ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪತ್ರಕರ್ತ ಪ್ರದೀಪ್ ಕುಮಾರ್ ಆರ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಮಲ್ಟಿ ಮೀಡಿಯ ಎಂಬ ವಿಷಯದಲ್ಲಿ ಮಂಡಿಸಿದ ಮಹಾ ಪ್ರಬಂಧಕ್ಕೆ ಅಮೇರಿಕಾದ ಬೋಸ್ಟನ್ ಇಂಪೀರಿಯಲ್ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.
ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುನ್ನಡೆಸುವಲ್ಲಿ, ಸಮುದಾಯಗಳೊಂದಿಗೆ ಯುವಕರನ್ನು ಸಬಲೀಕರಣಗೊಳಿಸುವಲ್ಲಿ ಮತ್ತು ಸುಸ್ಥಿರ ಭಾರತದ ಬೆಳವಣಿಗೆಯನ್ನು ಉತ್ತೇಜಿಸುವಲ್ಲಿ ತಮ್ಮ ಅವಿರತ ಪ್ರಯತ್ನಗಳ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದರ ಪರಿಣಾಮವಾಗಿ ಈ ಪ್ರತಿಷ್ಠಿತ ಡಾಕ್ಟರೇಟ್ ಪದವಿಯನ್ನು ನೀಡಲಾಗಿದೆ.
ಮುಂದಿನ ತಿಂಗಳು ಏ.4 ರಂದು ಗೋವಾದಲ್ಲಿ ನಡೆಯಲಿರುವ ವಿಶ್ವ ವಿದ್ಯಾಲಯದ ಘಟಿಕೋತ್ಸವದಲ್ಲಿ ವಿತರಣೆಯಾಗುತ್ತದೆ. ಈ ಪದವಿಯನ್ನು ಪಡೆದಿರುವ ಡಾ. ಪ್ರದೀಪ್ ಕುಮಾರ್ ಆರ್ ಅವರಿಗೆ ದೊಡ್ಡಬಳ್ಳಾಪುರದ ಶಾಸಕರಾದ ಧೀರಜ್ ಮುನಿರಾಜ್, ಆರ್ಥಿಕ ತಜ್ಞರಾದ ಡಾ ಎಂ ಆರ್ ರಂಗನಾಥ, ಅವಧೂತ ಸ್ವಯಂ ಪೂರ್ಣಾನಂದ ಸ್ವಾಮೀಜಿ ಅವರು, ಗ್ಲೋಬಲ್ ಗ್ರೀನ್ ಎನರ್ಜಿ ಪ್ರವೈಟ್ ಲಿಮಿಟೆಡ್ನ ನಿರ್ದೇಶಕ ಡಾ.ಪ್ರವೀಣ್ ನಾಯಕ್, ಸಿ ಎಂ ಎನ್ ಐಟಿ ಪ್ರಾಂಶುಪಾಲ ಡಾ ಕುಮಾರ್, ಸನಾತನ ಸೇವಾ ಸಂಘ ಕರ್ನಾಟಕ ಘಟಕದ ಅದ್ಯಕ್ಷರಾದ ನಾರಾಯಣ, ನಿವೃತ್ತ ಮುಖ್ಯ ಪಶು ವೈದ್ಯಾದಿಕಾರಿ ಡಾ ವಿಶ್ವ ನಟೇಶ್, ಕುಮುಟಾದ ಶಂಕರ ನಾರಾಯಣ ದೇವಾಳದ ಪುರೋಹಿತ ಗುರುದಾಸ್ ಭಟ್ ಸೇರಿದಂತೆ ಅನೇಕ ಅಭಿಮಾನಿಗಳು ಶುಭ ಹಾರೈಸಿದ್ದಾರೆ.
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…
ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…