ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕಿನ ಪತ್ರಕರ್ತರ ಭವನ ನಿರ್ಮಾಣ ಮಾಡುವುದು ಮತ್ತು ಕಾರ್ಯನಿರತ ಪತ್ರಕರ್ತರಿಗೆ ನಿವೇಶನ ಕೊಡಿಸುವುದು ನನ್ನ ಮುಖ್ಯ ಗುರಿ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್.ಡಿ. ಉಪ್ಪಾರ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್ ಎಸ್ ಘಾಟಿ ಯಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ನಡೆದ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲ್ಲೂಕು ಪತ್ರಕರ್ತರಲ್ಲಿ ಸಮನ್ವಯತೆ ಕೊರತೆ ಇದ್ದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಮಣಿಕವಾಗಿ ಸಂಘದ ಏಳ್ಗೆಗಾಗಿ ದುಡಿಯುತ್ತೇನೆ ಎಂದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಜಿ.ಶ್ರೀನಿವಾಸ ಮಾತನಾಡಿ, ಪತ್ರಕರ್ತರು ನೈಜ ಸುದ್ದಿಯನ್ನು ಪ್ರಕಟಿಸಬೇಕು ಸತ್ಯಾಸತ್ಯತೆಯನ್ನು ಅರಿತು ಸುದ್ದಿಗಳನ್ನು ಮಾಡಬೇಕು. 93 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಎಲ್ಲಾ ಪದಾಧಿಕಾರಿಗಳು ಒಗ್ಗಟ್ಟಾಗಿ ಸಂಘದ ನಿವೇಶನ ಮತ್ತು ಪತ್ರಕರ್ತರ ಭವನ ನಿರ್ಮಾಣಕ್ಕೆ ಶ್ರಮಿಸಲು ಮನವಿ ಮಾಡಿ, ನೂತನ ಸಾಲಿಗೆ ಆಯ್ಕೆಯಾದ ಪದಾದಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಆರ್.ರಮೇಶ್, ಜಿಲ್ಲಾ ಖಜಾಂಚಿ ಶಾಂತಮೂರ್ತಿ, ಉಪಾಧ್ಯಕ್ಷ ಮುರಳಿ ಮೋಹನ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಆರ್ ಸತೀಶ್, ನಾಮಿನಿ ಸದಸ್ಯ ಬಿ.ರಮೇಶ್, ಹೊಸಕೋಟೆ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಮಂಜುನಾಥ್ ಮತ್ತು ಪತ್ರಕರ್ತರು ಭಾಗವಹಿಸಿದ್ದರು.
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…