ಪತ್ರಕರ್ತ ಪ್ರದೀಪ್ ಕುಮಾರ್ ಗೆ ಪಿಎಚ್ ಡಿ ಪದವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪತ್ರಕರ್ತ ಪ್ರದೀಪ್ ಕುಮಾರ್ ಆರ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಮಲ್ಟಿ ಮೀಡಿಯ ಎಂಬ ವಿಷಯದಲ್ಲಿ ಮಂಡಿಸಿದ ಮಹಾ ಪ್ರಬಂಧಕ್ಕೆ  ಅಮೇರಿಕಾದ ಬೋಸ್ಟನ್ ಇಂಪೀರಿಯಲ್ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.

ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುನ್ನಡೆಸುವಲ್ಲಿ, ಸಮುದಾಯಗಳೊಂದಿಗೆ ಯುವಕರನ್ನು ಸಬಲೀಕರಣಗೊಳಿಸುವಲ್ಲಿ ಮತ್ತು ಸುಸ್ಥಿರ ಭಾರತದ ಬೆಳವಣಿಗೆಯನ್ನು ಉತ್ತೇಜಿಸುವಲ್ಲಿ ತಮ್ಮ ಅವಿರತ ಪ್ರಯತ್ನಗಳ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದರ ಪರಿಣಾಮವಾಗಿ ಈ ಪ್ರತಿಷ್ಠಿತ ಡಾಕ್ಟರೇಟ್ ಪದವಿಯನ್ನು ನೀಡಲಾಗಿದೆ.

ಮುಂದಿನ ತಿಂಗಳು ಏ.4 ರಂದು ಗೋವಾದಲ್ಲಿ ನಡೆಯಲಿರುವ ವಿಶ್ವ ವಿದ್ಯಾಲಯದ ಘಟಿಕೋತ್ಸವದಲ್ಲಿ ವಿತರಣೆಯಾಗುತ್ತದೆ. ಈ ಪದವಿಯನ್ನು ಪಡೆದಿರುವ ಡಾ. ಪ್ರದೀಪ್ ಕುಮಾರ್ ಆರ್ ಅವರಿಗೆ ದೊಡ್ಡಬಳ್ಳಾಪುರದ ಶಾಸಕರಾದ ಧೀರಜ್ ಮುನಿರಾಜ್, ಆರ್ಥಿಕ ತಜ್ಞರಾದ ಡಾ ಎಂ ಆರ್ ರಂಗನಾಥ, ಅವಧೂತ ಸ್ವಯಂ ಪೂರ್ಣಾನಂದ ಸ್ವಾಮೀಜಿ ಅವರು, ಗ್ಲೋಬಲ್ ಗ್ರೀನ್ ಎನರ್ಜಿ ಪ್ರವೈಟ್ ಲಿಮಿಟೆಡ್‌‌ನ‌ ನಿರ್ದೇಶಕ ಡಾ.ಪ್ರವೀಣ್ ನಾಯಕ್, ಸಿ ಎಂ ಎನ್ ಐಟಿ ಪ್ರಾಂಶುಪಾಲ ಡಾ ಕುಮಾರ್, ಸನಾತನ ಸೇವಾ ಸಂಘ ಕರ್ನಾಟಕ ಘಟಕದ ಅದ್ಯಕ್ಷರಾದ ನಾರಾಯಣ, ನಿವೃತ್ತ ಮುಖ್ಯ ಪಶು ವೈದ್ಯಾದಿಕಾರಿ ಡಾ ವಿಶ್ವ ನಟೇಶ್, ಕುಮುಟಾದ ಶಂಕರ ನಾರಾಯಣ ದೇವಾಳದ ಪುರೋಹಿತ ಗುರುದಾಸ್ ಭಟ್ ಸೇರಿದಂತೆ ಅನೇಕ ಅಭಿಮಾನಿಗಳು ಶುಭ ಹಾರೈಸಿದ್ದಾರೆ.

Ramesh Babu

Journalist

Recent Posts

ಬಿರಿಯಾನಿಗಾಗಿ ಮಿಡ್ ನೈಟ್ ರೈಡ್ ಬಂದವರು ದುರ್ಮರಣ

ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮಂಗಳೂರು…

1 hour ago

ಘಾಟಿ ಸುಬ್ರಹ್ಮಣ್ಯ ದೇಗುಲ ಸಮೀಪ ಚಿರತೆ ಪ್ರತ್ಯಕ್ಷ: ಬೆಚ್ಚಿಬಿದ್ದ ಜನ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲ ಕೂಗಳತೆ ದೂರದಲ್ಲೇ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ...…

6 hours ago

111.355 ಕೆ.ಜಿ ಗಾಂಜಾ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ…

22 hours ago

ಏ.12ಕ್ಕೆ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ರಾಜ್ಯಮಟ್ಟದ ಸಾಮಾನ್ಯ…

22 hours ago

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಪ್ರಾರಂಭಕ್ಕೆ ಕ್ರಮಕೈಗೊಳ್ಳಲು ಶಾಸಕ ಧೀರಜ್ ಮುನಿರಾಜ್ ಮನವಿ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ದೊಡ್ಡಬಳ್ಳಾಪುರದಲ್ಲಿ ಈ ಮೊದಲೇ ಅನುಮೋದನೆಗೊಂಡ ಜಿಲ್ಲಾಸ್ಪತ್ರೆಗೆ ಗುದ್ದಲಿಪೂಜೆ ಮಾಡಿ 2 ವರ್ಷವಾಗಿದೆ. ಈ ಬಾರಿಯಾದರೂ ಅನುದಾನ ನೀಡಿ ಜಿಲ್ಲಾಸ್ಪತ್ರೆ ಪ್ರಾರಂಭಿಸಲು…

23 hours ago

ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಗಂಡ ಕಿರುಕುಳ ಆರೋಪ: ಗಂಡನ ವಿರುದ್ಧ ಹೆಂಡತಿ ದೂರು

ಕೋಟಿ ವರದಕ್ಷಿಣೆ, ಕಿಯಾ ಕಾರು ಕೊಟ್ಟರು, ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಈ ಹಿನ್ನೆಲೆ ಗಂಡನ ವಿರುದ್ಧ ಹೆಂಡತಿ ದೂರು ನೀಡಿದ್ದಾರೆ...…

1 day ago