ದೊಡ್ಡಬಳ್ಳಾಪುರ : ಪತ್ರಕರ್ತರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಶ್ಲಾಘನೀಯ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಮೇಶ್ ಹೇಳಿದರು.
78ನೇ ಸ್ವಾತಂತ್ರ್ಯ ದಿನಧ ಅಂಗವಾಗಿ ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪತ್ರಕರ್ತರು ಲೇಖನ, ಸುದ್ದಿ ಮಾಡುವುದರಲ್ಲಿ ತೊಡಗಿಸಿಕೊಳ್ಳುವಲ್ಲಿ ಬ್ಯುಸಿಯಾಗಿರುತ್ತಾರೆ, ಈ ಮಧ್ಯೆ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣೆ ಮಾಡುವ ಮೂಲಕ ಸ್ವಾತಂತ್ರ್ಯ ದಿನ ಆಚರಣೆ ಮಾಡಿದ್ದು ಅಭಿನಂದನೀಯ, ನಿಮ್ಮ ಮೂಲಕ ಇನ್ನಷ್ಟು ಸಮಾಜಮುಖಿ ಕೆಲಸಗಳು ನಡೆಯಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಮೂಳೆ ತಜ್ಞರಾದ ಮಂಜುನಾಥ್, ಡಾ.ಪರಮೇಶ್ವರ್ ಡಾ.ವೈಶಾಕ್ ಗೌಡ, ಕಚೇರಿ ಸಿಬ್ಬಂದಿ ಶ್ರೀನಿವಾಸ್ ಮೂರ್ತಿ, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ದೇವರಾಜ್, ಜಿಲ್ಲಾಧ್ಯಕ್ಷ ಎಚ್ಎಸ್ ಅಗ್ನಿ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಚೆನ್ನಿಗರಾಯಪ್ಪ, ಉಪಾಧ್ಯಕ್ಷರಾದ ಆನಂದ್ ಕುಮಾರ್, ತಾಲೂಕು ಅಧ್ಯಕ್ಷ ರಾಜು ಸಣ್ಣಕ್ಕಿ, ತಾಲೂಕು ಉಪಾಧ್ಯಕ್ಷ ಡಿಸಿ ಚೌಡರಾಜ್ ಪ್ರಧಾನ ಕಾರ್ಯದರ್ಶಿ ಜನಪರ ಮಂಜುನಾಥ, ಖಜಾಂಚಿ ಹರಿಕುಮಾರ್, ನಿರ್ದೇಶಕರಾದ ಶಿವಕುಮಾರ್, ಉಮೇಶ್, ಜಯರಾಮಪ್ಪ, ಜಿಲ್ಲಾ ಸಮಿತಿ ಸದಸ್ಯ ಗೋಪಾಲಪ್ಪ, ಪ್ರಜಾ ವಿಮೋಚನ ಬಹುಜನ ಸಮಿತಿ ನಗರಾಧ್ಯಕ್ಷ ಮುತ್ತೂರು ಶ್ರೀನಿವಾಸ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಘಟಕದ ಲಕ್ಷ್ಮೀ ಶ್ರೀನಿವಾಸ್, ಮುಂತಾದವರು ಉಪಸ್ಥಿತರಿದ್ದರು.
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…