ದೊಡ್ಡಬಳ್ಳಾಪುರ: ಮಾಧ್ಯಮದವರ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮಿಪತಿ ಅವರ ಹೇಳಿಕೆ ಖಂಡಿಸಿ ದೊಡ್ಡಬಳ್ಳಾಪುರದ ಸ್ಥಳೀಯ ಪತ್ರಕರ್ತರು ಇಂದು ನಡೆದ ಕಾಂಗ್ರೆಸ್ ಪತ್ರಿಕಾಗೋಷ್ಠಿ ಬಹಿಷ್ಕರಿಸಿ, ಹೊರನಡೆದರು.
ಏ.16 ರಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ನಡೆಸಿದ ಪತ್ರಿಕಾಗೋಷ್ಠಿ ವೇಳೆ ಲಕ್ಷ್ಮಿಪತಿ ಅವರು ಸ್ಥಳೀಯ ಪತ್ರಕರ್ತರ ಕುರಿತು ಕೇವಲವಾಗಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿ ಬಹಿಷ್ಕಾರ ಮಾಡಿದರು.
ಕಾಂಗ್ರೆಸ್ ಎಸ್ಸಿ/ಎಸ್ಟಿ ಸಮಿತಿ ವತಿಯಿಂದ ಇಂದು ಪತ್ರಿಕಾಗೋಷ್ಠಿ ಕರೆಯಲಾಗಿತ್ತು. ಗೋಷ್ಠಿಗೆ ಹಾಜರಾದ ಪತ್ರಕರ್ತರು, ಸಭೆ ಆರಂಭವಾಗುತ್ತಿದ್ದಂತೆ ಹೊರನಡೆದರು.
ಮಾಧ್ಯಮದವರನ್ನು ಕಡೆಗಣಿಸಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮಿಪತಿ ಅವರನ್ನು ಕೂಡಲೇ ಆ ಸ್ಥಾನದಿಂದ ಉಚ್ಛಾಟಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷದ ಯಾವ ಕಾರ್ಯಕ್ರಮವನ್ನು ವರದಿ ಮಾಡದಿರಲು ಸಮಾನ ಮನಸ್ಕ ಪತ್ರಕರ್ತರು ನಿರ್ಧಾರ ಕೈಗೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…