ಪತ್ರಕರ್ತ ಪ್ರದೀಪ್ ಕುಮಾರ್ ಗೆ ಪಿಎಚ್ ಡಿ ಪದವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪತ್ರಕರ್ತ ಪ್ರದೀಪ್ ಕುಮಾರ್ ಆರ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಮಲ್ಟಿ ಮೀಡಿಯ ಎಂಬ ವಿಷಯದಲ್ಲಿ ಮಂಡಿಸಿದ ಮಹಾ ಪ್ರಬಂಧಕ್ಕೆ  ಅಮೇರಿಕಾದ ಬೋಸ್ಟನ್ ಇಂಪೀರಿಯಲ್ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.

ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುನ್ನಡೆಸುವಲ್ಲಿ, ಸಮುದಾಯಗಳೊಂದಿಗೆ ಯುವಕರನ್ನು ಸಬಲೀಕರಣಗೊಳಿಸುವಲ್ಲಿ ಮತ್ತು ಸುಸ್ಥಿರ ಭಾರತದ ಬೆಳವಣಿಗೆಯನ್ನು ಉತ್ತೇಜಿಸುವಲ್ಲಿ ತಮ್ಮ ಅವಿರತ ಪ್ರಯತ್ನಗಳ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದರ ಪರಿಣಾಮವಾಗಿ ಈ ಪ್ರತಿಷ್ಠಿತ ಡಾಕ್ಟರೇಟ್ ಪದವಿಯನ್ನು ನೀಡಲಾಗಿದೆ.

ಮುಂದಿನ ತಿಂಗಳು ಏ.4 ರಂದು ಗೋವಾದಲ್ಲಿ ನಡೆಯಲಿರುವ ವಿಶ್ವ ವಿದ್ಯಾಲಯದ ಘಟಿಕೋತ್ಸವದಲ್ಲಿ ವಿತರಣೆಯಾಗುತ್ತದೆ. ಈ ಪದವಿಯನ್ನು ಪಡೆದಿರುವ ಡಾ. ಪ್ರದೀಪ್ ಕುಮಾರ್ ಆರ್ ಅವರಿಗೆ ದೊಡ್ಡಬಳ್ಳಾಪುರದ ಶಾಸಕರಾದ ಧೀರಜ್ ಮುನಿರಾಜ್, ಆರ್ಥಿಕ ತಜ್ಞರಾದ ಡಾ ಎಂ ಆರ್ ರಂಗನಾಥ, ಅವಧೂತ ಸ್ವಯಂ ಪೂರ್ಣಾನಂದ ಸ್ವಾಮೀಜಿ ಅವರು, ಗ್ಲೋಬಲ್ ಗ್ರೀನ್ ಎನರ್ಜಿ ಪ್ರವೈಟ್ ಲಿಮಿಟೆಡ್‌‌ನ‌ ನಿರ್ದೇಶಕ ಡಾ.ಪ್ರವೀಣ್ ನಾಯಕ್, ಸಿ ಎಂ ಎನ್ ಐಟಿ ಪ್ರಾಂಶುಪಾಲ ಡಾ ಕುಮಾರ್, ಸನಾತನ ಸೇವಾ ಸಂಘ ಕರ್ನಾಟಕ ಘಟಕದ ಅದ್ಯಕ್ಷರಾದ ನಾರಾಯಣ, ನಿವೃತ್ತ ಮುಖ್ಯ ಪಶು ವೈದ್ಯಾದಿಕಾರಿ ಡಾ ವಿಶ್ವ ನಟೇಶ್, ಕುಮುಟಾದ ಶಂಕರ ನಾರಾಯಣ ದೇವಾಳದ ಪುರೋಹಿತ ಗುರುದಾಸ್ ಭಟ್ ಸೇರಿದಂತೆ ಅನೇಕ ಅಭಿಮಾನಿಗಳು ಶುಭ ಹಾರೈಸಿದ್ದಾರೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

4 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

10 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

17 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

17 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago