ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕಿನ ಪತ್ರಕರ್ತರ ಭವನ ನಿರ್ಮಾಣ ಮಾಡುವುದು ಮತ್ತು ಕಾರ್ಯನಿರತ ಪತ್ರಕರ್ತರಿಗೆ ನಿವೇಶನ ಕೊಡಿಸುವುದು ನನ್ನ ಮುಖ್ಯ ಗುರಿ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್.ಡಿ. ಉಪ್ಪಾರ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್ ಎಸ್ ಘಾಟಿ ಯಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ನಡೆದ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲ್ಲೂಕು ಪತ್ರಕರ್ತರಲ್ಲಿ ಸಮನ್ವಯತೆ ಕೊರತೆ ಇದ್ದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಮಣಿಕವಾಗಿ ಸಂಘದ ಏಳ್ಗೆಗಾಗಿ ದುಡಿಯುತ್ತೇನೆ ಎಂದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಜಿ.ಶ್ರೀನಿವಾಸ ಮಾತನಾಡಿ, ಪತ್ರಕರ್ತರು ನೈಜ ಸುದ್ದಿಯನ್ನು ಪ್ರಕಟಿಸಬೇಕು ಸತ್ಯಾಸತ್ಯತೆಯನ್ನು ಅರಿತು ಸುದ್ದಿಗಳನ್ನು ಮಾಡಬೇಕು. 93 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಎಲ್ಲಾ ಪದಾಧಿಕಾರಿಗಳು ಒಗ್ಗಟ್ಟಾಗಿ ಸಂಘದ ನಿವೇಶನ ಮತ್ತು ಪತ್ರಕರ್ತರ ಭವನ ನಿರ್ಮಾಣಕ್ಕೆ ಶ್ರಮಿಸಲು ಮನವಿ ಮಾಡಿ, ನೂತನ ಸಾಲಿಗೆ ಆಯ್ಕೆಯಾದ ಪದಾದಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಆರ್.ರಮೇಶ್, ಜಿಲ್ಲಾ ಖಜಾಂಚಿ ಶಾಂತಮೂರ್ತಿ, ಉಪಾಧ್ಯಕ್ಷ ಮುರಳಿ ಮೋಹನ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಆರ್ ಸತೀಶ್, ನಾಮಿನಿ ಸದಸ್ಯ ಬಿ.ರಮೇಶ್, ಹೊಸಕೋಟೆ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಮಂಜುನಾಥ್ ಮತ್ತು ಪತ್ರಕರ್ತರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…