಂಗಳು ಮನೆಯತ್ತ ಬರುತ್ತಿರಲಿಲ್ಲ. ಇದೇ ಅವಕಾಶಕ್ಕಾಗಿ ಕಾದು ಆಕೆಯೊಂದಿಗೆ ಅನೈತಿಕ ಸಂಬಂಧ ಬೆಳೆಸಿಕೊಂಡಿದ್ದ.

ಮರ್ಯಾದೆಗೆ ಹೆದರಿ ಕಲ್ಪನಾ ಆತ್ಮಹತ್ಯೆ: 

ವೀಣಾ ಕೊಲೆ ಆರೋಪದಲ್ಲಿ ರವಿಯನ್ನು ಬಂಧನ ಮಾಡಿರುವ ವಿಚಾರ ತಿಳಿದು ಈತನೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಕರೇನಹಳ್ಳಿ ನಿವಾಸಿ ಕಲ್ಪನಾ ಕೂಡ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆತನ ಕಾಮದ ತೀಟೆಗೆ ಇಬ್ಬರು ಮಹಿಳೆಯರ ದಾರುಣ ಸಾವಾಗಿದೆ. ಇಬ್ಬರು ಮಹಿಳೆಯರಿಗೆ ಒಂದೊಂದು ಮಗು ಇತ್ತು, ಆ ಮಕ್ಕಳು ತಾಯಂದಿರು ಇಲ್ಲದೆ ತಬ್ಬಲಿಗಳಾಗಿವೆ.

Ramesh Babu

Journalist

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

6 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

7 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

12 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

24 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

1 day ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

1 day ago