ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು- ಸಿಎಂ ಸಿದ್ದರಾಮಯ್ಯ

ವಡ್ಡರ್ಸೆ ರಘುರಾಮ ಶೆಟ್ಟರು ಸಮ ಸಮಾಜ ನಿರ್ಮಾಣದ ಕನಸು ಕಂಡ ಪತ್ರಕರ್ತರು. ಜಾತಿ ಸಮಸ್ಯೆಗಳ ವಿರುದ್ಧ ಬರೆದವರು. ಸಮಾಜದ ಧ್ವನಿಯಂತೆ ಬಾಳಿದವರು. ಪತ್ರಿಕಾವೃತ್ತಿಯಲ್ಲಿ ತೊಡಗಿರುವವರಿಗೆ ವಡ್ಡರ್ಸೆಯವರಂತವರು ಮಾದರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಬೆಂಗಳೂರಿನ ವಾರ್ತಾಸೌಧದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಮಾಧ್ಯಮಗಳ ಅಭಿಪ್ರಾಯಗಳು ವಸ್ತುಸ್ಥಿತಿಯಿಂದ ಕೂಡಿರಬೇಕು. ಅನೇಕ ಬಾರಿ ಸುದ್ದಿಗಳಲ್ಲಿ ಊಹಾ ಪತ್ರಿಕೋದ್ಯಮ ಕಾಣುತ್ತದೆ, ಅದು ಆಗಬಾರದು. ಸತ್ಯ – ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ವಿರೋಧಿ ಕಾರ್ಯವನ್ನು ಸರ್ಕಾರ ಮಾಡಿದರೆ ಅದನ್ನೂ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು.

ಸಾಮಾಜಿಕ ನ್ಯಾಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿರಬೇಕಾದ ವಿಚಾರವಲ್ಲ. ಎಲ್ಲರಿಗೂ ದೇಶದ ವ್ಯವಸ್ಥೆಯಲ್ಲಿ ಇನ್ನೂ ಸಹ ಸಮಾನವಾದ ಅವಕಾಶ ಸಿಗದಿರಲು ಕಾರಣಗಳೇನು ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಧ್ಯಮಗಳು ಮಾಡಬೇಕು ಎಂದು ಹೇಳಿದರು.

ಇತ್ತೀಚಿಗೆ ಟಿವಿ ಚಾನೆಲ್‌ಗಳು ಇನ್ನೊಬ್ಬರ ಹೇಳಿಕೆ ಬಗ್ಗೆ ಪ್ರತಿಕ್ರಿಯೆಯನ್ನು ಕೇಳಿ ಬ್ರೇಕಿಂಗ್ ಸುದ್ದಿ ಮಾಡುತ್ತವೆ. ಅದರಲ್ಲಿ ಅನೇಕ ವಿಚಾರಗಳು ಸಮಾಜಕ್ಕೆ ಸಂಬಂಧವೇ ಪಟ್ಟಿರುವುದಿಲ್ಲ. ಸಮಾಜಕ್ಕೆ ಸಂಬಂಧಪಟ್ಟಂತಹ ವಿಚಾರಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿ. ಭಾನು ಮುಷ್ತಾಕ್‌ ದಸರಾ ಉದ್ಘಾಟನೆಯನ್ನು ವಿಷಯವನ್ನಾಗಿಸಲು ಹೊರಟರು. ಹೈಕೋರ್ಟ್‌ ಮತ್ತು ಸುಪ್ರಿಂಕೋರ್ಟ್‌ ಸಹ ಇದನ್ನು ವಜಾಗೊಳಿಸಿದೆ. ದಸರಾ ಹಬ್ಬ ಧಾರ್ಮಿಕ ವಿಚಾರವಲ್ಲ, ಅದು ನಾಡ ಹಬ್ಬವಾಗಿದ್ದು, ಸಾಂಸ್ಕೃತಿಕ ವಿಚಾರವಾಗಿದೆ ಎಂದು ತಿಳಿಸಿದರು.

ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು ಹೆಚ್ಚು ಒತ್ತು ನೀಡಬೇಕು. ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು. ಸ್ವಾತಂತ್ರ್ಯ ಪೂರ್ವದ ಮಾಧ್ಯಮ ರಂಗಕ್ಕೂ ಇಂದಿನ ಮಾಧ್ಯಮ ರಂಗಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಸ್ವಾತಂತ್ರ್ಯೋತ್ತರ ಪತ್ರಿಕೋದ್ಯಮ ಶ್ರೀಮಂತರ ಕೈಗಳಿಗೆ ಸಿಕ್ಕಿಹಾಕಿಕೊಂಡಿದೆ. ಪತ್ರಕರ್ತರು ಇದನ್ನು ಅರ್ಥ ಮಾಡಿಕೊಂಡು ಕರ್ತವ್ಯ ನಿರ್ವಹಿಸಬೇಕಿದೆ ಎಂದು ಹೇಳಿದರು.

ಸುಮಾರು 2017ರಿಂದ ಬಾಕಿ ಇದ್ದ ಪ್ರಶಸ್ತಿಗಳನ್ನು ಇಂದು ಪ್ರದಾನ ಮಾಡಲಾಗಿದೆ. ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಿದರೆ ಉತ್ತಮ. ಅನೇಕ ವರ್ಷಗಳ ಪ್ರಶಸ್ತಿಗಳನ್ನು ಒಟ್ಟಿಗೆ ನೀಡುವುದು ಒಳ್ಳೆಯ ಪದ್ಧತಿಯಲ್ಲ ಎನ್ನುವುದು ನನ್ನ ಅಭಿಪ್ರಾಯ ಎಂದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

4 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

6 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

8 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

11 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

22 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

23 hours ago