ದೊಡ್ಡಬಳ್ಳಾಪುರ : ಭಾರತ ಸಂವಿಧಾನ ಸಮರ್ಪಣಾ ದಿನ ಮತ್ತು ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಕರ್ನಾಟಕ ಜ್ಞಾನ-ವಿಜ್ಞಾನ ಸಮಿತಿಯು ದಿನಾಂಕ: 6/12/2025 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ದೊಡ್ಡಬಳ್ಳಾಪುರ ನಗರದಲ್ಲಿರುವ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಆಯೋಜಿಸಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ತೂಬಗೆರೆ ಷರೀಫ್ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಪ್ರತಿ ಪದವಿ ಪೂರ್ವ ಕಾಲೇಜಿನಿಂದ ಇಬ್ಬರು(2) ವಿಧ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು, ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದು ಅನುಮತಿ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿವರಗಳು
ಸ್ಪರ್ಧೆಯ ದಿನ (ಡಿ.6) ಒಂದು ಗಂಟೆ ಮುಂಚಿತವಾಗಿ ತಮ್ಮ ಕಾಲೇಜಿನ ಮುಖ್ಯಸ್ಥರು/ಪ್ರಾಂಶುಪಾಲರಿಂದ ದೃಢೀಕರಣ ಪತ್ರದೊಂದಿಗೆ ಕಾಲೇಜು ನೀಡಿರುವ ಗುರುತಿನ ಚೀಟಿಯೊಂದಿಗೆ ಪ್ರಬಂಧ ಸ್ಪರ್ಧೆ ನಡೆಯುವ ಸ್ಥಳಕ್ಕೆ ಆಗಮಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು
ಬಹುಮಾನ
ಪ್ರಥಮ ಬಹುಮಾನವಾಗಿ
ರೂ 5000 ಸಾವಿರ
ದ್ವಿತೀಯ ಬಹುಮಾನ – ರೂ. 3000 ಸಾವಿರ
ತೃತೀಯ ರೂ. 2000 ಸಾವಿರ ಹಾಗೂ ಐದು ಸಮಾಧಾನಕರ ತಲಾ 1000 ರೂಗಳ
ಬಹುಮಾನಗಳೊಂದಿಗೆ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು.
ವಿಜೇತರಿಗೆ ದಿನಾಂಕ 10/12/2025 ರ ಬುಧವಾರ ಬೆಳಿಗ್ಗೆ 11 ಗಂಟೆಗೆ ದೊಡ್ಡಬಳ್ಳಾಪುರ ನಗರದಲ್ಲಿರುವ ಕನ್ನಡ ಜಾಗೃತ ಭವನದಲ್ಲಿ ನಡೆಯಲಿರುವ ಸಂವಿಧಾನ ಸಮರ್ಪಣಾ ದಿನ ಹಾಗೂ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಬಹುಮಾನವನ್ನು ವಿತರಿಸಲಾಗುವುದು.
ಪ್ರಬಂಧದ ವಿಷಯ
ಭಾರತ ಸಂವಿಧಾನದ ಮಹತ್ವ, ಲಕ್ಷಣಗಳು ಮತ್ತು ಮೂಲಭೂತ ಹಕ್ಕುಗಳು.
ನಿಬಂಧನೆಗಳು:-
1. ಕಾಲೇಜು ಮುಖ್ಯಸ್ಥರ/ಪ್ರಾಂಶುಪಾಲರ ದೃಢೀಕರಣ ಪತ್ರ ಹಾಗೂ ವಿಧ್ಯಾರ್ಥಿಗಳ ಗುರುತಿನ ಚೀಟಿ ಕಡ್ಡಾಯವಾಗಿ ತರತಕ್ಕದ್ದು.
2. ಪ್ರಬಂಧವು 10 ಪುಟಗಳು ಮೀರದಂತಿರಬೇಕು.
3. ಪರೀಕ್ಷಾ ಕೊಠಡಿಯೊಳಗೆ 15 ನಿಮಿಷ ಮುಂಚಿತವಾಗಿ ಹಾಜರಿರತಕ್ಕದ್ದು.
4. ಪರೀಕ್ಷಾ ಕೊಠಡಿಯೊಳಗೆ ಪೇಪರ್ ಮತ್ತು ಪೆನ್ನು ತರುವಂತಿಲ್ಲ.
5. ನಿಮ್ಮ ಬ್ಯಾಗು, ಲಗೇಜು, ಹಾಗೂ ಮೊಬೈಲ್ ಕೊಠಡಿಯೊಳಗೆ ತರುವಂತಿಲ್ಲ.
6. ಪ್ರಬಂಧ ಸ್ಪರ್ಧೆಯ ಸಮಯದ ಮಧ್ಯೆ ಯಾರೂ ಎದ್ದು ಹೋಗುವಂತಿಲ್ಲ.
7. ಭಾಗವಹಿಸುವ ವಿಧ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಬಂದು ಹೋಗತಕ್ಕದ್ದು.
ಪ್ರಬಂಧ ಸ್ಪರ್ಧೆ ಮುಗಿದ ನಂತರ ವಿದ್ಯಾರ್ಥಿಗಳಿಗೆ ಲಘು ಉಪಹಾರದ ವ್ಯವಸ್ಥೆ ಇರುತ್ತದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ
ತೂಬಗೆರೆಷರೀಫ್ 9343717770
ರಾಜುಸಣ್ಣಕ್ಕಿ 9986573503 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ಸೂಚಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…