ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು- ಸಿಎಂ ಸಿದ್ದರಾಮಯ್ಯ

ವಡ್ಡರ್ಸೆ ರಘುರಾಮ ಶೆಟ್ಟರು ಸಮ ಸಮಾಜ ನಿರ್ಮಾಣದ ಕನಸು ಕಂಡ ಪತ್ರಕರ್ತರು. ಜಾತಿ ಸಮಸ್ಯೆಗಳ ವಿರುದ್ಧ ಬರೆದವರು. ಸಮಾಜದ ಧ್ವನಿಯಂತೆ ಬಾಳಿದವರು. ಪತ್ರಿಕಾವೃತ್ತಿಯಲ್ಲಿ ತೊಡಗಿರುವವರಿಗೆ ವಡ್ಡರ್ಸೆಯವರಂತವರು ಮಾದರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಬೆಂಗಳೂರಿನ ವಾರ್ತಾಸೌಧದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಮಾಧ್ಯಮಗಳ ಅಭಿಪ್ರಾಯಗಳು ವಸ್ತುಸ್ಥಿತಿಯಿಂದ ಕೂಡಿರಬೇಕು. ಅನೇಕ ಬಾರಿ ಸುದ್ದಿಗಳಲ್ಲಿ ಊಹಾ ಪತ್ರಿಕೋದ್ಯಮ ಕಾಣುತ್ತದೆ, ಅದು ಆಗಬಾರದು. ಸತ್ಯ – ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ವಿರೋಧಿ ಕಾರ್ಯವನ್ನು ಸರ್ಕಾರ ಮಾಡಿದರೆ ಅದನ್ನೂ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು.

ಸಾಮಾಜಿಕ ನ್ಯಾಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿರಬೇಕಾದ ವಿಚಾರವಲ್ಲ. ಎಲ್ಲರಿಗೂ ದೇಶದ ವ್ಯವಸ್ಥೆಯಲ್ಲಿ ಇನ್ನೂ ಸಹ ಸಮಾನವಾದ ಅವಕಾಶ ಸಿಗದಿರಲು ಕಾರಣಗಳೇನು ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಧ್ಯಮಗಳು ಮಾಡಬೇಕು ಎಂದು ಹೇಳಿದರು.

ಇತ್ತೀಚಿಗೆ ಟಿವಿ ಚಾನೆಲ್‌ಗಳು ಇನ್ನೊಬ್ಬರ ಹೇಳಿಕೆ ಬಗ್ಗೆ ಪ್ರತಿಕ್ರಿಯೆಯನ್ನು ಕೇಳಿ ಬ್ರೇಕಿಂಗ್ ಸುದ್ದಿ ಮಾಡುತ್ತವೆ. ಅದರಲ್ಲಿ ಅನೇಕ ವಿಚಾರಗಳು ಸಮಾಜಕ್ಕೆ ಸಂಬಂಧವೇ ಪಟ್ಟಿರುವುದಿಲ್ಲ. ಸಮಾಜಕ್ಕೆ ಸಂಬಂಧಪಟ್ಟಂತಹ ವಿಚಾರಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿ. ಭಾನು ಮುಷ್ತಾಕ್‌ ದಸರಾ ಉದ್ಘಾಟನೆಯನ್ನು ವಿಷಯವನ್ನಾಗಿಸಲು ಹೊರಟರು. ಹೈಕೋರ್ಟ್‌ ಮತ್ತು ಸುಪ್ರಿಂಕೋರ್ಟ್‌ ಸಹ ಇದನ್ನು ವಜಾಗೊಳಿಸಿದೆ. ದಸರಾ ಹಬ್ಬ ಧಾರ್ಮಿಕ ವಿಚಾರವಲ್ಲ, ಅದು ನಾಡ ಹಬ್ಬವಾಗಿದ್ದು, ಸಾಂಸ್ಕೃತಿಕ ವಿಚಾರವಾಗಿದೆ ಎಂದು ತಿಳಿಸಿದರು.

ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು ಹೆಚ್ಚು ಒತ್ತು ನೀಡಬೇಕು. ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು. ಸ್ವಾತಂತ್ರ್ಯ ಪೂರ್ವದ ಮಾಧ್ಯಮ ರಂಗಕ್ಕೂ ಇಂದಿನ ಮಾಧ್ಯಮ ರಂಗಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಸ್ವಾತಂತ್ರ್ಯೋತ್ತರ ಪತ್ರಿಕೋದ್ಯಮ ಶ್ರೀಮಂತರ ಕೈಗಳಿಗೆ ಸಿಕ್ಕಿಹಾಕಿಕೊಂಡಿದೆ. ಪತ್ರಕರ್ತರು ಇದನ್ನು ಅರ್ಥ ಮಾಡಿಕೊಂಡು ಕರ್ತವ್ಯ ನಿರ್ವಹಿಸಬೇಕಿದೆ ಎಂದು ಹೇಳಿದರು.

ಸುಮಾರು 2017ರಿಂದ ಬಾಕಿ ಇದ್ದ ಪ್ರಶಸ್ತಿಗಳನ್ನು ಇಂದು ಪ್ರದಾನ ಮಾಡಲಾಗಿದೆ. ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಿದರೆ ಉತ್ತಮ. ಅನೇಕ ವರ್ಷಗಳ ಪ್ರಶಸ್ತಿಗಳನ್ನು ಒಟ್ಟಿಗೆ ನೀಡುವುದು ಒಳ್ಳೆಯ ಪದ್ಧತಿಯಲ್ಲ ಎನ್ನುವುದು ನನ್ನ ಅಭಿಪ್ರಾಯ ಎಂದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

51 minutes ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

15 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

16 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

17 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

17 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

21 hours ago