ದೊಡ್ಡಬಳ್ಳಾಪುರ : ಪತ್ರಕರ್ತರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಶ್ಲಾಘನೀಯ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಮೇಶ್ ಹೇಳಿದರು.
78ನೇ ಸ್ವಾತಂತ್ರ್ಯ ದಿನಧ ಅಂಗವಾಗಿ ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪತ್ರಕರ್ತರು ಲೇಖನ, ಸುದ್ದಿ ಮಾಡುವುದರಲ್ಲಿ ತೊಡಗಿಸಿಕೊಳ್ಳುವಲ್ಲಿ ಬ್ಯುಸಿಯಾಗಿರುತ್ತಾರೆ, ಈ ಮಧ್ಯೆ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣೆ ಮಾಡುವ ಮೂಲಕ ಸ್ವಾತಂತ್ರ್ಯ ದಿನ ಆಚರಣೆ ಮಾಡಿದ್ದು ಅಭಿನಂದನೀಯ, ನಿಮ್ಮ ಮೂಲಕ ಇನ್ನಷ್ಟು ಸಮಾಜಮುಖಿ ಕೆಲಸಗಳು ನಡೆಯಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಮೂಳೆ ತಜ್ಞರಾದ ಮಂಜುನಾಥ್, ಡಾ.ಪರಮೇಶ್ವರ್ ಡಾ.ವೈಶಾಕ್ ಗೌಡ, ಕಚೇರಿ ಸಿಬ್ಬಂದಿ ಶ್ರೀನಿವಾಸ್ ಮೂರ್ತಿ, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ದೇವರಾಜ್, ಜಿಲ್ಲಾಧ್ಯಕ್ಷ ಎಚ್ಎಸ್ ಅಗ್ನಿ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಚೆನ್ನಿಗರಾಯಪ್ಪ, ಉಪಾಧ್ಯಕ್ಷರಾದ ಆನಂದ್ ಕುಮಾರ್, ತಾಲೂಕು ಅಧ್ಯಕ್ಷ ರಾಜು ಸಣ್ಣಕ್ಕಿ, ತಾಲೂಕು ಉಪಾಧ್ಯಕ್ಷ ಡಿಸಿ ಚೌಡರಾಜ್ ಪ್ರಧಾನ ಕಾರ್ಯದರ್ಶಿ ಜನಪರ ಮಂಜುನಾಥ, ಖಜಾಂಚಿ ಹರಿಕುಮಾರ್, ನಿರ್ದೇಶಕರಾದ ಶಿವಕುಮಾರ್, ಉಮೇಶ್, ಜಯರಾಮಪ್ಪ, ಜಿಲ್ಲಾ ಸಮಿತಿ ಸದಸ್ಯ ಗೋಪಾಲಪ್ಪ, ಪ್ರಜಾ ವಿಮೋಚನ ಬಹುಜನ ಸಮಿತಿ ನಗರಾಧ್ಯಕ್ಷ ಮುತ್ತೂರು ಶ್ರೀನಿವಾಸ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಘಟಕದ ಲಕ್ಷ್ಮೀ ಶ್ರೀನಿವಾಸ್, ಮುಂತಾದವರು ಉಪಸ್ಥಿತರಿದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…