ಪದವೀಧರರ ಧ್ವನಿಯಾಗಿ ಕೆಲಸ ಮಾಡಲು ಉದಯ ಸಿಂಗ್ ಅವರಿಗೆ ಮತ ನೀಡಿ- ಕರಾವೈಸಪ ಅಧ್ಯಕ್ಷ ಹುಲಿಕಲ್ ನಟರಾಜ್ ಮನವಿ

ಹಲವಾರು ವರ್ಷಗಳಿಂದ ಪದವೀಧರರ ಪ್ರತಿನಿಧಿಗಳು ಎಂದು ಸುಳ್ಳು ಹೇಳಿ ಪದವೀಧರರ ಕಷ್ಟಕಾಲದಲ್ಲಿ ನೆರವಿಗೆ ಬಾರದ ಜನಪ್ರತಿನಿಧಿಗಳ ವಿರುದ್ಧ ಉದಯಸಿಂಗ್ ಅವರು ಪದವೀಧರರ ಧ್ವನಿಯಾಗಿ ಶ್ರಮಿಸಲು ಚುನಾವಣೆಗೆ ಸ್ಪರ್ಧಿಸಿದ್ದಾರೆ. ದಯವಿಟ್ಟು ಅವರಿಗೆ ಮತ ನೀಡಿ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಅಧ್ಯಕ್ಷ ಹುಲಿಕಲ್ ನಟರಾಜು ಅವರು ಮತದಾರರಲ್ಲಿ ಮನವಿ ಮಾಡಿದರು.

ನಗರದ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಕಚೇರಿಯಲ್ಲಿ ಶುಕ್ರವಾರ ನಡೆದ ಚುನಾವಣೆ ಪ್ರಚಾರದಲ್ಲಿ ಅವರು ಮಾತನಾಡಿದರು.

ಪದವೀಧರರ ಕಷ್ಟಗಳಿಗೆ ಸ್ಪಂದಿಸದ ಜನಪ್ರತಿನಿಧಿಗಳನ್ನು ಕಂಡ ಪದವೀಧರರು ಈ ಬಾರಿ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಲು ಮುಂದಾಗಿದ್ದಾರೆ. ಉದಯ‌ಸಿಂಗ್ ಅವರು ಪದವೀಧರರ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಪದವೀಧರರ ಕಷ್ಟಗಳನ್ನು ಸರ್ಕಾರಕ್ಕೆ ಅರಿವು ಮೂಡಿಸುವ ಕೆಲಸವನ್ನು ಅವರು ಮಾಡಲಿದ್ದಾರೆ ಎಂದರು.

ನಿರಂತರ ಸಾಮಾಜಿಕ ಚಟುವಟಿಕೆಗಳ ಜತೆಗೆ ಪದವೀಧರರ ಕಷ್ಟಗಳಿಗೆ ಸ್ಪಂದಿಸಲಿದ್ದಾರೆ. ಈಗಾಗಲೇ ಕ್ಷೇತ್ರದಾದ್ಯಂತ ಪ್ರಚಾರ ನಡೆಸುತ್ತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಪದವೀಧರರು ತಮ್ಮ ಹಕ್ಕುಗಳಿಗಾಗಿ ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ಮತ ಚಲಾಯಿಸಬೇಕು ಎಂದರು.

ರಾಷ್ಟೀಯ ಪಕ್ಷದ ಅಡಿಯಲ್ಲಿ ಸ್ಪರ್ಧಿಸುವ  ರಾಜಕಾರಣಿಗಳಿಗೆ ಈ ಚುನಾವಣೆ ಪಾಠಕಲಿಸಬೇಕಿದೆ. ಕೇವಲ ಚುನಾವಣೆ ನೆಪಕ್ಕೆ ಮಾತ್ರ ಪದವೀಧರರನ್ನು  ಸಂಪರ್ಕಿಸುವವರನ್ನು ಸೋಲಿಸಿ ಸಾಮಾಜಿಕವಾಗಿ ಕೆಲಸ ಮಾಡುವವರನ್ನು ಬೆಂಬಲಿಸಿ. ಉದಯ್ ಸಿಂಗ್ ಅವರು ಕರೋನ ಸಮಯದಲ್ಲಿ ಪದವೀಧರರ ನೆರವಿಗೆ ನಿಂತಿದ್ದು, ಸಾಕಷ್ಟು ಕಷ್ಟ ನೋವುಗಳನ್ನು ಆಲಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ನಿಮ್ಮೆಲ್ಲರ ಧ್ವನಿಯಾಗಲು ಸಮಾನ ಮನಸ್ಕರೆಲ್ಲ ಮತದಾನ ಮಾಡಿ ಎಂದು ತಿಳಿಸಿದರು.

ಮುಖಂಡ ಮಧುಕುಮಾರ್ ಮಾತನಾಡಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ  ಕೇವಲ 61 ಸಾವಿರ ಮತಗಳು ಮಾತ್ರ ನೋಂದಣಿಯಾಗಿದ್ದವು. ಉದಯ್ ಸಿಂಗ್‌ರ ಸಾಮಾಜಿಕ ಕೆಲಸದ ಜೊತೆ ಪದವೀಧರರ ಕ್ಷೇತ್ರದ ಚುನಾವಣೆ ಬಗ್ಗೆ ಅರಿವು ಮೂಡಿಸಿ 1 ಲಕ್ಷದ 30 ಸಾವಿರ ಮತದಾರರನ್ನು ನೋಂದಣಿ ಮಾಡಿಸಲು ಶ್ರಮಿಸಿದ್ದಾರೆ.  ಬೆಂಗಳೂರು  ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಈಗಾಗಲೇ ಮಾಧ್ಯಮಗಳ ಸಮೀಕ್ಷೆ ಪ್ರಕಾರ ಉದಯ್ ಸಿಂಗ್ ಅವರ ಗೆಲ್ಲುವ ಸೂಚನೆ ನೀಡಲಾಗಿದೆ ಎಂದರು.

ಈ ವೇಳೆ ರಾಜ್ಯ  ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಉಪಾಧ್ಯಕ್ಷ ಡಾ. ಶ್ರೀರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಚಿಕ್ಕ ಹನುಂತೇಗೌಡ, ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

11 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

11 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

19 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

1 day ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

2 days ago