ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪತ್ರಕರ್ತ ಪ್ರದೀಪ್ ಕುಮಾರ್ ಆರ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಮಲ್ಟಿ ಮೀಡಿಯ ಎಂಬ ವಿಷಯದಲ್ಲಿ ಮಂಡಿಸಿದ ಮಹಾ ಪ್ರಬಂಧಕ್ಕೆ ಅಮೇರಿಕಾದ ಬೋಸ್ಟನ್ ಇಂಪೀರಿಯಲ್ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.
ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುನ್ನಡೆಸುವಲ್ಲಿ, ಸಮುದಾಯಗಳೊಂದಿಗೆ ಯುವಕರನ್ನು ಸಬಲೀಕರಣಗೊಳಿಸುವಲ್ಲಿ ಮತ್ತು ಸುಸ್ಥಿರ ಭಾರತದ ಬೆಳವಣಿಗೆಯನ್ನು ಉತ್ತೇಜಿಸುವಲ್ಲಿ ತಮ್ಮ ಅವಿರತ ಪ್ರಯತ್ನಗಳ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದರ ಪರಿಣಾಮವಾಗಿ ಈ ಪ್ರತಿಷ್ಠಿತ ಡಾಕ್ಟರೇಟ್ ಪದವಿಯನ್ನು ನೀಡಲಾಗಿದೆ.
ಮುಂದಿನ ತಿಂಗಳು ಏ.4 ರಂದು ಗೋವಾದಲ್ಲಿ ನಡೆಯಲಿರುವ ವಿಶ್ವ ವಿದ್ಯಾಲಯದ ಘಟಿಕೋತ್ಸವದಲ್ಲಿ ವಿತರಣೆಯಾಗುತ್ತದೆ. ಈ ಪದವಿಯನ್ನು ಪಡೆದಿರುವ ಡಾ. ಪ್ರದೀಪ್ ಕುಮಾರ್ ಆರ್ ಅವರಿಗೆ ದೊಡ್ಡಬಳ್ಳಾಪುರದ ಶಾಸಕರಾದ ಧೀರಜ್ ಮುನಿರಾಜ್, ಆರ್ಥಿಕ ತಜ್ಞರಾದ ಡಾ ಎಂ ಆರ್ ರಂಗನಾಥ, ಅವಧೂತ ಸ್ವಯಂ ಪೂರ್ಣಾನಂದ ಸ್ವಾಮೀಜಿ ಅವರು, ಗ್ಲೋಬಲ್ ಗ್ರೀನ್ ಎನರ್ಜಿ ಪ್ರವೈಟ್ ಲಿಮಿಟೆಡ್ನ ನಿರ್ದೇಶಕ ಡಾ.ಪ್ರವೀಣ್ ನಾಯಕ್, ಸಿ ಎಂ ಎನ್ ಐಟಿ ಪ್ರಾಂಶುಪಾಲ ಡಾ ಕುಮಾರ್, ಸನಾತನ ಸೇವಾ ಸಂಘ ಕರ್ನಾಟಕ ಘಟಕದ ಅದ್ಯಕ್ಷರಾದ ನಾರಾಯಣ, ನಿವೃತ್ತ ಮುಖ್ಯ ಪಶು ವೈದ್ಯಾದಿಕಾರಿ ಡಾ ವಿಶ್ವ ನಟೇಶ್, ಕುಮುಟಾದ ಶಂಕರ ನಾರಾಯಣ ದೇವಾಳದ ಪುರೋಹಿತ ಗುರುದಾಸ್ ಭಟ್ ಸೇರಿದಂತೆ ಅನೇಕ ಅಭಿಮಾನಿಗಳು ಶುಭ ಹಾರೈಸಿದ್ದಾರೆ.
2016ರಲ್ಲಿ ಧಾರವಾಡದಲ್ಲಿ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡ ಹತ್ಯೆ ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ಹಾಗೂ ಹಾಲಿ…
ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್ಗಳನ್ನು…
ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…
2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ…
ಸಾಸಲು ಚಿನ್ನಮ್ಮ ಉತ್ಸವ ಸಮಿತಿ ವತಿಯಿಂದ ಸಾಸಲು ಚಿನ್ನಮ್ಮ ಉತ್ಸವ-2026 ಕಾರ್ಯಕ್ರಮವನ್ನು ಏ.19ರ ಭಾನುವಾರದಂದು ತಾಲೂಕಿನ ಸಾಸಲು ಗ್ರಾಮದ ಡಾ.ಬಿ.ಆರ್…