ಪದವೀಧರರ ಧ್ವನಿಯಾಗಿ ಕೆಲಸ ಮಾಡಲು ಉದಯ ಸಿಂಗ್ ಅವರಿಗೆ ಮತ ನೀಡಿ- ಕರಾವೈಸಪ ಅಧ್ಯಕ್ಷ ಹುಲಿಕಲ್ ನಟರಾಜ್ ಮನವಿ

ಹಲವಾರು ವರ್ಷಗಳಿಂದ ಪದವೀಧರರ ಪ್ರತಿನಿಧಿಗಳು ಎಂದು ಸುಳ್ಳು ಹೇಳಿ ಪದವೀಧರರ ಕಷ್ಟಕಾಲದಲ್ಲಿ ನೆರವಿಗೆ ಬಾರದ ಜನಪ್ರತಿನಿಧಿಗಳ ವಿರುದ್ಧ ಉದಯಸಿಂಗ್ ಅವರು ಪದವೀಧರರ ಧ್ವನಿಯಾಗಿ ಶ್ರಮಿಸಲು ಚುನಾವಣೆಗೆ ಸ್ಪರ್ಧಿಸಿದ್ದಾರೆ. ದಯವಿಟ್ಟು ಅವರಿಗೆ ಮತ ನೀಡಿ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಅಧ್ಯಕ್ಷ ಹುಲಿಕಲ್ ನಟರಾಜು ಅವರು ಮತದಾರರಲ್ಲಿ ಮನವಿ ಮಾಡಿದರು.

ನಗರದ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಕಚೇರಿಯಲ್ಲಿ ಶುಕ್ರವಾರ ನಡೆದ ಚುನಾವಣೆ ಪ್ರಚಾರದಲ್ಲಿ ಅವರು ಮಾತನಾಡಿದರು.

ಪದವೀಧರರ ಕಷ್ಟಗಳಿಗೆ ಸ್ಪಂದಿಸದ ಜನಪ್ರತಿನಿಧಿಗಳನ್ನು ಕಂಡ ಪದವೀಧರರು ಈ ಬಾರಿ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಲು ಮುಂದಾಗಿದ್ದಾರೆ. ಉದಯ‌ಸಿಂಗ್ ಅವರು ಪದವೀಧರರ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಪದವೀಧರರ ಕಷ್ಟಗಳನ್ನು ಸರ್ಕಾರಕ್ಕೆ ಅರಿವು ಮೂಡಿಸುವ ಕೆಲಸವನ್ನು ಅವರು ಮಾಡಲಿದ್ದಾರೆ ಎಂದರು.

ನಿರಂತರ ಸಾಮಾಜಿಕ ಚಟುವಟಿಕೆಗಳ ಜತೆಗೆ ಪದವೀಧರರ ಕಷ್ಟಗಳಿಗೆ ಸ್ಪಂದಿಸಲಿದ್ದಾರೆ. ಈಗಾಗಲೇ ಕ್ಷೇತ್ರದಾದ್ಯಂತ ಪ್ರಚಾರ ನಡೆಸುತ್ತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಪದವೀಧರರು ತಮ್ಮ ಹಕ್ಕುಗಳಿಗಾಗಿ ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ಮತ ಚಲಾಯಿಸಬೇಕು ಎಂದರು.

ರಾಷ್ಟೀಯ ಪಕ್ಷದ ಅಡಿಯಲ್ಲಿ ಸ್ಪರ್ಧಿಸುವ  ರಾಜಕಾರಣಿಗಳಿಗೆ ಈ ಚುನಾವಣೆ ಪಾಠಕಲಿಸಬೇಕಿದೆ. ಕೇವಲ ಚುನಾವಣೆ ನೆಪಕ್ಕೆ ಮಾತ್ರ ಪದವೀಧರರನ್ನು  ಸಂಪರ್ಕಿಸುವವರನ್ನು ಸೋಲಿಸಿ ಸಾಮಾಜಿಕವಾಗಿ ಕೆಲಸ ಮಾಡುವವರನ್ನು ಬೆಂಬಲಿಸಿ. ಉದಯ್ ಸಿಂಗ್ ಅವರು ಕರೋನ ಸಮಯದಲ್ಲಿ ಪದವೀಧರರ ನೆರವಿಗೆ ನಿಂತಿದ್ದು, ಸಾಕಷ್ಟು ಕಷ್ಟ ನೋವುಗಳನ್ನು ಆಲಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ನಿಮ್ಮೆಲ್ಲರ ಧ್ವನಿಯಾಗಲು ಸಮಾನ ಮನಸ್ಕರೆಲ್ಲ ಮತದಾನ ಮಾಡಿ ಎಂದು ತಿಳಿಸಿದರು.

ಮುಖಂಡ ಮಧುಕುಮಾರ್ ಮಾತನಾಡಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ  ಕೇವಲ 61 ಸಾವಿರ ಮತಗಳು ಮಾತ್ರ ನೋಂದಣಿಯಾಗಿದ್ದವು. ಉದಯ್ ಸಿಂಗ್‌ರ ಸಾಮಾಜಿಕ ಕೆಲಸದ ಜೊತೆ ಪದವೀಧರರ ಕ್ಷೇತ್ರದ ಚುನಾವಣೆ ಬಗ್ಗೆ ಅರಿವು ಮೂಡಿಸಿ 1 ಲಕ್ಷದ 30 ಸಾವಿರ ಮತದಾರರನ್ನು ನೋಂದಣಿ ಮಾಡಿಸಲು ಶ್ರಮಿಸಿದ್ದಾರೆ.  ಬೆಂಗಳೂರು  ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಈಗಾಗಲೇ ಮಾಧ್ಯಮಗಳ ಸಮೀಕ್ಷೆ ಪ್ರಕಾರ ಉದಯ್ ಸಿಂಗ್ ಅವರ ಗೆಲ್ಲುವ ಸೂಚನೆ ನೀಡಲಾಗಿದೆ ಎಂದರು.

ಈ ವೇಳೆ ರಾಜ್ಯ  ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಉಪಾಧ್ಯಕ್ಷ ಡಾ. ಶ್ರೀರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಚಿಕ್ಕ ಹನುಂತೇಗೌಡ, ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

8 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

11 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

11 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

12 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

13 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

18 hours ago