ದೊಡ್ಡಬಳ್ಳಾಪುರ: ಮಾಧ್ಯಮದವರ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮಿಪತಿ ಅವರ ಹೇಳಿಕೆ ಖಂಡಿಸಿ ದೊಡ್ಡಬಳ್ಳಾಪುರದ ಸ್ಥಳೀಯ ಪತ್ರಕರ್ತರು ಇಂದು ನಡೆದ ಕಾಂಗ್ರೆಸ್ ಪತ್ರಿಕಾಗೋಷ್ಠಿ ಬಹಿಷ್ಕರಿಸಿ, ಹೊರನಡೆದರು.
ಏ.16 ರಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ನಡೆಸಿದ ಪತ್ರಿಕಾಗೋಷ್ಠಿ ವೇಳೆ ಲಕ್ಷ್ಮಿಪತಿ ಅವರು ಸ್ಥಳೀಯ ಪತ್ರಕರ್ತರ ಕುರಿತು ಕೇವಲವಾಗಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿ ಬಹಿಷ್ಕಾರ ಮಾಡಿದರು.
ಕಾಂಗ್ರೆಸ್ ಎಸ್ಸಿ/ಎಸ್ಟಿ ಸಮಿತಿ ವತಿಯಿಂದ ಇಂದು ಪತ್ರಿಕಾಗೋಷ್ಠಿ ಕರೆಯಲಾಗಿತ್ತು. ಗೋಷ್ಠಿಗೆ ಹಾಜರಾದ ಪತ್ರಕರ್ತರು, ಸಭೆ ಆರಂಭವಾಗುತ್ತಿದ್ದಂತೆ ಹೊರನಡೆದರು.
ಮಾಧ್ಯಮದವರನ್ನು ಕಡೆಗಣಿಸಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮಿಪತಿ ಅವರನ್ನು ಕೂಡಲೇ ಆ ಸ್ಥಾನದಿಂದ ಉಚ್ಛಾಟಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷದ ಯಾವ ಕಾರ್ಯಕ್ರಮವನ್ನು ವರದಿ ಮಾಡದಿರಲು ಸಮಾನ ಮನಸ್ಕ ಪತ್ರಕರ್ತರು ನಿರ್ಧಾರ ಕೈಗೊಂಡಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…