ಪದವೀಧರರ ಧ್ವನಿಯಾಗಿ ಕೆಲಸ ಮಾಡಲು ಉದಯ ಸಿಂಗ್ ಅವರಿಗೆ ಮತ ನೀಡಿ- ಕರಾವೈಸಪ ಅಧ್ಯಕ್ಷ ಹುಲಿಕಲ್ ನಟರಾಜ್ ಮನವಿ

ಹಲವಾರು ವರ್ಷಗಳಿಂದ ಪದವೀಧರರ ಪ್ರತಿನಿಧಿಗಳು ಎಂದು ಸುಳ್ಳು ಹೇಳಿ ಪದವೀಧರರ ಕಷ್ಟಕಾಲದಲ್ಲಿ ನೆರವಿಗೆ ಬಾರದ ಜನಪ್ರತಿನಿಧಿಗಳ ವಿರುದ್ಧ ಉದಯಸಿಂಗ್ ಅವರು ಪದವೀಧರರ ಧ್ವನಿಯಾಗಿ ಶ್ರಮಿಸಲು ಚುನಾವಣೆಗೆ ಸ್ಪರ್ಧಿಸಿದ್ದಾರೆ. ದಯವಿಟ್ಟು ಅವರಿಗೆ ಮತ ನೀಡಿ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಅಧ್ಯಕ್ಷ ಹುಲಿಕಲ್ ನಟರಾಜು ಅವರು ಮತದಾರರಲ್ಲಿ ಮನವಿ ಮಾಡಿದರು.

ನಗರದ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಕಚೇರಿಯಲ್ಲಿ ಶುಕ್ರವಾರ ನಡೆದ ಚುನಾವಣೆ ಪ್ರಚಾರದಲ್ಲಿ ಅವರು ಮಾತನಾಡಿದರು.

ಪದವೀಧರರ ಕಷ್ಟಗಳಿಗೆ ಸ್ಪಂದಿಸದ ಜನಪ್ರತಿನಿಧಿಗಳನ್ನು ಕಂಡ ಪದವೀಧರರು ಈ ಬಾರಿ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಲು ಮುಂದಾಗಿದ್ದಾರೆ. ಉದಯ‌ಸಿಂಗ್ ಅವರು ಪದವೀಧರರ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಪದವೀಧರರ ಕಷ್ಟಗಳನ್ನು ಸರ್ಕಾರಕ್ಕೆ ಅರಿವು ಮೂಡಿಸುವ ಕೆಲಸವನ್ನು ಅವರು ಮಾಡಲಿದ್ದಾರೆ ಎಂದರು.

ನಿರಂತರ ಸಾಮಾಜಿಕ ಚಟುವಟಿಕೆಗಳ ಜತೆಗೆ ಪದವೀಧರರ ಕಷ್ಟಗಳಿಗೆ ಸ್ಪಂದಿಸಲಿದ್ದಾರೆ. ಈಗಾಗಲೇ ಕ್ಷೇತ್ರದಾದ್ಯಂತ ಪ್ರಚಾರ ನಡೆಸುತ್ತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಪದವೀಧರರು ತಮ್ಮ ಹಕ್ಕುಗಳಿಗಾಗಿ ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ಮತ ಚಲಾಯಿಸಬೇಕು ಎಂದರು.

ರಾಷ್ಟೀಯ ಪಕ್ಷದ ಅಡಿಯಲ್ಲಿ ಸ್ಪರ್ಧಿಸುವ  ರಾಜಕಾರಣಿಗಳಿಗೆ ಈ ಚುನಾವಣೆ ಪಾಠಕಲಿಸಬೇಕಿದೆ. ಕೇವಲ ಚುನಾವಣೆ ನೆಪಕ್ಕೆ ಮಾತ್ರ ಪದವೀಧರರನ್ನು  ಸಂಪರ್ಕಿಸುವವರನ್ನು ಸೋಲಿಸಿ ಸಾಮಾಜಿಕವಾಗಿ ಕೆಲಸ ಮಾಡುವವರನ್ನು ಬೆಂಬಲಿಸಿ. ಉದಯ್ ಸಿಂಗ್ ಅವರು ಕರೋನ ಸಮಯದಲ್ಲಿ ಪದವೀಧರರ ನೆರವಿಗೆ ನಿಂತಿದ್ದು, ಸಾಕಷ್ಟು ಕಷ್ಟ ನೋವುಗಳನ್ನು ಆಲಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ನಿಮ್ಮೆಲ್ಲರ ಧ್ವನಿಯಾಗಲು ಸಮಾನ ಮನಸ್ಕರೆಲ್ಲ ಮತದಾನ ಮಾಡಿ ಎಂದು ತಿಳಿಸಿದರು.

ಮುಖಂಡ ಮಧುಕುಮಾರ್ ಮಾತನಾಡಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ  ಕೇವಲ 61 ಸಾವಿರ ಮತಗಳು ಮಾತ್ರ ನೋಂದಣಿಯಾಗಿದ್ದವು. ಉದಯ್ ಸಿಂಗ್‌ರ ಸಾಮಾಜಿಕ ಕೆಲಸದ ಜೊತೆ ಪದವೀಧರರ ಕ್ಷೇತ್ರದ ಚುನಾವಣೆ ಬಗ್ಗೆ ಅರಿವು ಮೂಡಿಸಿ 1 ಲಕ್ಷದ 30 ಸಾವಿರ ಮತದಾರರನ್ನು ನೋಂದಣಿ ಮಾಡಿಸಲು ಶ್ರಮಿಸಿದ್ದಾರೆ.  ಬೆಂಗಳೂರು  ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಈಗಾಗಲೇ ಮಾಧ್ಯಮಗಳ ಸಮೀಕ್ಷೆ ಪ್ರಕಾರ ಉದಯ್ ಸಿಂಗ್ ಅವರ ಗೆಲ್ಲುವ ಸೂಚನೆ ನೀಡಲಾಗಿದೆ ಎಂದರು.

ಈ ವೇಳೆ ರಾಜ್ಯ  ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಉಪಾಧ್ಯಕ್ಷ ಡಾ. ಶ್ರೀರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಚಿಕ್ಕ ಹನುಂತೇಗೌಡ, ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

6 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

9 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

10 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

18 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago