ದೊಡ್ಡಬಳ್ಳಾಪುರ: ಮಾಧ್ಯಮದವರ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮಿಪತಿ ಅವರ ಹೇಳಿಕೆ ಖಂಡಿಸಿ ದೊಡ್ಡಬಳ್ಳಾಪುರದ ಸ್ಥಳೀಯ ಪತ್ರಕರ್ತರು ಇಂದು ನಡೆದ ಕಾಂಗ್ರೆಸ್ ಪತ್ರಿಕಾಗೋಷ್ಠಿ ಬಹಿಷ್ಕರಿಸಿ, ಹೊರನಡೆದರು.
ಏ.16 ರಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ನಡೆಸಿದ ಪತ್ರಿಕಾಗೋಷ್ಠಿ ವೇಳೆ ಲಕ್ಷ್ಮಿಪತಿ ಅವರು ಸ್ಥಳೀಯ ಪತ್ರಕರ್ತರ ಕುರಿತು ಕೇವಲವಾಗಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿ ಬಹಿಷ್ಕಾರ ಮಾಡಿದರು.
ಕಾಂಗ್ರೆಸ್ ಎಸ್ಸಿ/ಎಸ್ಟಿ ಸಮಿತಿ ವತಿಯಿಂದ ಇಂದು ಪತ್ರಿಕಾಗೋಷ್ಠಿ ಕರೆಯಲಾಗಿತ್ತು. ಗೋಷ್ಠಿಗೆ ಹಾಜರಾದ ಪತ್ರಕರ್ತರು, ಸಭೆ ಆರಂಭವಾಗುತ್ತಿದ್ದಂತೆ ಹೊರನಡೆದರು.
ಮಾಧ್ಯಮದವರನ್ನು ಕಡೆಗಣಿಸಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮಿಪತಿ ಅವರನ್ನು ಕೂಡಲೇ ಆ ಸ್ಥಾನದಿಂದ ಉಚ್ಛಾಟಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷದ ಯಾವ ಕಾರ್ಯಕ್ರಮವನ್ನು ವರದಿ ಮಾಡದಿರಲು ಸಮಾನ ಮನಸ್ಕ ಪತ್ರಕರ್ತರು ನಿರ್ಧಾರ ಕೈಗೊಂಡಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…
ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…