ಪತ್ರಕರ್ತರ ಕುರಿತು ಪ್ರಚಾರ ಸಮಿತಿ ಅಧ್ಯಕ್ಷರಿಂದ ಅವಹೇಳನ: ಪತ್ರಕರ್ತರಿಂದ ಕಾಂಗ್ರೆಸ್ ಕಾರ್ಯಕ್ರಮಗಳ ಬಹಿಷ್ಕಾರ

ದೊಡ್ಡಬಳ್ಳಾಪುರ: ಮಾಧ್ಯಮದವರ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮಿಪತಿ ಅವರ ಹೇಳಿಕೆ ಖಂಡಿಸಿ ದೊಡ್ಡಬಳ್ಳಾಪುರದ ಸ್ಥಳೀಯ ಪತ್ರಕರ್ತರು ಇಂದು ನಡೆದ ಕಾಂಗ್ರೆಸ್ ಪತ್ರಿಕಾಗೋಷ್ಠಿ ಬಹಿಷ್ಕರಿಸಿ, ಹೊರನಡೆದರು.

ಏ.16 ರಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ನಡೆಸಿದ ಪತ್ರಿಕಾಗೋಷ್ಠಿ ವೇಳೆ ಲಕ್ಷ್ಮಿಪತಿ ಅವರು ಸ್ಥಳೀಯ ಪತ್ರಕರ್ತರ ಕುರಿತು ಕೇವಲವಾಗಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿ ಬಹಿಷ್ಕಾರ ಮಾಡಿದರು.

 ಕಾಂಗ್ರೆಸ್ ಎಸ್ಸಿ/ಎಸ್ಟಿ ಸಮಿತಿ ವತಿಯಿಂದ ಇಂದು ಪತ್ರಿಕಾಗೋಷ್ಠಿ ಕರೆಯಲಾಗಿತ್ತು. ಗೋಷ್ಠಿಗೆ ಹಾಜರಾದ ಪತ್ರಕರ್ತರು, ಸಭೆ ಆರಂಭವಾಗುತ್ತಿದ್ದಂತೆ ಹೊರನಡೆದರು.

ಮಾಧ್ಯಮದವರನ್ನು ಕಡೆಗಣಿಸಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮಿಪತಿ ಅವರನ್ನು ಕೂಡಲೇ ಆ ಸ್ಥಾನದಿಂದ ಉಚ್ಛಾಟಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷದ ಯಾವ ಕಾರ್ಯಕ್ರಮವನ್ನು ವರದಿ ಮಾಡದಿರಲು ಸಮಾನ ಮನಸ್ಕ ಪತ್ರಕರ್ತರು ನಿರ್ಧಾರ ಕೈಗೊಂಡಿದ್ದಾರೆ.‌

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

40 minutes ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

1 hour ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

9 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

20 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago