ಪತ್ರಕರ್ತರಿಂದ ಇನ್ನಷ್ಟು ಸಮಾಜಮುಖಿ ಕೆಲಸಗಳಾಗಲಿ-ವೈದ್ಯಾಧಿಕಾರಿ ಡಾ.ರಮೇಶ್

ದೊಡ್ಡಬಳ್ಳಾಪುರ : ಪತ್ರಕರ್ತರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಶ್ಲಾಘನೀಯ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಮೇಶ್ ಹೇಳಿದರು.

78ನೇ ಸ್ವಾತಂತ್ರ್ಯ ದಿನಧ ಅಂಗವಾಗಿ ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪತ್ರಕರ್ತರು ಲೇಖನ, ಸುದ್ದಿ ಮಾಡುವುದರಲ್ಲಿ ತೊಡಗಿಸಿಕೊಳ್ಳುವಲ್ಲಿ ಬ್ಯುಸಿಯಾಗಿರುತ್ತಾರೆ, ಈ ಮಧ್ಯೆ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣೆ ಮಾಡುವ ಮೂಲಕ ಸ್ವಾತಂತ್ರ್ಯ ದಿನ ಆಚರಣೆ ಮಾಡಿದ್ದು ಅಭಿನಂದನೀಯ, ನಿಮ್ಮ ಮೂಲಕ ಇನ್ನಷ್ಟು ಸಮಾಜಮುಖಿ ಕೆಲಸಗಳು ನಡೆಯಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಮೂಳೆ ತಜ್ಞರಾದ ಮಂಜುನಾಥ್, ಡಾ.ಪರಮೇಶ್ವರ್ ಡಾ.ವೈಶಾಕ್ ಗೌಡ, ಕಚೇರಿ ಸಿಬ್ಬಂದಿ ಶ್ರೀನಿವಾಸ್ ಮೂರ್ತಿ, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ದೇವರಾಜ್, ಜಿಲ್ಲಾಧ್ಯಕ್ಷ ಎಚ್ಎಸ್ ಅಗ್ನಿ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಚೆನ್ನಿಗರಾಯಪ್ಪ, ಉಪಾಧ್ಯಕ್ಷರಾದ ಆನಂದ್ ಕುಮಾರ್, ತಾಲೂಕು ಅಧ್ಯಕ್ಷ ರಾಜು ಸಣ್ಣಕ್ಕಿ, ತಾಲೂಕು ಉಪಾಧ್ಯಕ್ಷ ಡಿಸಿ ಚೌಡರಾಜ್ ಪ್ರಧಾನ ಕಾರ್ಯದರ್ಶಿ ಜನಪರ ಮಂಜುನಾಥ, ಖಜಾಂಚಿ ಹರಿಕುಮಾರ್, ನಿರ್ದೇಶಕರಾದ ಶಿವಕುಮಾರ್, ಉಮೇಶ್, ಜಯರಾಮಪ್ಪ, ಜಿಲ್ಲಾ ಸಮಿತಿ ಸದಸ್ಯ ಗೋಪಾಲಪ್ಪ, ಪ್ರಜಾ ವಿಮೋಚನ ಬಹುಜನ ಸಮಿತಿ ನಗರಾಧ್ಯಕ್ಷ ಮುತ್ತೂರು ಶ್ರೀನಿವಾಸ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಘಟಕದ ಲಕ್ಷ್ಮೀ ಶ್ರೀನಿವಾಸ್, ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

55 minutes ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

8 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

17 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

20 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

1 day ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

1 day ago